Advertisement
Categories: Uncategorized

ಪುತ್ತೂರು ಭಾಲಾವಲೀಕಾರ್ ಗೌಡ ಸಾರಸ್ವತ ಬ್ರಾಹ್ಮಣ ಸಮಾಜ ಸೇವಾ ಸಂಘದ 96ನೇ ವಾರ್ಷಿಕ ಮಹಾಸಭೆ

Share

ಪುತ್ತೂರು : ಅ.13ರಂದು ದರ್ಬೆ ಸಚ್ಚಿದಾನಂದ ಸೇವಾ ಸದನದಲ್ಲಿ ನಡೆದ “ಪುತ್ತೂರು ಸಂಘ”ದ 96ನೇ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷರಾದ ಶ್ರೀ ಸುನಿಲ್ ಬೋರ್ಕರ್ ಮುಂಡಕೊಚ್ಚಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

 

2022-23ನೇ ಸಾಲಿನಲ್ಲಿ ಸಂಘದ ಶತಮಾನೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಪೂರ್ವ ತಯಾರಿ ದೃಷ್ಟಿಯಲ್ಲಿ ಸಂಘದ ಆಡಳಿತ ಮಂಡಲಿಯ ನಿರ್ದೇಶಕರ ಸ್ಥಾನವನ್ನು 15ರಿಂದ 30ಕ್ಕೆ ಏರಿಸುವ ನಿರ್ಣಯವನ್ನು ಕೈಗೊಳ್ಳಲಾಯಿತು.

ವಾರ್ಷಿಕ ಮಹಾಸಭೆಯಲ್ಲಿ ಸಂಘದಿಂದ ಪ್ರಾರಂಭಿಸಿದ ಶ್ರೀ ಸರಸ್ವತಿ ಎಜುಕೇಶನ್ ಸೊಸೈಟಿಯು ಪ್ರಾರಂಭಿಸಿದ ಶ್ರೀ ಸರಸ್ವತಿ ಐ ಟಿ ಐಯು ಪ್ರಾರಂಭದಲ್ಲಿ ಸಂಘದಿಂದ ನೀಡಿದ ಪ್ರಾರಂಭಿಕ ಸಹಾಯಕ್ಕೆ ಪ್ರತಿಫಲವಾಗಿ ಎಜುಕೇಶನ್ ಸೊಸೈಟಿಯು ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ಸಂಟ್ಯಾರಿನಲ್ಲಿ ನಿರ್ಮಿಸುತ್ತಿರುವ ನೂತನ ಕಟ್ಟಡ ಮಳಿಗೆಯಲ್ಲಿ ಅಂದಾಜು 8000 ಚದರ ಅಡಿ ವಿಸ್ತೀರ್ಣದ ಕಟ್ಟಡವನ್ನು ಕಟ್ಟಿಕೊಳ್ಳುವರೇ ಸಂಘಕ್ಕೆ ಹಕ್ಕು ನೀಡುವ ಕುರಿತು ಎಜುಕೇಶನ್ ಸೊಸೈಟಿಯ ಆಡಳಿತ ಮಂಡಲಿ ನೀಡಿದ ಅವಕಾಶವನ್ನು ತುಂಬು ಮನಸ್ಸಿನಿಂದ ಸ್ವಾಗತಿಸಿ ಒಪ್ಪಿಕೊಳ್ಳಲಾಯಿತು.

ಸನ್ಮಾನ : ಮಹಾಸಭೆಯು  – ಪುತ್ತೂರು ತಾಲೂಕು ಪಂಚಾಯತ್ ಅಧ್ಯಕ್ಷರಾದ ರಾಧಾಕೃಷ್ಣ ಬೋರ್ಕರ್ ಕತ್ತಲಕಾನ , ತೆಂಕುತಿಟ್ಟು ಯಕ್ಷಗಾನದ ಪ್ರಸಿದ್ಧ ಮದ್ದಳೆವಾದಕರಾದ ನೇರೋಳು ಗಣಪತಿ ನಾಯಕ್, ಗೀತ ಸಾಹಿತ್ಯ ಸಂಭ್ರಮ ಕಾರ್ಯಕ್ರಮದ ಮುಖಾಂತರ ಸಮಾಜದ ಅಂಕು ಡೊಂಕು ತಿದ್ದುವ ಕಲಾವಿದರಾದ ವಿಠಲ ನಾಯಕ್ ವಿಟ್ಲ , ಉದ್ಯಮಿ , ಸಮಾಜ ಸೇವಕ, ಧಾರ್ಮಿಕ ಕಾರ್ಯಕರ್ತ, ಪ್ರಸ್ತುತ ಸುಳ್ಯ ಭಾಲಾವಲೀಕಾರ್ ರಾಜಾಪುರ ಸಾರಸ್ವತ ಸಂಘದ ನೂತನ ಅಧ್ಯಕ್ಷರಾದ ಕರೋಡಿ ಗೋಪಾಲಕೃಷ್ಣ ಬೋರ್ಕರ್ ಇವರುಗಳನ್ನು ಸನ್ಮಾನಿಸಿ ಗೌರವಿಸಲಾಯಿತು.

ಮಹಾಸಭೆಯು ಪ್ರಸ್ತುತವಿರುವ ಆಡಳಿತ ಮಂಡಲಿಯನ್ನೇ ಮುಂದುವರಿಯಬೇಕೆನ್ನುವ ಒತ್ತಾಯದ ಹಿನ್ನಲೆಯಲ್ಲಿ ಅವಶ್ಯವಿರುವ ಬದಲಾವಣೆಯನ್ನು ಮಾಡಿಕೊಂಡು, ಆಡಳಿತ ಮಂಡಲಿಯಲ್ಲಿನ ಹೆಚ್ಚುವರಿ 15 ಸ್ಥಾನಗಳನ್ನು ಕೋ-ಆಪ್ಟ್ ಮಾಡಿ ತುಂಬಲು ನೂತನ ಆಡಳಿತ ಮಂಡಳಿಗೆ ಅಧಿಕಾರ ನೀಡಲಾಯಿತು.

ಸಭೆಯಲ್ಲಿ ಮಹಿಳಾ ಮಂಡಲಿ, ಯುವ ವೇದಿಕೆ, ವಿದ್ಯಾರ್ಥಿ ಸಂಘದ ಸದಸ್ಯರು, ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು, ದೇವಸ್ಥಾನಗಳ ಆಡಳಿತ ಮಂಡಲಿಯ ಪ್ರಮುಖರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂಗಾರು ಮತ್ತಷ್ಟು ಚುರುಕು- ವಾಯುಭಾರ ಕುಸಿತದ ಲಕ್ಷಣ | ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ IMD ಎಚ್ಚರಿಕೆ ನೀಡಿ

ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…

3 hours ago

ಅಡಿಕೆ ಕಳ್ಳಸಾಗಣೆ ಪ್ರಕರಣ – ಸಿಲ್ಚಾರ್ ಉದ್ಯಮಿಯ ಮನೆ ಮೇಲೆ ಇ.ಡಿ. ದಾಳಿ, ಹಣ ಅಕ್ರಮ ವರ್ಗಾವಣೆ ತನಿಖೆ ತೀವ್ರ

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…

3 hours ago

ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ

ಈ ವಾರದ ಚಿಂತನೆ - "ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ"

6 hours ago

ಮುಂಬೈನಲ್ಲಿ ಭಾರೀ ಮಳೆ ಅಬ್ಬರ – ರೆಡ್ ಅಲರ್ಟ್ ಮುಂದುವರಿಕೆ, ಜನಜೀವನ ಅಸ್ತವ್ಯಸ್ತ

ಮುಂಬೈನಲ್ಲಿ ನಿರಂತರ ಭಾರೀ ಮಳೆಯಿಂದ ನಗರದಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. IMD…

15 hours ago

ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆಗೆ BIS ಮಾನದಂಡ ಕಾರಣವೇ ? ಯಾವ ಅಡಿಕೆ ಉತ್ತಮ? ಗ್ರೇಡ್ ಹೇಗೆ ನಿರ್ಧಾರ?

ಭಾರತೀಯ BIS ಮಾನದಂಡದ ಪ್ರಕಾರ ಅಡಿಕೆಯ ಗುಣಮಟ್ಟವನ್ನು ತೇವಾಂಶ, ಅಫ್ಲಾಟಾಕ್ಸಿನ್, ಕೀಟ ಹಾನಿ,…

16 hours ago

ಜಾಕ್‌ಫ್ರೂಟ್ ಸ್ಪೈಸಿ – ಹಲಸಿನ ಕಾಯಿಯಿಂದ 5 ನಿಮಿಷದಲ್ಲಿ ರುಚಿಕರ ಸ್ನ್ಯಾಕ್..!

ಸ್ವಲ್ಪ ಸಿಹಿ ರುಚಿಯ ಹಲಸಿನ ಕಾಯಿಗೆ ವಿವಿಧ ಮಸಾಲೆಗಳನ್ನು ಸೇರಿಸಿ ಕೆಲವೇ ನಿಮಿಷಗಳಲ್ಲಿ…

22 hours ago