Advertisement
ಸುದ್ದಿಗಳು

ಪತ್ರಕರ್ತರ ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ಸ್ಪರ್ಧಾ ಕಾರ್ಯಕ್ರಮ.

Share

ಸುಳ್ಯ. ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆಯ ಪ್ರಯುಕ್ತ ಪ್ರೌಢ ಶಾಲೆ, ಪದವಿಪೂರ್ವ ಮತ್ತು ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ದಿ.ಅಬ್ದುಲ್ ಸತ್ತಾರ್ ಗೋರಡ್ಕ ಮತ್ತು ದಿ. ವೆಂಕಟ್ ಮೋಂಟಡ್ಕ ಸ್ಮರಣಾರ್ಥ ವಿವಿಧ ಸ್ಪರ್ಧಾ ಕಾರ್ಯಕ್ರಮ ಎಪಿಎಂಸಿ ಸಭಾಂಗಣದಲ್ಲಿ ಶನಿವಾರ ನಡೆಯಿತು.
ಸುಳ್ಯ ಎಪಿಎಂಸಿ ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪತ್ರಿಕೆಗಳ ಮೂಲಕ ಸಮಾಜದಲ್ಲಿ ಬದಲಾವಣೆ ಮತ್ತು ಸಮಾಜದ ಪ್ರಗತಿ ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟರು. ಯಾವುದೇ ವ್ಯಕ್ತಿ‌ ಅಥವಾ ಸಂಘಟನೆ ಯಾವುದೇ ಉತ್ತಮ ಕೆಲಸ ಸಾಧನೆ ಮಾಡಿದರೆ ಪತ್ರಿಕೆಗಳ ಮೂಲಕ ಪ್ರಚಾರ ಪಡೆದು ನಾಲ್ಕಾರು ಜನರಿಗೆ ಮುಟ್ಟಿದರೆ ಮಾತ್ರ ಅವರ ಸಾಧನೆ ಸಾರ್ಥಕವಾಗುತ್ತದೆ ಎಂದರು.
ಮುಖ್ಯ ಅತಿಥಿಯಾಗಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಪಿ‌.ಮಹದೇವ್ ಮಾತನಾಡಿ ಪತ್ರಿಕಾ ಕ್ಷೇತ್ರ ಅಭಿವ್ಯಕ್ತಿ ಸ್ವಾತಂತ್ರ್ಯದ ಅಡಪಾಯ ಎಂದರು. ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಎತ್ತಿಹಿಡಿದು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಉಳಿಸಲು ಪತ್ರಿಕೆಗಳು ಅನಿವಾರ್ಯ. ಅಂತರ್ಜಾಲದಲ್ಲಿ ಎಷ್ಟೇ ಮಾಹಿತಿ ಬಂದರೂ ಅದು ಕ್ಷಣಿಕವಾದುದು. ನಿರಂತರ ಓದುವ ಹವ್ಯಾಸದಿಂದ ಮಾತ್ರ ಮಾಹಿತಿಗಳು ಸ್ಮೃತಿಪಟಲದಲ್ಲಿ ಉಳಿದು ಜ್ಞಾನ ವೃದ್ಧಿಯಾಗಲು ಸಾಧ್ಯ. ಪತ್ರಿಕೆಗಳಲ್ಲಿ ಬರುವ ಅಧ್ಯಯನಾತ್ಮಕ ಲೇಖನಗಳನ್ನು ಸಂಗ್ರಹಿಸಿ ಅದನ್ನು ವಿದ್ಯಾರ್ಥಿಗಳಿಗೆ ತಿಳಿಸಲು ಶಿಕ್ಷಕರಿಗೆ ಸೂಚನೆ ನೀಡಿದ್ದೇನೆ ಎಂದು ಅವರು ಹೇಳಿದರು.

ಇನ್ನೊರ್ವ ಮುಖ್ಯ ಅತಿಥಿಯಾಗಿದ್ದ ಎಪಿಎಂಸಿ ಉಪಾಧ್ಯಕ್ಷ ಸಂತೋಷ್ ಜಾಕೆ ಮಾತನಾಡಿ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮುದ್ರಣ ಮಾಧ್ಯಮ ಸರ್ವ ವ್ಯಾಪಿಯಾಗಿದ್ದು ಅದಕ್ಕೆ ಮಾತ್ರ ಉತ್ತಮ ಭವಿಷ್ಯವಿದೆ. ಪತ್ರಿಕೆಗಳ ಓದುಗರು ಕಡಿಮೆಯಾಗುವುದಿಲ್ಲ ಅದು ನಿರಂತರ ಏರಿಕೆಯಲ್ಲಿದೆ ಎಂಬುದು ನನ್ನ ಅನಿಸಿಕೆ ಎಂದರು.
ಅಡ್ಪಂಗಾಯ ವಿವೇಕ ಆಂಗ್ಲ ಮಾಧ್ಯಮ ಶಾಲೆಯ ಸಂಚಾಲಕ ಹಸೈನಾರ್ ಹಾಜಿ ಗೋರಡ್ಕ ಮುಖ್ಯ ಅತಿಥಿಯಾಗಿದ್ದು ಶುಭ ಹಾರೈಸಿದರು.
ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮುರಳೀಧರ ಅಡ್ಡನಪಾರೆ ಅಧ್ಯಕ್ಷತೆ ವಹಿಸಿದ್ದರು. ಸಂಘದ ಗೌರವಾಧ್ಯಕ್ಷ ತೇಜೇಶ್ವರ ಕುಂದಲ್ಪಾಡಿ, ಕಾರ್ಯದರ್ಶಿ ಗಿರೀಶ್ ಅಡ್ಪಂಗಾಯ, ಕೋಶಾಧಿಕಾರಿ ಸತೀಶ್ ಹೊದ್ದೆಟ್ಟಿ ಉಪಸ್ಥಿತರಿದ್ದರು. ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾದ ಗಂಗಾಧರ ಮಟ್ಟಿ ಸ್ವಾಗತಿಸಿ, ಜಯಪ್ರಕಾಶ್ ಕುಕ್ಕೆಟ್ಟಿ ಪ್ರಸ್ತಾವನೆಗೈದರು, ಶಿವಪ್ರಸಾದ್ ಕೇರ್ಪಳ ವಂದಿಸಿದರು. ಲೋಕೇಶ್ ಪೆರ್ಲಂಪಾಡಿ ಕಾರ್ಯಕ್ರಮ ನಿರೂಪಿಸಿದರು.

ವಿವಿಧ ಸ್ಪರ್ಧೆಗಳು:

ಪ್ರೌಡಶಾಲಾ ವಿದ್ಯಾರ್ಥಿಗಳಿಗೆ ‘ಜಲ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ ‘ ವಿಷಯದಲ್ಲಿ ಪ್ರಬಂಧ ಸ್ಪರ್ಧೆ, ಪದವಿಪೂರ್ವ ವಿದ್ಯಾರ್ಥಿಗಳಿಗೆ ‘ಪ್ರಜಾಪ್ರಭುತ್ವದ ಆಶಯಗಳು ಮತ್ತು ಪ್ರಸಕ್ತ ರಾಜಕೀಯ’ ಎಂಬ ವಿಷಯದಲ್ಲಿ ಭಾಷಣ ಸ್ಪರ್ಧೆ ಮತ್ತು ಪದವಿ ವಿದ್ಯಾರ್ಥಿಗಳಿಗೆ ‘ಮೋಕ್ ಪ್ರೆಸ್’ ಎಂಬ ವಿನೂತನ ಸ್ಪರ್ಧೆ ನಡೆಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗ್ರಾಮೀಣ ಮೌಲ್ಯಗಳು ಮತ್ತು ನಗರ ಜೀವನ – ಸಮತೋಲನವೇ ನಿಜವಾದ ಮಾರ್ಗ!

ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…

6 hours ago

ದೇಶಾದ್ಯಂತ ಹವಾಮಾನದಲ್ಲಿ ಬದಲಾವಣೆ..! 13 ರಾಜ್ಯಗಳಲ್ಲಿ ಮಳೆ-ಚಂಡಮಾರುತ ಎಚ್ಚರಿಕೆ, ಉತ್ತರ ಭಾರತದಲ್ಲಿ 40°C ದಾಟಿದ ಉಷ್ಣತೆ

ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…

6 hours ago

ಅಂಜನಾದ್ರಿ ಬೆಟ್ಟ ಏರುವವರಿಗೆ ಸಮಯ ನಿಗದಿ .! ಮಧ್ಯಾಹ್ನ 11ರಿಂದ 4ರವರೆಗೆ ಪ್ರವೇಶ ಬ್ಯಾನ್

ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…

6 hours ago

ಕಲಬುರಗಿಯಲ್ಲಿ 43.2°C ತಾಪಮಾನ ದಾಖಲು..! ರಾಜ್ಯದಲ್ಲಿ ಬಿಸಿ ಏರಿಕೆ – ಮುಂದಿನ 5 ದಿನ ಎಚ್ಚರಿಕೆ

ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…

7 hours ago

ಹವಾಮಾನ ವರದಿ | 17-04-2026 | ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – ಏಪ್ರಿಲ್ 18 ರಿಂದ ಮಳೆ ಹೆಚ್ಚಳ

ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…

24 hours ago

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

2 days ago