Advertisement
ಸುದ್ದಿಗಳು

ಪತ್ರಕರ್ತರ ಗ್ರಾಮ ವಾಸ್ತವ್ಯ- ಡಿ.3 ಕ್ಕೆ ಪೂರ್ವಭಾವಿ ಸಭೆ

Share

ಸುಳ್ಯ:ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಹಯೋಗದಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ ಸುಳ್ಯ ತಾಲೂಕಿನ ಮಡಪ್ಪಾಡಿಯಲ್ಲಿ ಡಿಸೆಂಬರ್ ತಿಂಗಳ ಕೊನೆಯ ವಾರದಲ್ಲಿ ನಡೆಯಲಿದೆ. ಈ ಕುರಿತು ಚರ್ಚಿಸಲು ಪೂರ್ವಭಾವಿ ಸಭೆ ಡಿ.3. ಮಂಗಳವಾರ ಬೆಳಿಗ್ಗೆ 10 ಕ್ಕೆ ಸುಳ್ಯ ಎಪಿಎಂಸಿ ಸಭಾಂಗಣದಲ್ಲಿ ನಡೆಯಲಿದೆ‌. ಶಾಸಕ ಎಸ್‌.ಅಂಗಾರ ಹಾಗು ಇತರ ಜನಪ್ರತಿನಿಧಿಗಳು, ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಮತ್ತು ಇತರ ಅಧಿಕಾರಿಗಳು, ಪ್ರಮುಖರು, ಪತ್ರಕರ್ತರ ಸಂಘದ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.

Advertisement
Advertisement

ಎರಡನೇ ಗ್ರಾಮ ವಾಸ್ತವ್ಯ:

ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ವತಿಯಿಂದ ನಡೆಯುವ ಎರಡನೇ ಗ್ರಾಮ ವಾಸ್ತವ್ಯ ಮಡಪ್ಪಾಡಿಯಲ್ಲಿ ನಡೆಯಲಿದೆ. ಕಳೆದ ವರ್ಷ ಬೆಳ್ತಂಗಡಿ ತಾಲೂಕಿನ ಕುತ್ಲೂರಿನಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ ನಡೆದಿತ್ತು. ಜಿಲ್ಲೆಯ ಮತ್ತು ರಾಜ್ಯದ ಎಲ್ಲಾ ಮಾಧ್ಯಮಗಳ ಪ್ರಮುಖ ಪತ್ರಕರ್ತರು ಆಗಮಿಸಿ ಇಡೀ ದಿನ ಗ್ರಾಮದಲ್ಲಿ ವಾಸ್ತವ್ಯ ನಡೆಸುವರು. ಗ್ರಾಮ ವಾಸ್ತವ್ಯ ನಡೆಸುವ ಗ್ರಾಮ ಮತ್ತು ಸುತ್ತಲ ಗ್ರಾಮಗಳ ಮೂಲಭೂತ ಸಮಸ್ಯೆಗಳ ಮತ್ತು ಜನರು ಎದುರಿಸುವ ಸಮಸ್ಯೆಗಳಗಳನ್ನು ಬಿಂಬಿಸಿ ಅದರ ಪರಿಹಾರಕ್ಕೆ ಶ್ರಮಿಸುವುದರ ಜೊತೆಗೆ ಆ ಗ್ರಾಮದ ವಿಶೇಷತೆಯೆಡೆಗೆ ಬೆಳಕು ಚೆಲ್ಲುವ ನಿಟ್ಟಿನಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕುತ್ಲೂರಿನಲ್ಲಿ ನಡೆದ ಗ್ರಾಮ ವಾಸ್ತವ್ಯಕ್ಕೆ ಜನರಿಂದ, ಜನಪ್ರತಿನಿಧಿಗಳಿಂದ ಮತ್ತು ಅಧಿಕಾರಿಗಳಿಂದ ಅಭೂತಪೂರ್ವ ಬೆಂಬಲ ದೊರೆತು ಯಶಸ್ವಿಯಾಗಿತ್ತು.

ಗ್ರಾಮ ವಾಸ್ತವ್ಯದಲ್ಲಿ ಏನೆಲ್ಲ ಇರಲಿದೆ.?
ಬೆಳಿಗ್ಗೆ ಗ್ರಾಮ ವಾಸ್ತವ್ಯದ ಉದ್ಘಾಟನೆ ನಡೆಯಲಿದೆ. ಬಳಿಕ ಜಿಲ್ಲೆಯ ಎಲ್ಲಾ ಅಧಿಕಾರಿಗಳೊಂದಿಗೆ ಗ್ರಾಮದ ಮೂಲಭೂತ ಹಾಗು ಜನರ ಸಮಸ್ಯೆಗಳ ಬಗ್ಗೆ ಸಾರ್ವಜನಿಕರ ಚರ್ಚಾ ಕಾರ್ಯಕ್ರಮ ಇರಲಿದೆ‌. ಬಳಿಕ ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳ ಜೊತೆ ಸಾರ್ವಜನಿಕರ ಮುಖಾಮುಖಿ ನಡೆಯಲಿದೆ. ಬಳಿಕ ಪತ್ರಕರ್ತರು ಮತ್ತು ಗ್ರಾಮದ ಜನರ ಮಧ್ಯೆ ಸಂವಾದ, ಸಂಜೆ ಗ್ರಾಮದ ಹಿರಿಯರೊಂದಿಗೆ ಗ್ರಾಮದ ವಿಶೇಷತೆಗಳ ಬಗ್ಗೆ ಪತ್ರಕರ್ತರ ಚಾವಡಿ ಚರ್ಚೆ, ಸಾಂಸ್ಕೃತಿಕ ಕಾರ್ಯಕ್ರಮ ನಡೆದು ಪತ್ರಕರ್ತರು ರಾತ್ರಿ ಗ್ರಾಮದಲ್ಲಿಯೇ ವಾಸ್ತವ್ಯ ನಡೆಸುವರು. ಅಲ್ಲದೆ ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ, ಗ್ರಾಮದ ಪ್ರಮುಖ ಸ್ಥಳಗಳಿಗೆ ಪತ್ರಕರ್ತರ ಭೇಟಿ ಕೂಡ ಒಳಗೊಂಡಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…

2 hours ago

ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ

ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…

2 hours ago

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

23 hours ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

2 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

2 days ago