ಮಂಗಳೂರು: ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆತಿಥ್ಯದಲ್ಲಿ ಕಡಲ ನಗರಿ ಮಂಗಳೂರಿನಲ್ಲಿ ನಡೆಯುವ ರಾಜ್ಯ ಪತ್ರಕರ್ತರ 35ನೇ ಸಮ್ಮೇಳನಕ್ಕೆ ಆಕರ್ಷಕ ಮೆರವಣಿಗೆಯ ಮೂಲಕ ಸಂಭ್ರಮದ ಚಾಲನೆ ದೊರೆತಿದೆ.
ಸಮ್ಮೇಳನದಲ್ಲಿ ಸಾನ್ನಿಧ್ಯ ವಹಿಸಿರುವ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ, ಸಮ್ಮೇಳನದ ಉದ್ಘಾಟಕರಾದ
ಉಪ ಮುಖ್ಯ ಮಂತ್ರಿ ಸಿ.ಎನ್. ಅಶ್ವತ್ಥ ನಾರಾಯಣ, ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ವಿಧಾನಪರಿಷತ್ ಸದಸ್ಯ ಕೆ.ಹರೀಶ್ ಕುಮಾರ್ ಮತ್ತಿತರ ಅತಿಥಿಗಳನ್ನು ಮೆರವಣಿಗೆಯಲ್ಲಿ ಕರೆ ತರಲಾಯಿತು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಜಿಲ್ಲಾಧ್ಯಕ್ಷ, ಶ್ರೀನಿವಾಸ ನಾಯಕ್ ಇಂದಾಜೆ, ಪ್ರೆಸ್ ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು, ಪತ್ರಿಕಾ ಭವನ ಟ್ರಸ್ಟ್ ನ ಅಧ್ಯಕ್ಷ ಆನಂದ ಶೆಟ್ಟಿ, ಸಮ್ಮೇಳನದ ಸಂಚಾಲಕ ಬಾಳ ಜಗನ್ನಾಥ ಶೆಟ್ಟಿ ಮತ್ತು ಪತ್ರಕರ್ತರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಪಲ್ಲಕ್ಕಿಯಲ್ಲಿ ಇಂದಿನ ಪತ್ರಿಕೆಗಳನ್ನು ಮತ್ತು ಟಿವಿ ವಾಹನಿಗಳ ಲೋಗೋಗಳನ್ನು ಇರಿಸಿ ಗೌರವ ಪೂರ್ವಕವಾಗಿ ಮೆರವಣಿಗೆಯಲ್ಲಿ ತರಲಾಯಿತು.
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…