ಪಥ ಬದಲಿಸಿದ ವಾಯು : ಇನ್ನು ಕರಾವಳಿ ತೀರಕ್ಕೂ ಇದೆ ಇಫೆಕ್ಟ್

June 13, 2019
3:30 PM

ಅಹಮದಾಬಾದ್ : ಚಂಡಮಾರುತ ವಾಯು ಇದೀಗ ಪಥ ಬದಲಿಸಿದೆ. ಗುಜರಾತ್ ಕಡಲು ತೀರದಲ್ಲಿ  ಭಾರೀ ಗಾಳಿ ಹಾಗೂ ಮಳೆ ಕಂಡುಬಂದು ಆತಂಕಕ್ಕೆ ಕಾರಣವಾಗಿತ್ತು. ಆದರೆ ರಾತ್ರಿ ವೇಳೆಗೆ ಪಥ ಬದಲಿಸಿದೆ. ಹೀಗಾಗಿ ಗುಜರಾತ್ ಕಡೆಗೆ ಈಗ ಚಂಡಮಾರುತ ಹೊಡೆತ ತಪ್ಪಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಮುಂಜಾಗ್ರತಾ ಕ್ರಮವಾಗಿ ಗುಜರಾತ್ ಕರಾವಳಿ ತೀರದ ಸುಮಾರು 250000 ಲಕ್ಷ ಜನರನ್ನು ಸ್ಥಳಾಂತರ ಮಾಡಲಾಗಿತ್ತು. ಈಗಿನ ಮಾಹಿತಿ ಪ್ರಕಾರ ಪೋರಬಂದರ್, ದ್ವಾರಕಾ , ಮಹುವಾ ಬೀಚ್ ಗಳ  ಸಮೀಪವಾಗಿ ಚಂಡಮಾರುತ ಸಾಗಬಹುದು ಎಂದು ಹವಾಮಾನ ಇಲಾಖೆ ಹೇಳಿದೆ. ಆದರೆ ಕರಾವಳಿ ತೀರಕ್ಕೆ ಇನ್ನೂ ಅಪಾಯ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಗುಜರಾತ್ ಮಾತ್ರವಲ್ಲದೇ ಮಹಾರಾಷ್ಟ್ರದಲ್ಲಿಯೂ ಬಿರುಗಾಳಿ ಸಹಿತ ಮಳೆಯಾಗುತ್ತಿದೆ. ವಾಯು ಚಂಡ ಮಾರುತ ಪಥ ಬದಲಿಸಿದರೂ ರೆಡ್ ಎಲರ್ಟ್ ಇನ್ನೂ ಇದೆ.

Advertisement
Advertisement

ಕರ್ನಾಟಕದಲ್ಲೂ ವಾಯು ಚಂಡಮಾರುತ ಪರಿಣಾಮ ಉಂಟಾಗಿದ್ದು, ಕರಾವಳಿ ಪ್ರದೇಶದಲ್ಲಿ  ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ.

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಹಮದಾಬಾದ್​ನಲ್ಲಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನ
June 12, 2025
3:28 PM
by: The Rural Mirror ಸುದ್ದಿಜಾಲ
11 ವರ್ಷಗಳಲ್ಲಿ ಭಾರತದ ಕಡು ಬಡವರ ಸಂಖ್ಯೆ ತಗ್ಗಿದೆ – ಸಚಿವ ಪ್ರಹ್ಲಾದ್ ಜೋಶಿ
June 10, 2025
7:23 AM
by: The Rural Mirror ಸುದ್ದಿಜಾಲ
25 ಗ್ರೀನ್‌ಫೀಲ್ಡ್ ಎಕ್ಸ್‌ಪ್ರೆಸ್ ಹೆದ್ದಾರಿಗಳ ನಿರ್ಮಾಣ -ಸಚಿವ ನಿತಿನ್‌ ಗಡ್ಕರಿ
June 10, 2025
7:19 AM
by: The Rural Mirror ಸುದ್ದಿಜಾಲ
ವಿಶ್ವ ಪರಿಸರ ದಿನಾಚರಣೆ | ಪ್ರಧಾನಿ ನರೇಂದ್ರ ಮೋದಿ ಭಾಗಿ  | 700 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಅರಣ್ಯೀಕರಣ ಯೋಜನೆಗೆ ಚಾಲನೆ |
June 5, 2025
10:07 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group