Advertisement
ಧಾರ್ಮಿಕ

ಪತ್ತನಾಜೆಗೆ ಮಳೆಯೂ ಹತ್ತು ಹನಿ…….. ಇನ್ನು ತುಳುನಾಡಿನಲ್ಲಿ ಬೇಸಾಯದ ಪರ್ವ…..

Share

ಬೆಳಗಿನಿಂದಲೇ ಸಡಗರದಿಂದ ಕೆಲಸ ಮಾಡುತ್ತಿರುವ ಅಜ್ಜಿ ಯನ್ನು ರಜೆಯಲ್ಲಿ ಮನೆಗೆ ಬಂದ ಪುಳ್ಳಿ ನೋಡಿಯೇ ಬಾಕಿ…. ಯಾವಾಗಲೂ ಅಲ್ಲಿ ನೋವು ಇಲ್ಲಿ ನೋವು ಎಂದು ಬೆನ್ನು ಬಗ್ಗಿಸಿ ನಡೆಯುವ ಅಜ್ಜಿಯ ನೋವುಗಳೆಲ್ಲಾ ಮಾಯ…..!

ಕುತೂಹಲದಿಂದ ನೋಡುತ್ತಿದ್ದ ಮೊಮ್ಮಗಳಿಗೆ ಕೇಳದೇ ಉತ್ತರ ಸಿಕ್ಕಿತು. ಇವತ್ತು ಪತ್ತನಾಜೆಯಲ್ಲವಾ, ಮಾವ ಮನೆಗೆ ಬರುತ್ತಿದ್ದಾನೆ. ಬಹಳ ಸಮಯದ ಮೇಲೆ ಬರುತ್ತಿದ್ದಾನೆ. ನಿನ್ನ ನೋಡಿ ಖುಷಿ ಪಡುತ್ತಾನೆ .  ಯಕ್ಷಗಾನ ಮೇಳದಲ್ಲಿ ವೇಷ ಹಾಕುವ ಮಾವನೆಂದರೆ ಮಕ್ಕಳಿಗೆ ಬಹಳ ಇಷ್ಟ. ಮೇಳದ ರಂಜನೀಯ ಕಥೆಗಳನ್ನು, ಪೌರಾಣಿಕ ಪ್ರಸಂಗಗಳನ್ನು ಹೇಳುತ್ತಿದ್ದರೆ ಮಕ್ಕಳಿಗೆ ಸಮಯ ಹೋದದ್ದೇ ಗೊತ್ತಾಗುತ್ತಿರಲಿಲ್ಲ.  ಹೌದಾ ಮಾವನಿಗೆ ರಜೆಯುಂಟಾ? ಎಷ್ಟು ದಿನ ? ಎಂಬ ಪ್ರಶ್ನೆಗೆ ಅಜ್ಜಿ ಖುಷಿಯಿಂದ ಉತ್ತರ ಕೊಟ್ಟಳು. ನೋಡು ಮಗ ಇಂದು ಪತ್ತನಾಜೆ. ತುಳು ತಿಂಗಳ ಹತ್ತನೇಯ ದಿನ. ಇಂದಿನಿಂದ ಮಳೆಗಾಲ ಆರಂಭ ಎಂಬುದು ಇಲ್ಲಿನವರ ನಂಬಿಕೆ. ಹಾಗಾಗಿ  ಭೂತ ಕೋಲ, ನೇಮ, ತಂಬಿಲ, ಯಕ್ಷಗಾನ, ಜಾತ್ರೆಗಳಿಗೆಲ್ಲ ಇನ್ನೂ ವಿರಾಮ. ಗದ್ದೆ ಬೇಸಾಯದ ಕೆಲಸಗಳೆಲ್ಲ ಆರಂಭಿಸಲು ಸಕಾಲ. ಪತ್ತನಾಜೆಯಾದ ಮೇಲೆ ದೈವ  ಬೂತಗಳೆಲ್ಲಾ ಘಟ್ಟ ಹತ್ತುತ್ತವೆ ಎಂಬುದು ಜನಸಾಮಾನ್ಯರ ನಂಬಿಕೆ.  ದೀಪೋತ್ಸವ ಕ್ಕೆ ಶುರು ಆಗುವ ಮೇಳಗಳ ತಿರುಗಾಟಕ್ಕೆ ಪತ್ತನಾಜೆಯಿಂದ ವಿಶ್ರಾಂತಿ. ಊರಿಂದ ಊರಿಗೆ ತಿರುಗಾಡಿ ಸುಸ್ತಾದ ಕಲಾವಿದರ ಪಯಣಕ್ಕೆ ತಾತ್ಕಾಲಿಕ ವಿರಾಮ. ಬೇಸಾಯ ,ತೋಟದ ಕೆಲಸಗಳಲ್ಲಿ ‌ಮಾವ ತೊಡಗುವುದರಿಂದ ನಮಗೂ ನೆಮ್ಮದಿ ಎಂದು ಅಜ್ಜಿಯ ಕಣ್ಣಲ್ಲಿ ‌ತೆಳ್ಳನೆಯ ಕಣ್ಣೀರು.
ಪತ್ತನಾಜೆಯು ದಕ್ಷಿಣ ಕನ್ನಡ , ಉಡುಪಿ ಕಾಸರಗೋಡುಗಳಲ್ಲಿ  ಆಚರಣೆಲ್ಲಿದೆ. ಹಿಂದೆ  ಆರು ತಿಂಗಳು ಸತತ ಮಳೆಯಾಗುತ್ತಿದ್ದದ್ದರಿಂದ ‌ಜಾತ್ರೆ, ನೇಮಗಳು, ಯಕ್ಷಗಾನ ಗಳನ್ನು ಈ ತಿಂಗಳುಗಳಲ್ಲಿ ‌ನಡೆಸುವುದು ಕಷ್ಟ ಸಾಧ್ಯ ವಾದುದರಿಂದ ಪತ್ತನಾಜೆಯನ್ನು ಒಂದು ಗಡುವೆಂದು ಜನರು ಪರಿಗಣಿಸಿರುವ ಸಾಧ್ಯತೆ ಇದೆ. ಆದರೆ ಇಲ್ಲಿನ ಜನರು ಈ ಪದ್ಧತಿ ಯನ್ನು ಬಹು ಶ್ರದ್ಧೆ ಯಿಂದ ಇಂದಿಗೂ ಪಾಲಿಸಿಕೊಂಡು ಬಂದಿದ್ದಾರೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಹವಾಮಾನ ವರದಿ | 07-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು : ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ,

08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…

2 hours ago

ಕೆಲವು ರಾಜ್ಯಗಳಲ್ಲಿ ಸುಡುವ ಬಿಸಿಲು, ಇನ್ನೂ ಕೆಲವು ಕಡೆ ಮಳೆ – ದೇಶಾದ್ಯಂತ ಹವಾಮಾನ ವೈಪರೀತ್ಯ

ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…

8 hours ago

ಪರಿಸರ ಸಂರಕ್ಷಣೆಯಿಂದ ಮಾತ್ರ ಸುಸ್ಥಿರ ಆರೋಗ್ಯ ಸಾಧ್ಯ

ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…

8 hours ago

ಸ್ಥಳೀಯ ಸಂಸ್ಥೆ ಚುನಾವಣೆ ಶೀಘ್ರ – ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…

8 hours ago

ರೈತರಿಗೆ ಕನಿಷ್ಠ ಬೆಂಬಲ ಬೆಲೆ ಸೌಲಭ್ಯ ಘೋಷಣೆ : ರೈತರ ಆರ್ಥಿಕ ಭದ್ರತೆಗೆ ಕೇಂದ್ರ ಬದ್ಧ

ಕರ್ನಾಟಕ ಮತ್ತು ಮಹಾರಾಷ್ಟ್ರದ ರೈತರಿಗೆ ₹4,800 ಕೋಟಿಗೂ ಅಧಿಕ ಮೊತ್ತದ ಕನಿಷ್ಠ ಬೆಂಬಲ…

8 hours ago

ವನ್ಯಜೀವಿಗಳ ಸಂತಾನ ನಿಯಂತ್ರಣಕ್ಕೆ ತಜ್ಞರ ಚರ್ಚೆ ಅಗತ್ಯ

ವನ್ಯಜೀವಿಗಳ ಸಂಖ್ಯೆ ಹೆಚ್ಚಳದಿಂದ ಮಾನವ-ಆನೆ ಸಂಘರ್ಷ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಪ್ರದೇಶಗಳಲ್ಲಿ ಸಂತಾನ…

8 hours ago