ಸುಳ್ಯ: ತನಗೆ ಬೆದರಿಕೆ ಇದೆ ಆದುದರಿಂದ ಸೂಕ್ತ ರಕ್ಷಣೆ ನೀಡಬೇಕು ಎಂದು ನಗರ ಪಂಚಾಯತ್ ಚುನಾವಣೆಯಲ್ಲಿ 17ನೇ ವಾರ್ಡ್ ಬೋರುಗುಡ್ಡೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಆರ್.ಕೆ.ಮಹಮ್ಮದ್ ಅವರು ಚುನಾವಣಾಧಿಕಾರಿಗಳು ಹಾಗೂ ಅಭ್ಯರ್ಥಿಗಳ ಸಭೆಯಲ್ಲಿ ಹೇಳಿದರು. ಈ ಸಂದರ್ಭ ಲಿಖಿತ ದೂರು ನೀಡುವಂತೆ ಚುನಾವಣಾಧಿಕಾರಿಗಳು ಆರ್.ಕೆ.ಮಹಮ್ಮದ್ ಅವರಿಗೆ ಸೂಚಿಸಿದರು.
ಬೋರುಗುಡ್ಡೆ ವಾರ್ಡ್ನ್ನು ಸೂಕ್ಷ್ಮ ಮತಗಟ್ಟೆ ಎಂದು ಪರಿಗಣಿಸಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ನೀಡಬೇಕು ಮತ್ತು ತನಗೆ ಚುನಾವಣೆ ಮುಗಿಯುವ ತನಕ ರಕ್ಷಣೆ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಚುನಾವಣಾ ಆಯೋಗಕ್ಕೆ ಮತ್ತು ಪೊಲೀಸ್ ಇಲಾಖೆಗೆ ಲಿಖಿತ ದೂರು ಸಲ್ಲಿಸುವಂತೆ ಚುನಾವಣಾಧಿಕಾರಿಗಳು ಆರ್.ಕೆ.ಮಹಮ್ಮದ್ಗೆ ಸೂಚಿಸಿದ್ದಾರೆ.
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…
ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…
ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…
ವಿಶ್ವ ಪರಿಸರ ದಿನಾಚರಣೆಯಲ್ಲಿ ಪರಿಸರ ಸಂರಕ್ಷಣೆಯ ಮಹತ್ವವನ್ನು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಒತ್ತಿ…