Advertisement
ನಿಧನ‌ ಸುದ್ದಿಗಳು

ಪತ್ರಕರ್ತ ಚಂದ್ರೇಶ್ ಗೋರಡ್ಕ ಇನ್ನಿಲ್ಲ

Share

 

ಸುಳ್ಯ: ಸುಳ್ಯದ ಹಿರಿಯ ಪತ್ರಕರ್ತ, ಪಯಸ್ವಿನಿ ಪತ್ರಿಕೆಯ ಸಂಪಾದಕರಾಗಿದ್ದ ಚಂದ್ರೇಶ್ ಗೋರಡ್ಕ (48) ನಿಧನರಾಗಿದ್ದಾರೆ. ಲಿವರ್ ಸಂಬಂಧಿ ಕಾಯಿಲೆಯಿಂದ ಬಳಲಿ ಸುಳ್ಯದ ಕೆ.ವಿ.ಜಿ ಮೆಡಿಕಲ್ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಸೋಮವಾರ ಬೆಳಗ್ಗಿನ ಜಾವ 2.30 ಕ್ಕೆ ಕೊನೆಯುಸಿರೆಳೆದರು. ಲಿವರ್ ಸಂಬಂಧಿ ಕಾಯಿಲೆಯಿಂದ ಅಸ್ವಸ್ಥರಾದ ಅವರನ್ನು ತಿಂಗಳ ಹಿಂದೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಂಗಳೂರಿನ ಖಾಸಗೀ ಆಸ್ಪತ್ರೆಯಲ್ಲಿ ಸುಮಾರು 3 ವಾರಗಳ ಕಾಲ ಚಿಕಿತ್ಸೆ ಪಡೆದರೂ ಅವರ ಆರೋಗ್ಯ ತೀವ್ರ ಹದಗೆಟ್ಟ ಕಾರಣ ಅಲ್ಲಿಂದ ಕರೆ ತಂದು ಸುಳ್ಯ ಕೆ.ವಿ.ಜಿ. ಮೆಡಿಕಲ್ ಕಾಳೇಜಿನಲ್ಲಿ ತೀವ್ರ ನಿಘಾ ಘಟಕದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದರೂ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದರು.
ಮೃತರು ಪತ್ನಿ ಇಬ್ಬರು ಗಂಡು ಮಕ್ಕಳು, ಮೂವರು ಸಹೋದರರು, ಓರ್ವ ಸಹೋದರಿಯ ಮತ್ತು ಅಪಾರ ಬಂದು ಮಿತ್ರರನ್ನು ಅಗಲಿದ್ದಾರೆ.

ಎರಡೂವರೆ ದಶಕದ ಪತ್ರಿಕಾ ಸೇವೆ:ಸುಮಾರು ಎರಡೂವರೆ ದಶಕಗಳಿಗೂ ಹೆಚ್ಚು ಕಾಲ ಪತ್ರಕರ್ತರಾಗಿ ದುಡಿದ ಚಂದ್ರೇಶ್ ಗೋರಡ್ಕ ಸುಳ್ಯದಲ್ಲಿ ಚಿರಪರಿಚಿತರಾಗಿದ್ದಾರು.
ಸುದ್ದಿ ಬಿಡುಗಡೆ ಪತ್ರಿಕೆಯ ಮೂಲಕ ತಮ್ಮ ವೃತ್ತಿ ಜೀವನ ಆರಂಭಿಸಿ ಸುಮಾರು ಒಂದೂವರೆ ದಶಕಗಳಿಗಿಂತಲೂ ಹೆಚ್ಚು ಕಾಲ ಸುದ್ದಿ ಬಿಡುಗಡೆಯಲ್ಲಿ ಪತ್ರಕರ್ತರಾಗಿದ್ದರು. ಬಳಿಕ ಮಿತ್ರ ಅಬ್ದುಲ್ ಸತ್ತಾರ್ ಗೋರಡ್ಕ ಅವರೊಂದಿಗೆ ಸೇರಿ ಪಯಸ್ವಿನಿ ಪತ್ರಿಕೆಯನ್ನು ಆರಂಭಿಸಿದ್ದರು. ಪಯಸ್ವಿನಿಯಲ್ಲಿ ಪ್ರಕಾಶಕರಾಗಿ ಸಂಪಾದಕರಾಗಿ ದುಡಿದಿದ್ದರು. ‘ಕರಾವಳಿ ಅಲೆ’ಪತ್ರಿಕೆಯ ಸುಳ್ಯ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿದ್ದರು. ಸುಳ್ಯದಲ್ಲಿದ್ದ ಶ್ರೀ ಚಾನೆಲ್ ಕಾರ್ಯನಿರ್ವಾಹಕ ಸಂಪಾದಕರಾಗಿ ಕೆಲಸ ನಿರ್ವಹಿಸಿದ್ದರು. ‘ನಮ್ಮ ಸುಳ್ಯ’ ಪತ್ರಿಕೆಯ ಸಂಪಾದಕರಾಗಿದ್ದರು. ಇತ್ತೀಚಿನ ಕೆಲವು ವರ್ಷಗಳಿಂದ ಪತ್ರಿಕಾ ವೃತ್ತಿಯಿಂದ ದೂರವಾಗಿ ಬೇರೆ ವೃತ್ತಿಯಲ್ಲಿ ತೊಡಗಿ ಕೊಂಡಿದ್ದರು. ಕಾರ್ಯನಿರತ ಪತ್ರಕರ್ತರ ಸದಸ್ಯರಾಗಿದ್ದ ಅವರು ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದರು. ಅವರ ಪತ್ರಿಕಾ ಸೇವೆಯನ್ನು ಗುರುತಿಸಿ ಕಳೆದ ಜುಲೈ ತಿಂಗಳಲ್ಲಿ ನಡೆದ ಪತ್ರಿಕಾ ದಿನಾಚರಣೆ ಸಂದರ್ಭ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಅವರನ್ನು ಸನ್ಮಾನಿಸಿ ಗೌರವಿಸಲಾಗಿತ್ತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?

ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…

2 hours ago

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

13 hours ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

17 hours ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

18 hours ago

ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…

20 hours ago

ಪಶ್ಚಿಮ ಘಟ್ಟ ಸಂರಕ್ಷಣೆ ಹೆಸರಿನಲ್ಲಿ ಕೃಷಿಕರಿಗೆ ನಿರ್ಬಂಧ ಬೇಡ – ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಆಗ್ರಹ

ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…

21 hours ago