ನಿಧನ‌ ಸುದ್ದಿಗಳು

ಪತ್ರಕರ್ತ ಚಂದ್ರೇಶ್ ಗೋರಡ್ಕ ಇನ್ನಿಲ್ಲ

Share

 

Advertisement

ಸುಳ್ಯ: ಸುಳ್ಯದ ಹಿರಿಯ ಪತ್ರಕರ್ತ, ಪಯಸ್ವಿನಿ ಪತ್ರಿಕೆಯ ಸಂಪಾದಕರಾಗಿದ್ದ ಚಂದ್ರೇಶ್ ಗೋರಡ್ಕ (48) ನಿಧನರಾಗಿದ್ದಾರೆ. ಲಿವರ್ ಸಂಬಂಧಿ ಕಾಯಿಲೆಯಿಂದ ಬಳಲಿ ಸುಳ್ಯದ ಕೆ.ವಿ.ಜಿ ಮೆಡಿಕಲ್ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಸೋಮವಾರ ಬೆಳಗ್ಗಿನ ಜಾವ 2.30 ಕ್ಕೆ ಕೊನೆಯುಸಿರೆಳೆದರು. ಲಿವರ್ ಸಂಬಂಧಿ ಕಾಯಿಲೆಯಿಂದ ಅಸ್ವಸ್ಥರಾದ ಅವರನ್ನು ತಿಂಗಳ ಹಿಂದೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಂಗಳೂರಿನ ಖಾಸಗೀ ಆಸ್ಪತ್ರೆಯಲ್ಲಿ ಸುಮಾರು 3 ವಾರಗಳ ಕಾಲ ಚಿಕಿತ್ಸೆ ಪಡೆದರೂ ಅವರ ಆರೋಗ್ಯ ತೀವ್ರ ಹದಗೆಟ್ಟ ಕಾರಣ ಅಲ್ಲಿಂದ ಕರೆ ತಂದು ಸುಳ್ಯ ಕೆ.ವಿ.ಜಿ. ಮೆಡಿಕಲ್ ಕಾಳೇಜಿನಲ್ಲಿ ತೀವ್ರ ನಿಘಾ ಘಟಕದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದರೂ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದರು.
ಮೃತರು ಪತ್ನಿ ಇಬ್ಬರು ಗಂಡು ಮಕ್ಕಳು, ಮೂವರು ಸಹೋದರರು, ಓರ್ವ ಸಹೋದರಿಯ ಮತ್ತು ಅಪಾರ ಬಂದು ಮಿತ್ರರನ್ನು ಅಗಲಿದ್ದಾರೆ.

ಎರಡೂವರೆ ದಶಕದ ಪತ್ರಿಕಾ ಸೇವೆ:ಸುಮಾರು ಎರಡೂವರೆ ದಶಕಗಳಿಗೂ ಹೆಚ್ಚು ಕಾಲ ಪತ್ರಕರ್ತರಾಗಿ ದುಡಿದ ಚಂದ್ರೇಶ್ ಗೋರಡ್ಕ ಸುಳ್ಯದಲ್ಲಿ ಚಿರಪರಿಚಿತರಾಗಿದ್ದಾರು.
ಸುದ್ದಿ ಬಿಡುಗಡೆ ಪತ್ರಿಕೆಯ ಮೂಲಕ ತಮ್ಮ ವೃತ್ತಿ ಜೀವನ ಆರಂಭಿಸಿ ಸುಮಾರು ಒಂದೂವರೆ ದಶಕಗಳಿಗಿಂತಲೂ ಹೆಚ್ಚು ಕಾಲ ಸುದ್ದಿ ಬಿಡುಗಡೆಯಲ್ಲಿ ಪತ್ರಕರ್ತರಾಗಿದ್ದರು. ಬಳಿಕ ಮಿತ್ರ ಅಬ್ದುಲ್ ಸತ್ತಾರ್ ಗೋರಡ್ಕ ಅವರೊಂದಿಗೆ ಸೇರಿ ಪಯಸ್ವಿನಿ ಪತ್ರಿಕೆಯನ್ನು ಆರಂಭಿಸಿದ್ದರು. ಪಯಸ್ವಿನಿಯಲ್ಲಿ ಪ್ರಕಾಶಕರಾಗಿ ಸಂಪಾದಕರಾಗಿ ದುಡಿದಿದ್ದರು. ‘ಕರಾವಳಿ ಅಲೆ’ಪತ್ರಿಕೆಯ ಸುಳ್ಯ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿದ್ದರು. ಸುಳ್ಯದಲ್ಲಿದ್ದ ಶ್ರೀ ಚಾನೆಲ್ ಕಾರ್ಯನಿರ್ವಾಹಕ ಸಂಪಾದಕರಾಗಿ ಕೆಲಸ ನಿರ್ವಹಿಸಿದ್ದರು. ‘ನಮ್ಮ ಸುಳ್ಯ’ ಪತ್ರಿಕೆಯ ಸಂಪಾದಕರಾಗಿದ್ದರು. ಇತ್ತೀಚಿನ ಕೆಲವು ವರ್ಷಗಳಿಂದ ಪತ್ರಿಕಾ ವೃತ್ತಿಯಿಂದ ದೂರವಾಗಿ ಬೇರೆ ವೃತ್ತಿಯಲ್ಲಿ ತೊಡಗಿ ಕೊಂಡಿದ್ದರು. ಕಾರ್ಯನಿರತ ಪತ್ರಕರ್ತರ ಸದಸ್ಯರಾಗಿದ್ದ ಅವರು ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದರು. ಅವರ ಪತ್ರಿಕಾ ಸೇವೆಯನ್ನು ಗುರುತಿಸಿ ಕಳೆದ ಜುಲೈ ತಿಂಗಳಲ್ಲಿ ನಡೆದ ಪತ್ರಿಕಾ ದಿನಾಚರಣೆ ಸಂದರ್ಭ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಅವರನ್ನು ಸನ್ಮಾನಿಸಿ ಗೌರವಿಸಲಾಗಿತ್ತು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಆನೆ ದಾಳಿಗೆ ಮೂರು ವರ್ಷದಲ್ಲಿ 129 ರೈತರು ಬಲಿ | ವಿಧಾನಪರಿಷತ್‌ನಲ್ಲಿ ಮಾಹಿತಿ ನೀಡಿದ ಅರಣ್ಯ ಇಲಾಖೆ

ಕಳೆದ ಮೂರು ವರ್ಷಗಳಿಂದ ಕಾಡಾನೆ ದಾಳಿಗೆ ಒಟ್ಟು 129 ಮಂದಿ ರೈತರು ಬಲಿಯಾಗಿದ್ದಾರೆ.…

10 hours ago

ಹವಾಮಾನ ವರದಿ | 11-08-2025 | ಇಂದು ಸಾಮಾನ್ಯ ಮಳೆ | ಆ-12 ರಿಂದ ಆ-20 ರವರಗೆ ರಾಜ್ಯದ ವಿವಿದೆಡೆ ಮಳೆ |

ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ಆಗಸ್ಟ್ 15ರಂದು ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಈಗಿನಂತೆ…

17 hours ago

ವೈಜ್ಞಾನಿಕ ಶಿಫಾರಸ್ಸಿನಂತೆ ರಸಗೊಬ್ಬರದ ಬಳಕೆ ಸೂಕ್ತ – ರೈತರಿಗೆ ಸಲಹೆ

ವೈಜ್ಞಾನಿಕ ಶಿಫಾರಸ್ಸಿನಂತೆ ರಾಸಾಯನಿಕ ಗೊಬ್ಬರ ಬಳಕೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ…

22 hours ago

ರಾಜ್ಯದ ಹಲವೆಡೆ ಮುಂದಿನ 7 ದಿನಗಳ ಕಾಲ ವ್ಯಾಪಕ ಮಳೆ | ಬೆಂಗಳೂರಿಗೆ ಎಲ್ಲೋ ಅಲರ್ಟ್

ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ರಾಜ್ಯದ…

24 hours ago

ಬದುಕು ಪುರಾಣ | ಜ್ಞಾನದ ಪ್ರತಿನಿಧಿ ಗಂಗಾಪುತ್ರ

ತ್ಯಾಗಕ್ಕೊಂದು ಸ್ವ-ಸ್ವರೂಪ ಇದ್ದರೆ ಅದು ‘ಭೀಷ್ಮಾಚಾರ್ಯ’ರಿಗೆ ಹೊಂದುತ್ತದೆ. ತ್ಯಾಗವೆಂದರೆ ದೇಹವನ್ನು ಕಳೆದುಕೊಳ್ಳುವುದಲ್ಲ! ದೇಹವಿದ್ದೂ…

2 days ago

ಬೆಳೆ ಹಾನಿ ಕುರಿತು ಸಮಗ್ರವಾಗಿ ಸಮೀಕ್ಷೆಗೆ ಸೂಚನೆ

ವಿಜಯಪುರ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಕೃಷಿ, ತೋಟಗಾರಿಕೆ ಬೆಳೆಗಳು, ಜನ-ಜಾನುವಾರುಗಳ…

2 days ago