ಧರ್ಮಸ್ಥಳ: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಹಕಾರದಲ್ಲಿ ಡಿಸೆಂಬರ್ 22 ರಂದು ಸುಳ್ಯ ತಾಲೂಕಿನ ಮಡಪ್ಪಾಡಿಯಲ್ಲಿ ನಡೆಯಲಿರುವ ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಆಹ್ವಾನ ನೀಡಲಾಯಿತು.
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಮತ್ತು ಜಿಲ್ಲಾ ಸಂಘದ ಪದಾಧಿಕಾರಿಗಳು ಧರ್ಮಸ್ಥಳದಲ್ಲಿ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ ಆಹ್ವಾನ ನೀಡಿದರು. ಪತ್ರಕರ್ತರ ಸಂಘದ ವತಿಯಿಂದ ಮಂಗಳೂರು ವಾರ್ತಾ ಹಾಗೂ ಸಾರ್ವಜನಿಕ ಸಂಪರ್ಕ ಇಲಾಖೆಗೆ ಶೀಘ್ರವೇ ನೂತನ ಬಸ್ ಕೊಡಿಸುವಂತೆಯೂ ಮುಖ್ಯಮಂತ್ರಿ ಅವರಿಗೆ ವಿನಂತಿಸಲಾಯಿತು.
ಪತ್ರಕರ್ತರಿಗೆ ಆರೋಗ್ಯ ಕಾರ್ಡ್ ಸೌಲಭ್ಯ ನೀಡಿದ ಮುಖ್ಯಮಂತ್ರಿ ಬಿ.ಯಸ್ ಯೆಡಿಯೂರಪ್ಪ ಅವರನ್ನು ಜಿಲ್ಲಾ ಸಂಘದ ವತಿಯಿಂದ ಅಭಿನಂದಿಸಲಾಯಿತು. ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರಾದ ಬಿ.ಎನ್.ಪುಷ್ಪರಾಜ್, ಭಾಸ್ಕರ್ ರೈ ಕಟ್ಟ ಉಪಸ್ಥಿತರಿದ್ದರು .
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…