Advertisement
ಸುದ್ದಿಗಳು

ಪತ್ರಕರ್ತರ ಗ್ರಾಮ ವಾಸ್ತವ್ಯ- ಡಿ.3 ಕ್ಕೆ ಪೂರ್ವಭಾವಿ ಸಭೆ

Share

ಸುಳ್ಯ:ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಹಯೋಗದಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ ಸುಳ್ಯ ತಾಲೂಕಿನ ಮಡಪ್ಪಾಡಿಯಲ್ಲಿ ಡಿಸೆಂಬರ್ ತಿಂಗಳ ಕೊನೆಯ ವಾರದಲ್ಲಿ ನಡೆಯಲಿದೆ. ಈ ಕುರಿತು ಚರ್ಚಿಸಲು ಪೂರ್ವಭಾವಿ ಸಭೆ ಡಿ.3. ಮಂಗಳವಾರ ಬೆಳಿಗ್ಗೆ 10 ಕ್ಕೆ ಸುಳ್ಯ ಎಪಿಎಂಸಿ ಸಭಾಂಗಣದಲ್ಲಿ ನಡೆಯಲಿದೆ‌. ಶಾಸಕ ಎಸ್‌.ಅಂಗಾರ ಹಾಗು ಇತರ ಜನಪ್ರತಿನಿಧಿಗಳು, ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಮತ್ತು ಇತರ ಅಧಿಕಾರಿಗಳು, ಪ್ರಮುಖರು, ಪತ್ರಕರ್ತರ ಸಂಘದ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.

ಎರಡನೇ ಗ್ರಾಮ ವಾಸ್ತವ್ಯ:

ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ವತಿಯಿಂದ ನಡೆಯುವ ಎರಡನೇ ಗ್ರಾಮ ವಾಸ್ತವ್ಯ ಮಡಪ್ಪಾಡಿಯಲ್ಲಿ ನಡೆಯಲಿದೆ. ಕಳೆದ ವರ್ಷ ಬೆಳ್ತಂಗಡಿ ತಾಲೂಕಿನ ಕುತ್ಲೂರಿನಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ ನಡೆದಿತ್ತು. ಜಿಲ್ಲೆಯ ಮತ್ತು ರಾಜ್ಯದ ಎಲ್ಲಾ ಮಾಧ್ಯಮಗಳ ಪ್ರಮುಖ ಪತ್ರಕರ್ತರು ಆಗಮಿಸಿ ಇಡೀ ದಿನ ಗ್ರಾಮದಲ್ಲಿ ವಾಸ್ತವ್ಯ ನಡೆಸುವರು. ಗ್ರಾಮ ವಾಸ್ತವ್ಯ ನಡೆಸುವ ಗ್ರಾಮ ಮತ್ತು ಸುತ್ತಲ ಗ್ರಾಮಗಳ ಮೂಲಭೂತ ಸಮಸ್ಯೆಗಳ ಮತ್ತು ಜನರು ಎದುರಿಸುವ ಸಮಸ್ಯೆಗಳಗಳನ್ನು ಬಿಂಬಿಸಿ ಅದರ ಪರಿಹಾರಕ್ಕೆ ಶ್ರಮಿಸುವುದರ ಜೊತೆಗೆ ಆ ಗ್ರಾಮದ ವಿಶೇಷತೆಯೆಡೆಗೆ ಬೆಳಕು ಚೆಲ್ಲುವ ನಿಟ್ಟಿನಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕುತ್ಲೂರಿನಲ್ಲಿ ನಡೆದ ಗ್ರಾಮ ವಾಸ್ತವ್ಯಕ್ಕೆ ಜನರಿಂದ, ಜನಪ್ರತಿನಿಧಿಗಳಿಂದ ಮತ್ತು ಅಧಿಕಾರಿಗಳಿಂದ ಅಭೂತಪೂರ್ವ ಬೆಂಬಲ ದೊರೆತು ಯಶಸ್ವಿಯಾಗಿತ್ತು.

ಗ್ರಾಮ ವಾಸ್ತವ್ಯದಲ್ಲಿ ಏನೆಲ್ಲ ಇರಲಿದೆ.?
ಬೆಳಿಗ್ಗೆ ಗ್ರಾಮ ವಾಸ್ತವ್ಯದ ಉದ್ಘಾಟನೆ ನಡೆಯಲಿದೆ. ಬಳಿಕ ಜಿಲ್ಲೆಯ ಎಲ್ಲಾ ಅಧಿಕಾರಿಗಳೊಂದಿಗೆ ಗ್ರಾಮದ ಮೂಲಭೂತ ಹಾಗು ಜನರ ಸಮಸ್ಯೆಗಳ ಬಗ್ಗೆ ಸಾರ್ವಜನಿಕರ ಚರ್ಚಾ ಕಾರ್ಯಕ್ರಮ ಇರಲಿದೆ‌. ಬಳಿಕ ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳ ಜೊತೆ ಸಾರ್ವಜನಿಕರ ಮುಖಾಮುಖಿ ನಡೆಯಲಿದೆ. ಬಳಿಕ ಪತ್ರಕರ್ತರು ಮತ್ತು ಗ್ರಾಮದ ಜನರ ಮಧ್ಯೆ ಸಂವಾದ, ಸಂಜೆ ಗ್ರಾಮದ ಹಿರಿಯರೊಂದಿಗೆ ಗ್ರಾಮದ ವಿಶೇಷತೆಗಳ ಬಗ್ಗೆ ಪತ್ರಕರ್ತರ ಚಾವಡಿ ಚರ್ಚೆ, ಸಾಂಸ್ಕೃತಿಕ ಕಾರ್ಯಕ್ರಮ ನಡೆದು ಪತ್ರಕರ್ತರು ರಾತ್ರಿ ಗ್ರಾಮದಲ್ಲಿಯೇ ವಾಸ್ತವ್ಯ ನಡೆಸುವರು. ಅಲ್ಲದೆ ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ, ಗ್ರಾಮದ ಪ್ರಮುಖ ಸ್ಥಳಗಳಿಗೆ ಪತ್ರಕರ್ತರ ಭೇಟಿ ಕೂಡ ಒಳಗೊಂಡಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

23 hours ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

1 day ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

1 day ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

2 days ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

2 days ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

2 days ago