Advertisement
ಸುದ್ದಿಗಳು

ಪತ್ರಕರ್ತರ ರಾಜ್ಯ ಸಮ್ಮೇಳನ ಮಾಹಿತಿ ಕೈಪಿಡಿ ಬಿಡುಗಡೆ

Share

ಮಂಗಳೂರು: ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಮಾ.7 ಮತ್ತು 8ರಂದು ನಡೆಯಲಿರುವ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮ್ಮೇಳನ ಪೂರ್ವಭಾವಿಯಾಗಿ ‘ಮಾಹಿತಿ ಕೈಪಿಡಿ’ಯನ್ನು ಶಾಸಕ, ಸಮ್ಮೇಳನ ಕಾರ್ಯಾಧ್ಯಕ್ಷ ಡಿ.ವೇದವ್ಯಾಸ ಕಾಮತ್ ಮಂಗಳವಾರ ನಗರದ ಪತ್ರಿಕಾಭವನದಲ್ಲಿ ಬಿಡುಗಡೆಗೊಳಿಸಿದರು.

ಇಂತಹ ಸಮ್ಮೇಳನದಿಂದ ರಾಜ್ಯಮಟ್ಟದಲ್ಲಿ ಮಂಗಳೂರು ಖ್ಯಾತಿ ಪಡೆಯಲಿದೆ. ಬ್ರಾೃಂಡ್ ಮಂಗಳೂರು ಪರಿಕಲ್ಪನೆ ಸಾಧ್ಯವಾಗುವುದರ ಜತೆಗೆ ಮಂಗಳೂರಿನ ಅಭಿವೃದ್ಧಿಗೆ ಪೂರಕ ವಾತಾವರಣ ನಿರ್ಮಾಣವಾಗಲಿದೆ. ರಾಜ್ಯಮಟ್ಟದ ಸಮ್ಮೇಳನಕ್ಕೆ ಎಲ್ಲ ರೀತಿಯ ಸಹಕಾರ ನೀಡಲು ಸಿದ್ಧನಿದ್ದು, ಯಾವುದೇ ಜವಾಬ್ದಾರಿ ನೀಡಿದರೂ ಯಶಸ್ವಿಯಾಗಿ ನಿಭಾಯಿಸುತ್ತೇನೆ ಎಂದರು.

ಸಮ್ಮೇಳನ ಸಮಿತಿ ಸಂಚಾಲಕ, ಶಾಸಕ ಡಾ. ವೈ. ಭರತ್ ಶೆಟ್ಟಿ, ಮಂಗಳೂರು ಆತಿಥ್ಯಕ್ಕೆ ಉತ್ತಮ ಹೆಸರು ಪಡೆದಿದ್ದು, ಆದ್ದರಿಂದಲೇ ಹೊರಗಿನವರು ಮಂಗಳೂರನ್ನು ಹೆಚ್ಚು ಇಷ್ಟ ಪಡುತ್ತಾರೆ. ಇಂತಹ ಸಮ್ಮೇಳನದಿಂದ ಧಾರ್ಮಿಕ ಮತ್ತು ಬೀಚ್ ಪ್ರವಾಸೋದ್ಯಮಕ್ಕೆ ಅವಕಾಶ ಸಿಗುವುದರ ಜತೆಗೆ ಮಂಗಳೂರಿನ ಬ್ರಾೃಂಡ್ ವ್ಯಾಲ್ಯೂ ಕೂಡ ಜಾಸ್ತಿಯಾಗುತ್ತದೆ ಎಂದರು.

ಮಂಗಳೂರು ಸಿಟಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ದಿಲ್‌ರಾಜ್ ಆಳ್ವ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ,ರಾಜ್ಯ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಖಾದರ್ ಶಾ ಉಪಸ್ಥಿತರಿದ್ದರು.

ವಿಜಯ ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

16 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

1 day ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

1 day ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

1 day ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

1 day ago