ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಮಂಗಳೂರಿನ ಪುರಭವನದಲ್ಲಿ ಮಾರ್ಚ್ 7 ಮತ್ತು 8ರಂದು ನಡೆಯಲಿರುವ ಪತ್ರಕರ್ತರ 35ನೇ ರಾಜ್ಯ ಸಮ್ಮೇಳನದ ವೆಬ್ ಸೈಟ್ ಅನಾವರಣ ಜ.31ರಂದು ಬೆಳಗ್ಗೆ 10:00 ಗಂಟೆಗೆ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ.
ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಪತ್ರಕರ್ತರ ರಾಜ್ಯ ಸಮ್ಮೇಳನದ ವೆಬ್ ಸೈಟ್ ಅನಾವರಣಗೊಳಿಸುವರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ,ಶಾಸಕರುಗಳಾದ ಯು.ಟಿ.ಖಾದರ್, ಡಿ.ವೇದವ್ಯಾಸ್ ಕಾಮತ್ , ಡಾ.ಭರತ್ ಶೆಟ್ಟಿ ವೈ , ವಿಧಾನ ಪರಿಷತ್ ಸದಸ್ಯ ಐವನ್ ಡಿ ಸೋಜ, ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ , ಮಂಗಳೂರು ಪೊಲೀಸ್ ಆಯುಕ್ತ ಡಾ .ಪಿ ಯಸ್ ಹರ್ಷ , ದ.ಕ.ಜಿ.ಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ . ಆರ್.ಸೆಲ್ವಮಣಿ , ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ.ಲಕ್ಷ್ಮೀಪ್ರಸಾದ್ , ಅಪರ ಜಿಲ್ಲಾಧಿಕಾರಿ ಎಂ .ಜೆ .ರೂಪಾ ,ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರಾದ ಅಜಿತ್ ಕುಮಾರ್ ಹೆಗ್ಡೆ ಶಾನಾಡಿ ಭಾಗವಹಿಸಲಿದ್ದಾರೆ ಎಂದು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…