Advertisement
ನಿಧನ‌ ಸುದ್ದಿಗಳು

ಪತ್ರಕರ್ತ ಚಂದ್ರೇಶ್ ಗೋರಡ್ಕ ಇನ್ನಿಲ್ಲ

Share

 

ಸುಳ್ಯ: ಸುಳ್ಯದ ಹಿರಿಯ ಪತ್ರಕರ್ತ, ಪಯಸ್ವಿನಿ ಪತ್ರಿಕೆಯ ಸಂಪಾದಕರಾಗಿದ್ದ ಚಂದ್ರೇಶ್ ಗೋರಡ್ಕ (48) ನಿಧನರಾಗಿದ್ದಾರೆ. ಲಿವರ್ ಸಂಬಂಧಿ ಕಾಯಿಲೆಯಿಂದ ಬಳಲಿ ಸುಳ್ಯದ ಕೆ.ವಿ.ಜಿ ಮೆಡಿಕಲ್ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಸೋಮವಾರ ಬೆಳಗ್ಗಿನ ಜಾವ 2.30 ಕ್ಕೆ ಕೊನೆಯುಸಿರೆಳೆದರು. ಲಿವರ್ ಸಂಬಂಧಿ ಕಾಯಿಲೆಯಿಂದ ಅಸ್ವಸ್ಥರಾದ ಅವರನ್ನು ತಿಂಗಳ ಹಿಂದೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಂಗಳೂರಿನ ಖಾಸಗೀ ಆಸ್ಪತ್ರೆಯಲ್ಲಿ ಸುಮಾರು 3 ವಾರಗಳ ಕಾಲ ಚಿಕಿತ್ಸೆ ಪಡೆದರೂ ಅವರ ಆರೋಗ್ಯ ತೀವ್ರ ಹದಗೆಟ್ಟ ಕಾರಣ ಅಲ್ಲಿಂದ ಕರೆ ತಂದು ಸುಳ್ಯ ಕೆ.ವಿ.ಜಿ. ಮೆಡಿಕಲ್ ಕಾಳೇಜಿನಲ್ಲಿ ತೀವ್ರ ನಿಘಾ ಘಟಕದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದರೂ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದರು.
ಮೃತರು ಪತ್ನಿ ಇಬ್ಬರು ಗಂಡು ಮಕ್ಕಳು, ಮೂವರು ಸಹೋದರರು, ಓರ್ವ ಸಹೋದರಿಯ ಮತ್ತು ಅಪಾರ ಬಂದು ಮಿತ್ರರನ್ನು ಅಗಲಿದ್ದಾರೆ.

ಎರಡೂವರೆ ದಶಕದ ಪತ್ರಿಕಾ ಸೇವೆ:ಸುಮಾರು ಎರಡೂವರೆ ದಶಕಗಳಿಗೂ ಹೆಚ್ಚು ಕಾಲ ಪತ್ರಕರ್ತರಾಗಿ ದುಡಿದ ಚಂದ್ರೇಶ್ ಗೋರಡ್ಕ ಸುಳ್ಯದಲ್ಲಿ ಚಿರಪರಿಚಿತರಾಗಿದ್ದಾರು.
ಸುದ್ದಿ ಬಿಡುಗಡೆ ಪತ್ರಿಕೆಯ ಮೂಲಕ ತಮ್ಮ ವೃತ್ತಿ ಜೀವನ ಆರಂಭಿಸಿ ಸುಮಾರು ಒಂದೂವರೆ ದಶಕಗಳಿಗಿಂತಲೂ ಹೆಚ್ಚು ಕಾಲ ಸುದ್ದಿ ಬಿಡುಗಡೆಯಲ್ಲಿ ಪತ್ರಕರ್ತರಾಗಿದ್ದರು. ಬಳಿಕ ಮಿತ್ರ ಅಬ್ದುಲ್ ಸತ್ತಾರ್ ಗೋರಡ್ಕ ಅವರೊಂದಿಗೆ ಸೇರಿ ಪಯಸ್ವಿನಿ ಪತ್ರಿಕೆಯನ್ನು ಆರಂಭಿಸಿದ್ದರು. ಪಯಸ್ವಿನಿಯಲ್ಲಿ ಪ್ರಕಾಶಕರಾಗಿ ಸಂಪಾದಕರಾಗಿ ದುಡಿದಿದ್ದರು. ‘ಕರಾವಳಿ ಅಲೆ’ಪತ್ರಿಕೆಯ ಸುಳ್ಯ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿದ್ದರು. ಸುಳ್ಯದಲ್ಲಿದ್ದ ಶ್ರೀ ಚಾನೆಲ್ ಕಾರ್ಯನಿರ್ವಾಹಕ ಸಂಪಾದಕರಾಗಿ ಕೆಲಸ ನಿರ್ವಹಿಸಿದ್ದರು. ‘ನಮ್ಮ ಸುಳ್ಯ’ ಪತ್ರಿಕೆಯ ಸಂಪಾದಕರಾಗಿದ್ದರು. ಇತ್ತೀಚಿನ ಕೆಲವು ವರ್ಷಗಳಿಂದ ಪತ್ರಿಕಾ ವೃತ್ತಿಯಿಂದ ದೂರವಾಗಿ ಬೇರೆ ವೃತ್ತಿಯಲ್ಲಿ ತೊಡಗಿ ಕೊಂಡಿದ್ದರು. ಕಾರ್ಯನಿರತ ಪತ್ರಕರ್ತರ ಸದಸ್ಯರಾಗಿದ್ದ ಅವರು ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದರು. ಅವರ ಪತ್ರಿಕಾ ಸೇವೆಯನ್ನು ಗುರುತಿಸಿ ಕಳೆದ ಜುಲೈ ತಿಂಗಳಲ್ಲಿ ನಡೆದ ಪತ್ರಿಕಾ ದಿನಾಚರಣೆ ಸಂದರ್ಭ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಅವರನ್ನು ಸನ್ಮಾನಿಸಿ ಗೌರವಿಸಲಾಗಿತ್ತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ಮಾರುಕಟ್ಟೆ- ಸದ್ಯ ಮಾರುಕಟ್ಟೆ ಸ್ಥಿರ | ರಬ್ಬರ್‌ ಧಾರಣೆ ಇಳಿಕೆಯ ಹಾದಿ

ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…

4 hours ago

ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ

ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…

5 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ

ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…

7 hours ago

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…

12 hours ago

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ

ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…

12 hours ago

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

23 hours ago