ಬೆಂಗಳೂರು: ಪತ್ರಕರ್ತರು ಉಚಿತ ಚಿಕಿತ್ಸೆ ಪಡೆಯಲು ತಕ್ಷಣವೇ ಹೆಲ್ತ್ ಕಾರ್ಡ್ ನೀಡುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚಿಸಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದ ಸಿಎಂ, ಸಂಘದ ಅಹವಾಲುಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿದರು. ಮಾನ್ಯತೆ ಹೊಂದಿದ ಪತ್ರಕರ್ತರನ್ನು ಹೊರತುಪಡಿಸಿ, ಜಿಲ್ಲಾ ಮಟ್ಟದಲ್ಲಿರುವ ಪತ್ರಕರ್ತರಿಗೆ ಆಯಾ ಜಿಲ್ಲೆ ವ್ಯಾಪ್ತಿಯಲ್ಲಿ ಉಚಿತ ಬಸ್ ಪಾಸ್ ಒದಗಿಸುವಂತೆ ಸ್ಥಳದಲ್ಲೇ ಅಧಿಕಾರಿಗಳಿಗೆ ಆದೇಶಿಸಿದರು.
ಅಕಾಲಿಕ ಮರಣಕ್ಕೆ ತುತ್ತಾಗುವ ಕಾರ್ಯನಿರತ ಪತ್ರಕರ್ತರ ಕುಟುಂಬಕ್ಕೆ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು. ಪತ್ರಕರ್ತರ ನಿವೃತ್ತಿ ವೇತನ ಪಡೆಯಲು ಅಡ್ಡಿಯಾಗಿರುವ ನಿಯಮಾವಳಿಗಳನ್ನು ಸರಳೀಕರಿಸಲು ಸೂಚಿಸಿದರು. ಎಲ್ಲ ವರ್ಗದ ಆರ್ಥಿಕವಾಗಿ ಹಿಂದುಳಿದ ಪತ್ರಕರ್ತರಿಗೆ ಮೀಡಿಯಾ ಕಿಟ್ ನೀಡಲು ಆದೇಶಿಸಿದ ಸಿಎಂ, ಈಗಿರುವ ವಸತಿ ಯೋಜನೆಯಲ್ಲಿ ಪತ್ರಕರ್ತರಿಗೂ ಮನೆ ನಿರ್ವಿುಸಿಕೊಡಲು ಆದ್ಯತೆ ನೀಡಲಾಗುವುದು ಎಂದರು. ಬೆಂಗಳೂರಿನಲ್ಲಿ ನಿರ್ಮಾಣ ಮಾಡಲಿರುವ ಪತ್ರಕರ್ತರ ಭವನಕ್ಕೆ ಆರ್ಥಿಕ ನೆರವು, ಕೊಪ್ಪಳದಲ್ಲಿ ನಡೆಯುವ ಪತ್ರಕರ್ತರ ಸಮ್ಮೇಳನಕ್ಕೆ ಸಹಕಾರ ನೀಡಲಾಗುವುದು ಎಂದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು ಅವರು ಅಹವಾಲುಗಳನ್ನು ಮುಖ್ಯಮಂತ್ರಿಗಳಿಗೆ ವಿವರಿಸಿದರು. ಐಎಫ್ಡಬ್ಲ್ಯೂಜೆ ಅಧ್ಯಕ್ಷ ಬಿ.ವಿ.ಮಲ್ಲಿಕಾರ್ಜುನಯ್ಯ, ರಾಜ್ಯ ಮತ್ತು ಜಿಲ್ಲಾ ಸಂಘದ ಪದಾಧಿಕಾರಿಗಳು ಹಾಜರಿದ್ದರು. ಇದೇ ವೇಳೆ ಸಂಘದ ವತಿಯಿಂದ ನೆರೆಸಂತ್ರಸ್ತರ ನಿಧಿಗೆ 1 ಲಕ್ಷ ರೂ. ಚೆಕ್ ಅನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಯಿತು.
ಜಾಗತಿಕ ಬಿಕ್ಕಟ್ಟಿನಿಂದ ಆಟೋ LPG ಬೇಡಿಕೆ ಏರಿಕೆ ಕಂಡಿದ್ದು, ಇಂಡಿಯನ್ ಆಯಿಲ್ ಪೂರೈಕೆಯನ್ನು…
“ರೈತ ರತ್ನ” ರಿಯಾಲಿಟಿ ಶೋ ಮೂಲಕ ಕೃಷಿಕರ ಸಾಧನೆಗೆ ಹೊಸ ವೇದಿಕೆ ಸಿಕ್ಕಿದೆ.…
ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…