Advertisement
ಸುದ್ದಿಗಳು

ಪತ್ರಕರ್ತರಿಗೆ ಉಚಿತ ಹೆಲ್ತ್ ಕಾರ್ಡ್- ಸಿಎಂ ಸೂಚನೆ

Share

ಬೆಂಗಳೂರು: ಪತ್ರಕರ್ತರು ಉಚಿತ ಚಿಕಿತ್ಸೆ ಪಡೆಯಲು ತಕ್ಷಣವೇ ಹೆಲ್ತ್ ಕಾರ್ಡ್ ನೀಡುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚಿಸಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದ ಸಿಎಂ, ಸಂಘದ ಅಹವಾಲುಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿದರು. ಮಾನ್ಯತೆ ಹೊಂದಿದ ಪತ್ರಕರ್ತರನ್ನು ಹೊರತುಪಡಿಸಿ, ಜಿಲ್ಲಾ ಮಟ್ಟದಲ್ಲಿರುವ ಪತ್ರಕರ್ತರಿಗೆ ಆಯಾ ಜಿಲ್ಲೆ ವ್ಯಾಪ್ತಿಯಲ್ಲಿ ಉಚಿತ ಬಸ್ ಪಾಸ್ ಒದಗಿಸುವಂತೆ ಸ್ಥಳದಲ್ಲೇ ಅಧಿಕಾರಿಗಳಿಗೆ ಆದೇಶಿಸಿದರು.

ಅಕಾಲಿಕ ಮರಣಕ್ಕೆ ತುತ್ತಾಗುವ ಕಾರ್ಯನಿರತ ಪತ್ರಕರ್ತರ ಕುಟುಂಬಕ್ಕೆ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು. ಪತ್ರಕರ್ತರ ನಿವೃತ್ತಿ ವೇತನ ಪಡೆಯಲು ಅಡ್ಡಿಯಾಗಿರುವ ನಿಯಮಾವಳಿಗಳನ್ನು ಸರಳೀಕರಿಸಲು ಸೂಚಿಸಿದರು. ಎಲ್ಲ ವರ್ಗದ ಆರ್ಥಿಕವಾಗಿ ಹಿಂದುಳಿದ ಪತ್ರಕರ್ತರಿಗೆ ಮೀಡಿಯಾ ಕಿಟ್ ನೀಡಲು ಆದೇಶಿಸಿದ ಸಿಎಂ, ಈಗಿರುವ ವಸತಿ ಯೋಜನೆಯಲ್ಲಿ ಪತ್ರಕರ್ತರಿಗೂ ಮನೆ ನಿರ್ವಿುಸಿಕೊಡಲು ಆದ್ಯತೆ ನೀಡಲಾಗುವುದು ಎಂದರು. ಬೆಂಗಳೂರಿನಲ್ಲಿ ನಿರ್ಮಾಣ ಮಾಡಲಿರುವ ಪತ್ರಕರ್ತರ ಭವನಕ್ಕೆ ಆರ್ಥಿಕ ನೆರವು, ಕೊಪ್ಪಳದಲ್ಲಿ ನಡೆಯುವ ಪತ್ರಕರ್ತರ ಸಮ್ಮೇಳನಕ್ಕೆ ಸಹಕಾರ ನೀಡಲಾಗುವುದು ಎಂದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು ಅವರು ಅಹವಾಲುಗಳನ್ನು ಮುಖ್ಯಮಂತ್ರಿಗಳಿಗೆ ವಿವರಿಸಿದರು. ಐಎಫ್​ಡಬ್ಲ್ಯೂಜೆ ಅಧ್ಯಕ್ಷ ಬಿ.ವಿ.ಮಲ್ಲಿಕಾರ್ಜುನಯ್ಯ, ರಾಜ್ಯ ಮತ್ತು ಜಿಲ್ಲಾ ಸಂಘದ ಪದಾಧಿಕಾರಿಗಳು ಹಾಜರಿದ್ದರು. ಇದೇ ವೇಳೆ ಸಂಘದ ವತಿಯಿಂದ ನೆರೆಸಂತ್ರಸ್ತರ ನಿಧಿಗೆ 1 ಲಕ್ಷ ರೂ. ಚೆಕ್ ಅನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

3 hours ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

5 hours ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

12 hours ago

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

18 hours ago

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

1 day ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

1 day ago