Advertisement

ಪತ್ರಕರ್ತರ ಗ್ರಾಮ ವಾಸ್ತವ್ಯ ಸಿದ್ಧತೆ ಅಂತಿಮ ಹಂತದಲ್ಲಿ

Share

ಸುಳ್ಯ: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ದ.ಕ. ಜಿಲ್ಲಾಡಳಿತ, ದ.ಕ.ಜಿಲ್ಲಾ ಪಂಚಾಯತ್, ದ.ಕ.ಜಿಲ್ಲಾ ಪೊಲೀಸ್ ಇಲಾಖೆ , ಸುಳ್ಯ ತಾಲೂಕು ಆಡಳಿತ, ಸುಳ್ಯ ತಾಲೂಕು ಪಂಚಾಯತ್, ಗ್ರಾಮ ಪಂಚಾಯತ್ ಮಡಪ್ಪಾಡಿ ಮತ್ತು ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಡಿ.22 ರಂದು ಮಡಪ್ಪಾಡಿಯಲ್ಲಿ ನಡೆಯಲಿರುವ ಪತ್ರಕರ್ತರ ಗ್ರಾಮ ವಾಸ್ತವ್ಯದ ಸಿದ್ಧತೆ ಅಂತಿಮ ಹಂತದಲ್ಲಿದೆ.

ಸಿದ್ಧತೆಯ ಕುರಿತು ಚರ್ಚಿಸಲು ಪತ್ರಕರ್ತರ ಸಂಘ, ಗ್ರಾಮ ವಾಸ್ತವ್ಯ ಸಂಚಾಲನಾ ಸಮಿತಿಯ ಪದಾಧಿಕಾರಿಗಳು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಮತ್ತು ಪ್ರಮುಖರ ಸಭೆಯು ಮಡಪ್ಪಾಡಿ ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ನಡೆಯಿತು. ಕಾರ್ಯಕ್ರಮದ ಯಶಸ್ವಿಗೆ ವಿವಿಧ ಉಪಸಮಿತಿಗಳನ್ನು ರಚಿಸಿ ಕಾರ್ಯಕ್ರಮಗಳ ನಿರ್ವಹಣೆಯ ಜವಾಬ್ದಾರಿ ನೀಡಲಾಯಿತು. ಗ್ರಾಮ ಪಂಚಾಯತ್ ಅಧ್ಯಕ್ಷೆ ಶಕುಂತಳ ಕೇವಳ, ಉಪಾಧ್ಯಕ್ಷ ಎನ್.ಟಿ.ಹೊನ್ನಪ್ಪ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಮಡಪ್ಪಾಡಿ ಪ್ರಾಥಮಿಕ ಕೃಷಿಪತ್ತಿನ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪಿ.ಸಿ.ಜಯರಾಮ, ಎಪಿಎಂಸಿ ಮಾಜಿ ಅಧ್ಯಕ್ಷ ಜಯರಾಮ ಹಾಡಿಕಲ್ಲು, ಮಹಾತ್ಮಾ ಗಾಂಧಿ ಗ್ರಾಮ ಸೇವಾ ತಂಡದ ಸಂಚಾಲಕ ಎಂ.ಡಿ.ವಿಜಯಕುಮಾರ್, ಎಪಿಎಂಸಿ ನಿರ್ದೇಶಕ ವಿನಯಕುಮಾರ್ ಮುಳುಗಾಡು, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಭರತ್ ಮುಂಡೋಡಿ, ಪ್ರಮುಖರಾದ ಡಾ.ಯು.ಪಿ.ಶಿವಾನಂದ, ಮಿತ್ರದೇವ ಮಡಪ್ಪಾಡಿ, ಸೋಮಶೇಖರ ಕೇವಳ, ಸಚಿನ್ ಬಳ್ಳಡ್ಕ, ವಸಂತ ಬಳ್ಳಡ್ಜ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಧನಪತಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಜಿಲ್ಲಾ ಕಾರ್ಯಕಾರಿಣಿ ಸಮಿತಿ ಸದಸ್ಯರಾದ ಗಂಗಾಧರ ಕಲ್ಲಪಳ್ಳಿ, ಲೋಕೇಶ್ ಪೆರ್ಲಂಪಾಡಿ, ಭಾಸ್ಕರ ರೈ ಕಟ್ಟ, ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಗಿರೀಶ್ ಅಡ್ಪಂಗಾಯ, ಪತ್ರಕರ್ತರಾದ ದುರ್ಗಾಕುಮಾರ್ ನಾಯರ್ ಕೆರೆ, ಶಿವಪ್ರಸಾದ್ ಕೇರ್ಪಳ, ಲೋಕೇಶ್ ಗುಡ್ಡೆಮನೆ, ದಯಾನಂದ ಕೊರತ್ತೋಡಿ, ಶ್ರೀಧಾಮ ಅಡ್ಕಾರ್ ಮತ್ತಿತರರು ಉಪಸ್ಥಿತರಿದ್ದರು.

ಡಿ.18 ರಂದು ಅಧಿಕಾರಿಗಳ ಸಭೆ: ಜಿಲ್ಲಾಡಳಿತ, ದ.ಕ.ಜಿಲ್ಲಾ ಪಂಚಾಯತ್, ದ.ಕ.ಜಿಲ್ಲಾ ಪೊಲೀಸ್ ಇಲಾಖೆ , ಸುಳ್ಯ ತಾಲೂಕು ಆಡಳಿತ, ಸುಳ್ಯ ತಾಲೂಕು ಪಂಚಾಯತ್, ಗ್ರಾಮ ಪಂಚಾಯತ್ ಮಡಪ್ಪಾಡಿ ಸಹಯೋಗದಲ್ಲಿ ನಡೆಯುವ ಪತ್ರಕರ್ತರ ಗ್ರಾಮ ವಾಸ್ತವ್ಯದ ಬಗ್ಗೆ ಚರ್ಚಿಸಲು ಪೂರ್ವ ಭಾವಿ ಸಭೆಯು ಡಿ.18 ರಂದು ಪುತ್ತೂರು ಉಪವಿಭಾಗದ ಸಹಾಯಕ ಕಮೀಷನರ್ ಯತೀಶ್ ಉಳ್ಳಾಳ್ ಅಧ್ಯಕ್ಷತೆಯಲ್ಲಿ ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ. ವಿವಿಧ ಇಲಾಖಾ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 07-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು : ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ,

08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…

7 hours ago

ಕೆಲವು ರಾಜ್ಯಗಳಲ್ಲಿ ಸುಡುವ ಬಿಸಿಲು, ಇನ್ನೂ ಕೆಲವು ಕಡೆ ಮಳೆ – ದೇಶಾದ್ಯಂತ ಹವಾಮಾನ ವೈಪರೀತ್ಯ

ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…

13 hours ago

ಪರಿಸರ ಸಂರಕ್ಷಣೆಯಿಂದ ಮಾತ್ರ ಸುಸ್ಥಿರ ಆರೋಗ್ಯ ಸಾಧ್ಯ

ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…

13 hours ago

ಸ್ಥಳೀಯ ಸಂಸ್ಥೆ ಚುನಾವಣೆ ಶೀಘ್ರ – ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…

13 hours ago

ರೈತರಿಗೆ ಕನಿಷ್ಠ ಬೆಂಬಲ ಬೆಲೆ ಸೌಲಭ್ಯ ಘೋಷಣೆ : ರೈತರ ಆರ್ಥಿಕ ಭದ್ರತೆಗೆ ಕೇಂದ್ರ ಬದ್ಧ

ಕರ್ನಾಟಕ ಮತ್ತು ಮಹಾರಾಷ್ಟ್ರದ ರೈತರಿಗೆ ₹4,800 ಕೋಟಿಗೂ ಅಧಿಕ ಮೊತ್ತದ ಕನಿಷ್ಠ ಬೆಂಬಲ…

13 hours ago

ವನ್ಯಜೀವಿಗಳ ಸಂತಾನ ನಿಯಂತ್ರಣಕ್ಕೆ ತಜ್ಞರ ಚರ್ಚೆ ಅಗತ್ಯ

ವನ್ಯಜೀವಿಗಳ ಸಂಖ್ಯೆ ಹೆಚ್ಚಳದಿಂದ ಮಾನವ-ಆನೆ ಸಂಘರ್ಷ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಪ್ರದೇಶಗಳಲ್ಲಿ ಸಂತಾನ…

13 hours ago