Advertisement
ಸುದ್ದಿಗಳು

ಪತ್ರಕರ್ತರ ಸಂಘ ಮತ್ತು ಅರಣ್ಯ ಇಲಾಖೆ ಸಹಯೋಗದಲ್ಲಿ ವನಮಹೋತ್ಸವ

Share

ಮಂಗಳೂರು: ಸ್ಮಾರ್ಟ್ ಸಿಟಿಯಾಗಿ ರೂಪುಗೊಳ್ಳುತ್ತಿರುವ ಮಂಗಳೂರು ನಗರ ಅಭಿವೃದ್ಧಿಯ ಜತೆಗೆ ಹಸಿರೀಕರಣಕ್ಕೆ ವಿಶೇಷ ಆದ್ಯತೆ ನೀಡಬೇಕು. ನಗರದ ಕೆಲವು ವಾರ್ಡ್‌ಗಳಲ್ಲಿ ಶೇ.10ರಷ್ಟು ಹಸಿರೀಕರಣವಿಲ್ಲದಿರುವುದು ನಿಜಕ್ಕೂ ಭವಿಷ್ಯ ದೃಷ್ಟಿಯಿಂದ ಆತಂಕಕಾರಿ. ಪರಿಸರ ಸಂರಕ್ಷಿಸಿದರೆ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಹೇಳಿದರು.

ದ.ಕ. ಜಿಲ್ಲಾ ಪತ್ರಕರ್ತರ ಸಂಘ, ಅರಣ್ಯ ಇಲಾಖೆ ಸಹಯೋಗದಲ್ಲಿ ನಗರದಲ್ಲಿ ಶನಿವಾರ ನಡೆದ ವನಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಅರಣ್ಯ ಇಲಾಖೆ ಪರಿಸರ ಇಲಾಖೆ ಬಹಳಷ್ಟು ಕೆಲಸ ಮಾಡುತ್ತಿದ್ದು, ಪತ್ರಕರ್ತರ ಸಂಘವೂ ಸಾಥ್ ನೀಡುತ್ತಿರುವುದು ಖುಷಿಯ ವಿಚಾರ. ನಗರವನ್ನು ಹಸಿರೀಕರಣ ಮಾಡುವ ಉದ್ದೇಶದಿಂದ 10ಸಾವಿರ ಗಿಡ ನೆಡುವ ಕಾರ್ಯಕ್ರಮ ಈಗಾಗಲೇ ನಡೆದಿದ್ದು, ಮುಂದಿನ ದಿನಗಳಲ್ಲಿ ಪ್ರತಿ ವಾರ್ಡ್‌ಗಳಲ್ಲಿ ಈ ರೀತಿಯ ಕಾರ್ಯಕ್ರಮ ಆಗಬೇಕಿದೆ. ಪ್ರಕೃತಿ ವಿಕೋಪವನ್ನು ತಡೆಯಬೇಕಾದರೆ ಪ್ರಕೃತಿ ರಕ್ಷಣೆಯಾಗಬೇಕಿದೆ. ನಮ್ಮ ಹಿರಿಯರಿಂದ ಬಳುವಳಿಯಾದ ಈ ಪರಿಸರವನ್ನು ರಕ್ಷಿಸಿ ಮುಂದಿನ ಪೀಳಿಗೆಗೆ ಬಿಟ್ಟುಕೊಡುವ ದೊಡ್ಡ ಜವಾಬ್ದಾರಿ ನಮ್ಮ ಮೇಲಿದೆ ಎಂದರು.

ವಲಯ ಅರಣ್ಯಾಧಿಕಾರಿ ಪಿ.ಶ್ರೀಧರ್ ಮಾತನಾಡಿ ಅರಣ್ಯ ಇಲಾಖೆಯಿಂದ ಗಿಡ ವಿತರಣೆ ಮಾಡುವುದು, ನೆಡುವುದು ಮುಖ್ಯ ಅಲ್ಲ. ಅದನ್ನು ಪೋಷಿಸುವ ಕೆಲಸವನ್ನು ಸ್ಥಳೀಯ ಸಂಘ-ಸಂಸ್ಥೆಗಳು ಮಾಡಿದಾಗ ಪರಿಸರ ಸಂರಕ್ಷಣೆ ಸಾಧ್ಯ. ಈಗಾಗಲೇ ಪರಿಸರ ಪ್ರಿಯರು, ಅರಣ್ಯ ಇಲಾಖೆ ಈ ನಿಟ್ಟಿನಲ್ಲಿ ಹಲವು ಕಾರ್ಯಕ್ರಮ ಮಾಡುತ್ತಿದ್ದು, ಸೆ.24ರಂದು ಬೆಳಗ್ಗೆ 9.30ಕ್ಕೆ ಪುರಭವನದಲ್ಲಿ ವೃಕ್ಷೋತ್ಸವ ಕಾರ್ಯಕ್ರಮ ನಡೆಯಲಿದೆ ಎಂದರು.

ಕಾರ್ಯಕ್ರಮದಲ್ಲಿ ದ.ಕ. ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಹೆಚ್.ಆರ್. ನಾಯ್ಕ, ಸ್ಮಾರ್ಟ್ ಸಿಟಿ ಜನರಲ್ ಮ್ಯಾನೇಜರ್ ಮಹೇಶ್ ಕುಮಾರ್, ಪರಿಸರವಾದಿ ಕೃಷ್ಣಪ್ಪ ಮತ್ತಿತರರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಪತ್ರಕರ್ತ ಜಿತೇಂದ್ರ ಕುಂದೇಶ್ವರ್ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಎಲೆಚುಕ್ಕೆ ರೋಗ | ತಕ್ಷಣದ ಪರಿಹಾರಕ್ಕಿಂತ ವೈಜ್ಞಾನಿಕ ನಿರ್ವಹಣೆ ಮುಖ್ಯ | 3 ವರ್ಷದ ಅಧ್ಯಯನದ ಬಳಿಕವೇ ಅಂತಿಮ ಪರಿಹಾರ

ಅಡಿಕೆ ಎಲೆಚುಕ್ಕೆ ರೋಗಕ್ಕೆ ತಕ್ಷಣದ ಪರಿಹಾರವಿಲ್ಲ, 3 ವರ್ಷದ ಅಧ್ಯಯನದ ಬಳಿಕವೇ ಅಂತಿಮ…

20 hours ago

ಸರ್ಕಾರದ ಸೌಲಭ್ಯಕ್ಕೆ ‘ಫ್ರೂಟ್ಸ್ ಐಡಿ’ ಕಡ್ಡಾಯ | ರೈತರಿಗೆ ಸೂಚನೆ

ಸರ್ಕಾರದ ಸೌಲಭ್ಯ ಪಡೆಯಲು ರೈತರಿಗೆ ‘FRUITS ID’ ಕಡ್ಡಾಯ. ನೋಂದಣಿ ಮಾಡದಿದ್ದರೆ ಭವಿಷ್ಯದ…

23 hours ago

ಗದಗ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ತಾಪಮಾನ | ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ ಜಿಲ್ಲಾಧಿಕಾರಿ

ಗದಗ ಜಿಲ್ಲೆಯಲ್ಲಿ ಮುಂದಿನ 3-6 ದಿನ ತೀವ್ರ ಬಿಸಿಗಾಳಿ ಸಾಧ್ಯತೆ. ಸಾರ್ವಜನಿಕರು ಆರೋಗ್ಯದ…

24 hours ago

ಅಡಿಕೆ ಎಲೆ ಚುಕ್ಕಿ ರೋಗ ನಿರ್ವಹಣೆ | ಗುತ್ತಿಗಾರಿನ ಪ್ರಾತ್ಯಕ್ಷಿಕೆ ತೋಟಕ್ಕೆ ಸಿಪಿಸಿಆರ್‌ಐ ನಿರ್ದೇಶಕರ ಭೇಟಿ | ವೈಜ್ಞಾನಿಕ ಕ್ರಮಗಳು ರೈತರಿಗೆ ಆಶಾಕಿರಣ

ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್‌ಐ ಪ್ರಾತ್ಯಕ್ಷಿಕೆ ಮುಂದುವರಿದಿದೆ. ವೈಜ್ಞಾನಿಕ ಕ್ರಮಗಳು ಮತ್ತು…

1 day ago

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ – ಆಲಿಕಲ್ಲು ಮಳೆಯಿಂದ ರೈತರ ಬೆಳೆ ನಷ್ಟ

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…

2 days ago

ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!

ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…

3 days ago