ಮಂಗಳೂರು : ಎಲ್ಲಾ ಪಡಿತರ ಚೀಟಿದಾರರ ಗಮನಕ್ಕೆ ತಿಳಿಸುವುದೇನೆಂದರೆ ಜಿಲ್ಲೆಯಲ್ಲಿ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಬೆಳಿಗ್ಗೆ 7 ಗಂಟೆಯಿಂದ ರಾತ್ರಿ 9 ಗಂಟೆವರೆಗೆ (ಮಧ್ಯಾಹ್ನ ಊಟದ ವಿರಾಮ 1.30 ಗಂಟೆಯಿಂದ 2.30 ಗಂಟೆವರೆಗೆ ಹೊರತುಪಡಿಸಿ) ಪಡಿತರ ಪಡೆಯಬಹುದಾಗಿದೆ.
ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ವಿತರಣೆಯಲ್ಲಿ ತೂಕದಲ್ಲಿ ಕಡಿಮೆ ಕೊಟ್ಟಲ್ಲಿ, ಹಣ ಕೇಳಿದಲ್ಲಿ ಪಡಿತರ ಜೊತೆಗೆ ವಸ್ತುಗಳನ್ನು ಕಡ್ಡಾಯವಾಗಿ ಕೊಳ್ಳುವಂತೆ ಒತ್ತಾಯಿಸಿದಲ್ಲಿ, ಪಡಿತರ ವಿತರಣೆ ನಿರಾಕರಿಸಿದಲ್ಲಿ, ಪಡಿತರ ಚೀಟಿಯ ಬಗ್ಗೆ ಹಾಗೂ ವಿತರಣೆ ಬಗ್ಗೆ ಏನಾದರೂ ಸಮಸ್ಯೆ ಇದ್ದಲ್ಲಿ ಮತ್ತು ಪಡಿತರ ಲಭ್ಯತೆ ಹಾಗೂ ಗುಣಮಟ್ಟದಲ್ಲಿ ಏನಾದರೂ ಕೊರತೆಯಿದ್ದಲ್ಲಿ ಈ ಕೆಳಗಿನ ಸಂಬಂಧಪಟ್ಟ ಅಧಿಕಾರಿ, ಸಿಬ್ಬಂದಿಗಳನ್ನು ಸಂಪರ್ಕಿಸಬಹುದು.
ತಾಲೂಕಿನ ಹೆಸರು ಹಾಗೂ ಅಧಿಕಾರಿಗಳ ವಿವರ ಇಂತಿವೆ :
ಮಂಗಳೂರು ನಗರ – ಸಹಾಯಕ ನಿರ್ದೇಶಕರು , ಕಸ್ತೂರಿ ಆಹಾರ ನಿರೀಕ್ಷಕರು, ರಫೀಕ್ ಎಂ, ದೂರವಾಣಿ ಸಂಖ್ಯೆ :0824-2423622,
ಮಂಗಳೂರು ಗ್ರಾಮಾಂತರ – ಆಹಾರ ಶಿರಸ್ತೇದಾರರು ಮೋಹಿನಿ ಕುಮಾರಿ, ಆಹಾರ ನಿರೀಕ್ಷಕರು ರಾಜಶ್ರೀ, ದೂರವಾಣಿ ಸಂಖ್ಯೆ : 0824-2412033,
ಬಂಟ್ವಾಳ ತಾಲೂಕು–ಆಹಾರ ಶಿರಸ್ತೇದಾರರು ಶ್ರೀನಿವಾಸ್ ದೂರವಾಣಿ ಸಂಖ್ಯೆ: 08255-232125,
ಬೆಳ್ತಂಗಡಿ ತಾಲೂಕು – ಆಹಾರ ನಿರೀಕ್ಷಕರು, ವಿಶ್ವ .ಕೆ, ದೂರವಾಣಿ ಸಂಖ್ಯೆ : 08256-232383,
ಪುತ್ತೂರು ತಾಲೂಕು–ಆಹಾರ ನಿರೀಕ್ಷಕರು, ಸರಸ್ವತಿ ಕೆ. ದೂರವಾಣಿ ಸಂಖ್ಯೆ : 08251-231349,
ಸುಳ್ಯ ತಾಲೂಕು – ಆಹಾರ ಶಿರಸ್ತೇದಾರರು ಕಮಲ, ಆಹಾರ ನಿರೀಕ್ಷಕರರು, ವಸಂತಿ ದೂರವಾಣಿ ಸಂಖ್ಯೆ : 08257-231330 ಇವರನ್ನು ಸಂಪರ್ಕಿಸಿ ಪರಿಹಾರಕಂಡುಕೊಳ್ಳಬಹುದು ಎಂದು ಜಂಟಿ ನಿರ್ದೇಶಕರು, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ದ.ಕ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…