ಮಂಗಳೂರು: ಸ್ಮಾರ್ಟ್ ಸಿಟಿಯಾಗಿ ರೂಪುಗೊಳ್ಳುತ್ತಿರುವ ಮಂಗಳೂರು ನಗರ ಅಭಿವೃದ್ಧಿಯ ಜತೆಗೆ ಹಸಿರೀಕರಣಕ್ಕೆ ವಿಶೇಷ ಆದ್ಯತೆ ನೀಡಬೇಕು. ನಗರದ ಕೆಲವು ವಾರ್ಡ್ಗಳಲ್ಲಿ ಶೇ.10ರಷ್ಟು ಹಸಿರೀಕರಣವಿಲ್ಲದಿರುವುದು ನಿಜಕ್ಕೂ ಭವಿಷ್ಯ ದೃಷ್ಟಿಯಿಂದ ಆತಂಕಕಾರಿ. ಪರಿಸರ ಸಂರಕ್ಷಿಸಿದರೆ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಹೇಳಿದರು.
ದ.ಕ. ಜಿಲ್ಲಾ ಪತ್ರಕರ್ತರ ಸಂಘ, ಅರಣ್ಯ ಇಲಾಖೆ ಸಹಯೋಗದಲ್ಲಿ ನಗರದಲ್ಲಿ ಶನಿವಾರ ನಡೆದ ವನಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಅರಣ್ಯ ಇಲಾಖೆ ಪರಿಸರ ಇಲಾಖೆ ಬಹಳಷ್ಟು ಕೆಲಸ ಮಾಡುತ್ತಿದ್ದು, ಪತ್ರಕರ್ತರ ಸಂಘವೂ ಸಾಥ್ ನೀಡುತ್ತಿರುವುದು ಖುಷಿಯ ವಿಚಾರ. ನಗರವನ್ನು ಹಸಿರೀಕರಣ ಮಾಡುವ ಉದ್ದೇಶದಿಂದ 10ಸಾವಿರ ಗಿಡ ನೆಡುವ ಕಾರ್ಯಕ್ರಮ ಈಗಾಗಲೇ ನಡೆದಿದ್ದು, ಮುಂದಿನ ದಿನಗಳಲ್ಲಿ ಪ್ರತಿ ವಾರ್ಡ್ಗಳಲ್ಲಿ ಈ ರೀತಿಯ ಕಾರ್ಯಕ್ರಮ ಆಗಬೇಕಿದೆ. ಪ್ರಕೃತಿ ವಿಕೋಪವನ್ನು ತಡೆಯಬೇಕಾದರೆ ಪ್ರಕೃತಿ ರಕ್ಷಣೆಯಾಗಬೇಕಿದೆ. ನಮ್ಮ ಹಿರಿಯರಿಂದ ಬಳುವಳಿಯಾದ ಈ ಪರಿಸರವನ್ನು ರಕ್ಷಿಸಿ ಮುಂದಿನ ಪೀಳಿಗೆಗೆ ಬಿಟ್ಟುಕೊಡುವ ದೊಡ್ಡ ಜವಾಬ್ದಾರಿ ನಮ್ಮ ಮೇಲಿದೆ ಎಂದರು.
ವಲಯ ಅರಣ್ಯಾಧಿಕಾರಿ ಪಿ.ಶ್ರೀಧರ್ ಮಾತನಾಡಿ ಅರಣ್ಯ ಇಲಾಖೆಯಿಂದ ಗಿಡ ವಿತರಣೆ ಮಾಡುವುದು, ನೆಡುವುದು ಮುಖ್ಯ ಅಲ್ಲ. ಅದನ್ನು ಪೋಷಿಸುವ ಕೆಲಸವನ್ನು ಸ್ಥಳೀಯ ಸಂಘ-ಸಂಸ್ಥೆಗಳು ಮಾಡಿದಾಗ ಪರಿಸರ ಸಂರಕ್ಷಣೆ ಸಾಧ್ಯ. ಈಗಾಗಲೇ ಪರಿಸರ ಪ್ರಿಯರು, ಅರಣ್ಯ ಇಲಾಖೆ ಈ ನಿಟ್ಟಿನಲ್ಲಿ ಹಲವು ಕಾರ್ಯಕ್ರಮ ಮಾಡುತ್ತಿದ್ದು, ಸೆ.24ರಂದು ಬೆಳಗ್ಗೆ 9.30ಕ್ಕೆ ಪುರಭವನದಲ್ಲಿ ವೃಕ್ಷೋತ್ಸವ ಕಾರ್ಯಕ್ರಮ ನಡೆಯಲಿದೆ ಎಂದರು.
ಕಾರ್ಯಕ್ರಮದಲ್ಲಿ ದ.ಕ. ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಹೆಚ್.ಆರ್. ನಾಯ್ಕ, ಸ್ಮಾರ್ಟ್ ಸಿಟಿ ಜನರಲ್ ಮ್ಯಾನೇಜರ್ ಮಹೇಶ್ ಕುಮಾರ್, ಪರಿಸರವಾದಿ ಕೃಷ್ಣಪ್ಪ ಮತ್ತಿತರರು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಪತ್ರಕರ್ತ ಜಿತೇಂದ್ರ ಕುಂದೇಶ್ವರ್ ನಿರೂಪಿಸಿದರು.
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…