ಸುಳ್ಯ: ಪಂಬೆತ್ತಾಡಿ ಪ್ರಾಥಮಿಕ ಕೃಷಿಪತ್ತಿನ ಸೇವಾ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಜಾಕೆ ಮಾಧವ ಗೌಡ ಮತ್ತು ಉಪಾಧ್ಯಕ್ಷರಾಗಿ ಕುಲ್ ದೀಪ್ ಸುತ್ತುಕೋಟೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಪಂಬೆತ್ತಾಡಿ ಪ್ರಾ.ಕೃ.ಪ.ಸ.ಸಂಘ ಆಡಳಿತ ಮಂಡಳಿಗೆ ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾಗಿದ್ದು, ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆಯನ್ನು ಜ. 25 ನಡೆಯಿತು. ಮಣಿಯಾನ ಪುರುಷೋತ್ತಮ ಚುನಾವಣಾ ಅಧಿಕಾರಿಯಾಗಿದ್ದರು.
ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪುರುಷೋತ್ತಮ ಶೆಟ್ಟಿ, ಸಹಕಾರಿ ಸಂಘಗಳ ಮೇಲ್ವಿಚಾರಕ ಪ್ರದೀಪ್ ಕುಮಾರ್, ನಿರ್ದೇಶಕರುಗಳಾದ ಮಹೇಶ್ ಕುಮಾರ್ ಕರಿಕ್ಕಳ, ವೆಂಕಪ್ಪ ಗೌಡ, ಧರ್ಮಣ್ಣ ನಾಯ್ಕ ಗರಡಿ, ಜಿತೇಂದ್ರ ಪ್ರಸಾದ್, ಜಯರಾಮ ಬೆಳಗಜೆ, ಶ್ರೀನಿವಾಸ ಭೀಮಗುಳಿ, ಮೂಕಾಂಬಿಕಾ, ಭಾಗೀರಥಿ, ಲೋಹಿತಾಶ್ವ ಚೀಮುಳ್ಳು, ಗಣೇಶ್ ಪ್ರಸಾದ್ ಭೀಮಗುಳಿ, ಮಾಜಿ ನಿರ್ದೇಶಕ ರಾಮಚಂದ್ರ ಕಲ್ಚಾರು, ಮಾಜಿ ಉಪಾಧ್ಯಕ್ಷ ಸಂತೋಷ್ ಜಾಕೆ, ಸಂಘದ ಸಿಬ್ಬಂದಿವರ್ಗ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಆಡಳಿತ ಮಂಡಳಿಯ ಅಧ್ಯಕ್ಷರಾಗಿ 3 ನೇ ಅವಧಿಗೆ ಜಾಕೆ ಮಾಧವ ಗೌಡ ಅಧ್ಯಕ್ಷರಾಗಿ ಆಯ್ಕೆಯಾದರು.
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…
ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್ಗೆ ಅಡಿಕೆ…
ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…
2026-27ರ ಮುಂಗಾರು ಬೆಳೆ ಸಮೀಕ್ಷೆಗೆ ಚಾಲನೆ; ರೈತರು ಮೊಬೈಲ್ ಆ್ಯಪ್ ಮೂಲಕವೇ ಬೆಳೆ…
ಮಾಣಿ–ಸಂಪಾಜೆ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಕೇಂದ್ರದಿಂದ ₹49.22 ಕೋಟಿ ವಿಶೇಷ ಅನುದಾನ ಮಂಜೂರು.…
ಜುಲೈ 7ರಿಂದ 11ರವರೆಗೆ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ. ಭೂಕುಸಿತದ…