Advertisement
Categories: Uncategorized

ಪುತ್ತೂರು ಭಾಲಾವಲೀಕಾರ್ ಗೌಡ ಸಾರಸ್ವತ ಬ್ರಾಹ್ಮಣ ಸಮಾಜ ಸೇವಾ ಸಂಘದ 96ನೇ ವಾರ್ಷಿಕ ಮಹಾಸಭೆ

Share

ಪುತ್ತೂರು : ಅ.13ರಂದು ದರ್ಬೆ ಸಚ್ಚಿದಾನಂದ ಸೇವಾ ಸದನದಲ್ಲಿ ನಡೆದ “ಪುತ್ತೂರು ಸಂಘ”ದ 96ನೇ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷರಾದ ಶ್ರೀ ಸುನಿಲ್ ಬೋರ್ಕರ್ ಮುಂಡಕೊಚ್ಚಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

 

2022-23ನೇ ಸಾಲಿನಲ್ಲಿ ಸಂಘದ ಶತಮಾನೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಪೂರ್ವ ತಯಾರಿ ದೃಷ್ಟಿಯಲ್ಲಿ ಸಂಘದ ಆಡಳಿತ ಮಂಡಲಿಯ ನಿರ್ದೇಶಕರ ಸ್ಥಾನವನ್ನು 15ರಿಂದ 30ಕ್ಕೆ ಏರಿಸುವ ನಿರ್ಣಯವನ್ನು ಕೈಗೊಳ್ಳಲಾಯಿತು.

ವಾರ್ಷಿಕ ಮಹಾಸಭೆಯಲ್ಲಿ ಸಂಘದಿಂದ ಪ್ರಾರಂಭಿಸಿದ ಶ್ರೀ ಸರಸ್ವತಿ ಎಜುಕೇಶನ್ ಸೊಸೈಟಿಯು ಪ್ರಾರಂಭಿಸಿದ ಶ್ರೀ ಸರಸ್ವತಿ ಐ ಟಿ ಐಯು ಪ್ರಾರಂಭದಲ್ಲಿ ಸಂಘದಿಂದ ನೀಡಿದ ಪ್ರಾರಂಭಿಕ ಸಹಾಯಕ್ಕೆ ಪ್ರತಿಫಲವಾಗಿ ಎಜುಕೇಶನ್ ಸೊಸೈಟಿಯು ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ಸಂಟ್ಯಾರಿನಲ್ಲಿ ನಿರ್ಮಿಸುತ್ತಿರುವ ನೂತನ ಕಟ್ಟಡ ಮಳಿಗೆಯಲ್ಲಿ ಅಂದಾಜು 8000 ಚದರ ಅಡಿ ವಿಸ್ತೀರ್ಣದ ಕಟ್ಟಡವನ್ನು ಕಟ್ಟಿಕೊಳ್ಳುವರೇ ಸಂಘಕ್ಕೆ ಹಕ್ಕು ನೀಡುವ ಕುರಿತು ಎಜುಕೇಶನ್ ಸೊಸೈಟಿಯ ಆಡಳಿತ ಮಂಡಲಿ ನೀಡಿದ ಅವಕಾಶವನ್ನು ತುಂಬು ಮನಸ್ಸಿನಿಂದ ಸ್ವಾಗತಿಸಿ ಒಪ್ಪಿಕೊಳ್ಳಲಾಯಿತು.

ಸನ್ಮಾನ : ಮಹಾಸಭೆಯು  – ಪುತ್ತೂರು ತಾಲೂಕು ಪಂಚಾಯತ್ ಅಧ್ಯಕ್ಷರಾದ ರಾಧಾಕೃಷ್ಣ ಬೋರ್ಕರ್ ಕತ್ತಲಕಾನ , ತೆಂಕುತಿಟ್ಟು ಯಕ್ಷಗಾನದ ಪ್ರಸಿದ್ಧ ಮದ್ದಳೆವಾದಕರಾದ ನೇರೋಳು ಗಣಪತಿ ನಾಯಕ್, ಗೀತ ಸಾಹಿತ್ಯ ಸಂಭ್ರಮ ಕಾರ್ಯಕ್ರಮದ ಮುಖಾಂತರ ಸಮಾಜದ ಅಂಕು ಡೊಂಕು ತಿದ್ದುವ ಕಲಾವಿದರಾದ ವಿಠಲ ನಾಯಕ್ ವಿಟ್ಲ , ಉದ್ಯಮಿ , ಸಮಾಜ ಸೇವಕ, ಧಾರ್ಮಿಕ ಕಾರ್ಯಕರ್ತ, ಪ್ರಸ್ತುತ ಸುಳ್ಯ ಭಾಲಾವಲೀಕಾರ್ ರಾಜಾಪುರ ಸಾರಸ್ವತ ಸಂಘದ ನೂತನ ಅಧ್ಯಕ್ಷರಾದ ಕರೋಡಿ ಗೋಪಾಲಕೃಷ್ಣ ಬೋರ್ಕರ್ ಇವರುಗಳನ್ನು ಸನ್ಮಾನಿಸಿ ಗೌರವಿಸಲಾಯಿತು.

ಮಹಾಸಭೆಯು ಪ್ರಸ್ತುತವಿರುವ ಆಡಳಿತ ಮಂಡಲಿಯನ್ನೇ ಮುಂದುವರಿಯಬೇಕೆನ್ನುವ ಒತ್ತಾಯದ ಹಿನ್ನಲೆಯಲ್ಲಿ ಅವಶ್ಯವಿರುವ ಬದಲಾವಣೆಯನ್ನು ಮಾಡಿಕೊಂಡು, ಆಡಳಿತ ಮಂಡಲಿಯಲ್ಲಿನ ಹೆಚ್ಚುವರಿ 15 ಸ್ಥಾನಗಳನ್ನು ಕೋ-ಆಪ್ಟ್ ಮಾಡಿ ತುಂಬಲು ನೂತನ ಆಡಳಿತ ಮಂಡಳಿಗೆ ಅಧಿಕಾರ ನೀಡಲಾಯಿತು.

ಸಭೆಯಲ್ಲಿ ಮಹಿಳಾ ಮಂಡಲಿ, ಯುವ ವೇದಿಕೆ, ವಿದ್ಯಾರ್ಥಿ ಸಂಘದ ಸದಸ್ಯರು, ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು, ದೇವಸ್ಥಾನಗಳ ಆಡಳಿತ ಮಂಡಲಿಯ ಪ್ರಮುಖರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

5 hours ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

10 hours ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

19 hours ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

20 hours ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

20 hours ago

ಮಂಗಳೂರು ಅಡಿಕೆ ಮಾರುಕಟ್ಟೆ | ಐದು ವರ್ಷದ ಧಾರಣೆ ಹೇಳುವ ಏರುಪೇರುಗಳ ಕಥೆ..!

ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…

1 day ago