Advertisement
ನಮ್ಮೂರ ಸುದ್ದಿ

ಪಂಜ : ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಸಸಿ ವಿತರಣೆ

Share

ಪಂಜ: ಜೇಸಿಐ ಪಂಜ ಪಂಚಶ್ರೀ ವತಿಯಿಂದ ಸರಕಾರಿ ಪಾಡಿಗದ್ದೆ ಶಾಲೆಯಲ್ಲಿ “ವಿಶ್ವ ಪರಿಸರ ದಿನಾಚರಣೆ ಪ್ರಯುಕ್ರ ಹಣ್ಣಿನ ಗಿಡಗಳ ವಿತರಣೆ ಹಾಗೂ ಕಳೆದ ವರುಷಗಳಲ್ಲಿ ನೆಟ್ಟ ಗಿಡಗಳಿಗೆ ಗೊಬ್ಬರ ಹಾಕಿ ಪೋಷಣೆ” ಕಾರ್ಯಕ್ರಮವು ನಡೆಯಿತು.
ಸಂಪನ್ಮೂಲ ವ್ಯಕ್ರಿ ಜೇಸಿಐ ಭಾರತದ ವಲಯ ತರಬೇತುದಾರ ರಾದ ಜೇಸಿ ತೀರ್ಥನಂದ ಕೊಡಂಕಿರಿ ಹಣ್ಣಿನ ಗಿಡವನ್ನು ಮುಖ್ಯ ಶಿಕ್ಷಕಿ ಧರ್ಮವತಿ.ಟಿ .ಇವರಿಗೆ ಹಸ್ತಾತರಿಸುವ ಮೂಲಕ ಕಾರ್ಯಕ್ರಮ ವನ್ನು ಉದ್ಘಾಟಿಸಿ ಮಾತನಾಡಿ “ಮನುಷ್ಯ ತನ್ನ ಸ್ವಾರ್ಥಕ್ಕಾಗಿ ಮರಗಿಡಗಳನ್ನು ನಾಶ ಮಾಡುವ ಮೂಲಕ ಪರಿಸರವನ್ನು ಹಾಳು ಮಾಡುತ್ತಿದ್ದು, ಈಗಾಗಲೇ ಎಚ್ಚೆತ್ತು ಕೊಳ್ಳದಿದ್ದರೆ ಅಲ್ಲಲಿ ಸಂಭವಿಸುತ್ತಿರುವ ಪ್ರಕೃತಿ ವಿಕೋಪದ ಜತೆಗೆ ಮತ್ತಷ್ಟು ವಿಕೋಪ ಗಳನ್ನು ಎದುರಿಸಬೇಕಾ ಗುತ್ತದೆ” ಎಂದು ಪರಿಸರದ ಉಳಿವಿನ ಮಹತ್ವವ ನ್ನು ವಿವರಿಸಿದರು.
ವೇದಿಕೆಯಲ್ಲಿ ಜೇಸಿಐ ಪಂಜ ಪಂಚಶ್ರಿಯ ಅಧ್ಯಕ್ಷರಾದ ಜೇಸಿ ವಾಸುದೇವ ಮೇಲ್ಪಾಡಿ ಸಭಾಧ್ಯಕ್ಷತೆ ವಹಿಸಿ ಸ್ವಾಗತಿಸಿದರು. ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ವಾಚಣ್ಣ ಕೆರೆಮೂಲೆ, ಶಾಲಾ ಮುಖ್ಯ ಶಿಕ್ಷಕಿ ಧರ್ಮವತಿ.ಟಿ., ಪಂಜ ಕ್ಲಸ್ಟರ್‍ನ ಸಮೂಹ ಸಂಪನ್ಮೂಲ ವ್ಯಕ್ತಿ ಯಶೋಧರ.ಕೆ. ವೇದಿಕೆಯಲ್ಲಿದ್ದರು. ಮುಖ್ಯ ಶಿಕ್ಷಕಿ ಮಾತನಾಡಿ ಜೇಸಿಐ ಪಂಜ ಪಂಚಶ್ರೀಯ ಈ ಕಾರ್ಯಕ್ರಮ ಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಜೇಸಿ ಶಿವಪ್ರಸಾದ್ ಹಾಳೆಮಜಲು ಅಥಿತಿಗಳನ್ನು ವೇದಿಕೆಗೆ ಆಹ್ವಾನಿಸಿದ ರು. ಜೇಸಿ ನಾಗಮಣಿ ಕೆದಿಲ ಜೇಸಿ ವಾಣಿ ವಾಚಿಸಿದರು. ಕಾರ್ಯದರ್ಶಿ ಪ್ರವೀಣ್ ಕಾಯರ ವಂದಿಸಿದರು.
ಸ್ಥಾಪಕಾಧ್ಯಕ್ಷ ಜೇಸಿ ದೇವಿಪ್ರಸಾದ್ ಜಾಕೆ, ಜೇಸಿ ಷಣ್ಮುಖ ಕಟ್ಟ, ಶಾಲಾ ಎಸ್.ಡಿ.ಎಮ್.ಸಿ ಸದಸ್ಯರುಗಳು ಪೋಷಕರು ಹಾಗೂ ಎಲ್ಲಾ ಮಕ್ಕಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಸುಮಾರು 90 ಹಣ್ಣಿನ ಗಿಡಗಳನ್ನು ಎಲ್ಲಾ ವಿದ್ಯಾರ್ಥಿಗಳ ಮನೆಗೆ ಹಂಚಲಾಯಿತು. ಹಾಗೂ ಕಳೆದ ವರ್ಷ ನೆಟ್ಟ ಗಿಡಗಳಿಗೆ ಗೊಬ್ಬರ ಹಾಕಿ ಪೋಷಣೆ ಮಾಡಲಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ

2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…

9 hours ago

ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ

ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…

10 hours ago

ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ

ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…

11 hours ago

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

20 hours ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

22 hours ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

1 day ago