Advertisement

ಪತ್ರಕರ್ತರ ಗ್ರಾಮ ವಾಸ್ತವ್ಯ ಸಿದ್ಧತೆ ಅಂತಿಮ ಹಂತದಲ್ಲಿ

Share

ಸುಳ್ಯ: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ದ.ಕ. ಜಿಲ್ಲಾಡಳಿತ, ದ.ಕ.ಜಿಲ್ಲಾ ಪಂಚಾಯತ್, ದ.ಕ.ಜಿಲ್ಲಾ ಪೊಲೀಸ್ ಇಲಾಖೆ , ಸುಳ್ಯ ತಾಲೂಕು ಆಡಳಿತ, ಸುಳ್ಯ ತಾಲೂಕು ಪಂಚಾಯತ್, ಗ್ರಾಮ ಪಂಚಾಯತ್ ಮಡಪ್ಪಾಡಿ ಮತ್ತು ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಡಿ.22 ರಂದು ಮಡಪ್ಪಾಡಿಯಲ್ಲಿ ನಡೆಯಲಿರುವ ಪತ್ರಕರ್ತರ ಗ್ರಾಮ ವಾಸ್ತವ್ಯದ ಸಿದ್ಧತೆ ಅಂತಿಮ ಹಂತದಲ್ಲಿದೆ.

ಸಿದ್ಧತೆಯ ಕುರಿತು ಚರ್ಚಿಸಲು ಪತ್ರಕರ್ತರ ಸಂಘ, ಗ್ರಾಮ ವಾಸ್ತವ್ಯ ಸಂಚಾಲನಾ ಸಮಿತಿಯ ಪದಾಧಿಕಾರಿಗಳು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಮತ್ತು ಪ್ರಮುಖರ ಸಭೆಯು ಮಡಪ್ಪಾಡಿ ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ನಡೆಯಿತು. ಕಾರ್ಯಕ್ರಮದ ಯಶಸ್ವಿಗೆ ವಿವಿಧ ಉಪಸಮಿತಿಗಳನ್ನು ರಚಿಸಿ ಕಾರ್ಯಕ್ರಮಗಳ ನಿರ್ವಹಣೆಯ ಜವಾಬ್ದಾರಿ ನೀಡಲಾಯಿತು. ಗ್ರಾಮ ಪಂಚಾಯತ್ ಅಧ್ಯಕ್ಷೆ ಶಕುಂತಳ ಕೇವಳ, ಉಪಾಧ್ಯಕ್ಷ ಎನ್.ಟಿ.ಹೊನ್ನಪ್ಪ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಮಡಪ್ಪಾಡಿ ಪ್ರಾಥಮಿಕ ಕೃಷಿಪತ್ತಿನ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪಿ.ಸಿ.ಜಯರಾಮ, ಎಪಿಎಂಸಿ ಮಾಜಿ ಅಧ್ಯಕ್ಷ ಜಯರಾಮ ಹಾಡಿಕಲ್ಲು, ಮಹಾತ್ಮಾ ಗಾಂಧಿ ಗ್ರಾಮ ಸೇವಾ ತಂಡದ ಸಂಚಾಲಕ ಎಂ.ಡಿ.ವಿಜಯಕುಮಾರ್, ಎಪಿಎಂಸಿ ನಿರ್ದೇಶಕ ವಿನಯಕುಮಾರ್ ಮುಳುಗಾಡು, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಭರತ್ ಮುಂಡೋಡಿ, ಪ್ರಮುಖರಾದ ಡಾ.ಯು.ಪಿ.ಶಿವಾನಂದ, ಮಿತ್ರದೇವ ಮಡಪ್ಪಾಡಿ, ಸೋಮಶೇಖರ ಕೇವಳ, ಸಚಿನ್ ಬಳ್ಳಡ್ಕ, ವಸಂತ ಬಳ್ಳಡ್ಜ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಧನಪತಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಜಿಲ್ಲಾ ಕಾರ್ಯಕಾರಿಣಿ ಸಮಿತಿ ಸದಸ್ಯರಾದ ಗಂಗಾಧರ ಕಲ್ಲಪಳ್ಳಿ, ಲೋಕೇಶ್ ಪೆರ್ಲಂಪಾಡಿ, ಭಾಸ್ಕರ ರೈ ಕಟ್ಟ, ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಗಿರೀಶ್ ಅಡ್ಪಂಗಾಯ, ಪತ್ರಕರ್ತರಾದ ದುರ್ಗಾಕುಮಾರ್ ನಾಯರ್ ಕೆರೆ, ಶಿವಪ್ರಸಾದ್ ಕೇರ್ಪಳ, ಲೋಕೇಶ್ ಗುಡ್ಡೆಮನೆ, ದಯಾನಂದ ಕೊರತ್ತೋಡಿ, ಶ್ರೀಧಾಮ ಅಡ್ಕಾರ್ ಮತ್ತಿತರರು ಉಪಸ್ಥಿತರಿದ್ದರು.

ಡಿ.18 ರಂದು ಅಧಿಕಾರಿಗಳ ಸಭೆ: ಜಿಲ್ಲಾಡಳಿತ, ದ.ಕ.ಜಿಲ್ಲಾ ಪಂಚಾಯತ್, ದ.ಕ.ಜಿಲ್ಲಾ ಪೊಲೀಸ್ ಇಲಾಖೆ , ಸುಳ್ಯ ತಾಲೂಕು ಆಡಳಿತ, ಸುಳ್ಯ ತಾಲೂಕು ಪಂಚಾಯತ್, ಗ್ರಾಮ ಪಂಚಾಯತ್ ಮಡಪ್ಪಾಡಿ ಸಹಯೋಗದಲ್ಲಿ ನಡೆಯುವ ಪತ್ರಕರ್ತರ ಗ್ರಾಮ ವಾಸ್ತವ್ಯದ ಬಗ್ಗೆ ಚರ್ಚಿಸಲು ಪೂರ್ವ ಭಾವಿ ಸಭೆಯು ಡಿ.18 ರಂದು ಪುತ್ತೂರು ಉಪವಿಭಾಗದ ಸಹಾಯಕ ಕಮೀಷನರ್ ಯತೀಶ್ ಉಳ್ಳಾಳ್ ಅಧ್ಯಕ್ಷತೆಯಲ್ಲಿ ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ. ವಿವಿಧ ಇಲಾಖಾ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…

1 hour ago

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…

21 hours ago

200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ

ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…

21 hours ago

ರಬ್ಬರ್ ತೋಟ ಹಸಿರಾಗಿರಬಹುದು… ಆದರೆ ಕಾಡಿಗೆ ಪರ್ಯಾಯವಲ್ಲ…! ಮಲೇಷ್ಯಾ ಅಧ್ಯಯನ ವರದಿ

ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…

1 day ago

ಅಡುಗೆ ಎಣ್ಣೆ ಆಮದು 7% ಏರಿಕೆ – ಭಾರತ ಇನ್ನೂ ಆಮದು ಅವಲಂಬಿತ

ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್‌ನಲ್ಲಿ ಆಮದು…

1 day ago

ಕೇರಳದಲ್ಲಿ ಪ್ರತಿವರ್ಷ ₹1,200 ಕೋಟಿ ಮೌಲ್ಯದ ಹಲಸು ವ್ಯರ್ಥ..! ಮೌಲ್ಯವರ್ಧನೆಗೆ ಸರ್ಕಾರ ಮುಂದಾಗಲಿ ಎಂಬ ಒತ್ತಾಯ

ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…

1 day ago