ಪಂಜ: ಮೂರು ದಿನಗಳ ಹಿಂದೆ ಪಾಲ ದಾಟುತ್ತಿದ್ದಾಗ ಹೊಳೆಗೆ ಬಿದ್ದು ನೀರಿನಲ್ಲಿ ಕೊಚ್ಚಿ ಹೋಗಿದ್ದ ಕುದ್ವ ಶೇಷಪ್ಪ ಗೌಡ ಅವರ ಮೃತದೇಹ ಶುಕ್ರವಾರ ಸಂಜೆ ಪತ್ತೆಯಾಗಿದೆ.
ಔಷಧಿ ತರಲೆಂದು ಪಂಜಕ್ಕೆ ಹೋಗಿ ಬರುತ್ತೇನೆ ಎಂದು ಮನೆಯಲ್ಲಿ ಹೇಳಿ ಹೋದವರು ಬಂದಿರಲಿಲ್ಲ. ಬಳಿಕ ಮನೆಯವರು ಹುಡುಕಾಡಿದಾಗ ಪಾಲದ ಬಳಿ ಚಪ್ಪಲು ಹಾಗೂ ನೀರಿಗೆ ಬಿದ್ದಿರುವ ಶಂಕೆ ವ್ಯಕ್ತಪಡಿಸಿದ್ದರು. ಹೀಗಾಗಿ ಪಂಜದಿಂದ ಬರುತ್ತಿದ್ದಾಗ ಪಾಲ ಜಾರಿ ಹೊಳಗೆ ಬಿದ್ದಿದ್ದ ಶೇಪಪ್ಪ ಗೌಡರು ಬಿದ್ದಿದ್ದರು ಎಂದು ಶಂಕಿಸಲಾಗಿತ್ತು. ಬಳಿಕ ಹೊಳೆಯಲ್ಲಿ ಎರಡು ದಿನಗಳ ಕಾಲ ಹುಡುಕಾಡ ನಡೆಸಲಾಗಿತ್ತು. ಎನ್ ಡಿ ಆರ್ ಎಫ್ ತಂಡ ಕೂಡಾ ಆಗಮಿಸಿ ಹೊಳೆಯಲ್ಲಿ, ನದಿಯಲ್ಲಿ ಹುಡುಕಾಟ ನಡೆಸಿತ್ತು. ಇದೀಗ ಶುಕ್ರವಾರ ಸಂಜೆ ಪಂಜದ ಪಲ್ಲೋಡಿ ಬಳಿ ಮೃತದೇಹ ಪತ್ತೆಯಾಗಿದೆ.
ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿರುವ ಘಟನೆ ಗುಜರಾತಿನ ಅಹಮದಾಬಾದ್ನಲ್ಲಿ…
ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ…
ತೆಂಗಿನ ಗೆರಟೆಯು ಮೌಲ್ಯವರ್ಧನೆಯಾದಾಗ ತೆಂಗಿನ ಒಟ್ಟಾರೆ ಆದಾಯವೂ ಹೆಚ್ಚಾಗಲು ಸಾಧ್ಯವಿದೆ. ಸದ್ಯ ಸಣ್ಣ…
ಮುಂದಿನ ಎರಡು ದಿನಗಳ ಕಾಲ ಕರಾವಳಿ ಜಿಲ್ಲೆಯಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದೆ. ಹೀಗಾಗಿ…
2025 ರಲ್ಲಿ ಶನಿ ಮತ್ತು ಬುಧ ಗ್ರಹಗಳ ಸಂಯೋಜನೆಯಿಂದ ನಿರ್ಮಾಣವಾಗುತ್ತಿರುವ ನವಪಂಚಮ ರಾಜಯೋಗವು…
ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಹಾಗೂ…