ಸುಳ್ಯ:ಇತ್ತೀಚೆಗೆ ನಡೆದ ಸಹಕಾರಿ ಸಂಘಗಳ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿಯ ಸೂಚನೆಗಳನ್ನು ಮೀರಿ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಗ್ರಾಮದಲ್ಲಿ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿರುವ ಕಾರಣದಿಂದ ಎಸ್.ಎನ್.ಮನ್ಮಥ, ಚಂದ್ರಶೇಖರ ಶಾಸ್ತ್ರಿ, ಸಂತೋಷ್ ಕುತ್ತಮೊಟ್ಟೆಯವರನ್ನು ಹಾಗೂ ಪಾರ್ಟಿಯ ನಿರ್ಣಯಕ್ಕೆ ವಿರುದ್ಧವಾಗಿ ನಿಂತ ವಿಷ್ಣು ಭಟ್ ಮೂಲೆತೋಟ ಅವರರನ್ನು ಭಾರತೀಯ ಜನತಾ ಪಾರ್ಟಿಯಿಂದ ದೂರಗೊಳಿಸುವ ನಿರ್ಣಯವನ್ನು ಕೈಗೊಳ್ಳಲಾಗಿದೆ ಎಂದು ಬಿಜೆಪಿ ಪ್ರಕಟಣೆ ತಿಳಿಸಿದೆ.
ಸುಳ್ಯ ಮಂಡಲ ಸಮಿತಿಯ ನೇತೃತ್ವದಲ್ಲಿ ಜ.23 ರಂದು ಸುಳ್ಯ ವೆಂಕಟರಮಣ ದೇವಮಂದಿರದ ಸಭಾಭವನದಲ್ಲಿ ಮಂಡಲ ಪ್ರಮುಖರ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.ಇದನ್ನು ಜಿಲ್ಲಾ ಸಮಿತಿಗೆ ತಿಳಿಸಲಾಗುತ್ತದೆ. ಆದ್ದರಿಂದ ಬಿಜೆಪಿಗೂ ಅವರಿಗೂ ಯಾವುದೇ ಸಂಬಂಧವಿರುವುದಿಲ್ಲ ಎಂದು ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ ಹಾಗೂ ಕಾರ್ಯದರ್ಶಿ ಸುಬೋಧ್ ಶೆಟ್ಟಿ ಮೇನಾಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…
03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…
ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…
https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…