ಅಹಮದಾಬಾದ್ : ಚಂಡಮಾರುತ ವಾಯು ಇದೀಗ ಪಥ ಬದಲಿಸಿದೆ. ಗುಜರಾತ್ ಕಡಲು ತೀರದಲ್ಲಿ ಭಾರೀ ಗಾಳಿ ಹಾಗೂ ಮಳೆ ಕಂಡುಬಂದು ಆತಂಕಕ್ಕೆ ಕಾರಣವಾಗಿತ್ತು. ಆದರೆ ರಾತ್ರಿ ವೇಳೆಗೆ ಪಥ ಬದಲಿಸಿದೆ. ಹೀಗಾಗಿ ಗುಜರಾತ್ ಕಡೆಗೆ ಈಗ ಚಂಡಮಾರುತ ಹೊಡೆತ ತಪ್ಪಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಮುಂಜಾಗ್ರತಾ ಕ್ರಮವಾಗಿ ಗುಜರಾತ್ ಕರಾವಳಿ ತೀರದ ಸುಮಾರು 250000 ಲಕ್ಷ ಜನರನ್ನು ಸ್ಥಳಾಂತರ ಮಾಡಲಾಗಿತ್ತು. ಈಗಿನ ಮಾಹಿತಿ ಪ್ರಕಾರ ಪೋರಬಂದರ್, ದ್ವಾರಕಾ , ಮಹುವಾ ಬೀಚ್ ಗಳ ಸಮೀಪವಾಗಿ ಚಂಡಮಾರುತ ಸಾಗಬಹುದು ಎಂದು ಹವಾಮಾನ ಇಲಾಖೆ ಹೇಳಿದೆ. ಆದರೆ ಕರಾವಳಿ ತೀರಕ್ಕೆ ಇನ್ನೂ ಅಪಾಯ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಗುಜರಾತ್ ಮಾತ್ರವಲ್ಲದೇ ಮಹಾರಾಷ್ಟ್ರದಲ್ಲಿಯೂ ಬಿರುಗಾಳಿ ಸಹಿತ ಮಳೆಯಾಗುತ್ತಿದೆ. ವಾಯು ಚಂಡ ಮಾರುತ ಪಥ ಬದಲಿಸಿದರೂ ರೆಡ್ ಎಲರ್ಟ್ ಇನ್ನೂ ಇದೆ.
ಕರ್ನಾಟಕದಲ್ಲೂ ವಾಯು ಚಂಡಮಾರುತ ಪರಿಣಾಮ ಉಂಟಾಗಿದ್ದು, ಕರಾವಳಿ ಪ್ರದೇಶದಲ್ಲಿ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಅಸಹಜ ಚಲನೆಯ ಕಾರಣದಿಂದ ಕರಾವಳಿ ಭಾಗಗಳಲ್ಲಿ ಹೆಚ್ಚು ಮಳೆಯಾಗುತ್ತಿದೆ.
ಅಡಿಕೆ ಬೆಳೆಗೆ ಪರ್ಯಾಯವಾಗಿ ಅಥವಾ ಉಪಬೆಳೆಯಾಗಿ ತಾಳೆ ಬೆಳೆಯನ್ನು ಬೆಳೆಯುವ ಬಗ್ಗೆ ಈಗಾಗಲೇ…
ಹವಾಮಾನ ಬದಲಾವಣೆಯಿಂದ ಹಾಗೂ ತಾಪಮಾನದ ದಿಢೀರ್ ಬದಲಾವಣೆಗಳು ನಿದ್ರೆಯಲ್ಲಿ ಉಸಿರುಕಟ್ಟುವಿಕೆ ಪ್ರಕರಣ ಹೆಚ್ಚಾಗುತ್ತಿದೆ…
ಕ್ಯಾಂಪ್ಕೋದಿಂದ ಸಂಗ್ರಹಿಸುತ್ತಿರುವ ಶೇಕಡ 0.48ರಷ್ಟು ಮಾರುಕಟ್ಟೆ ಶುಲ್ಕದಲ್ಲಿ ಯಾವುದೇ ಬದಲಾವಣೆ ಮಾಡಬಾರದೆಂಬ ಸಂಸ್ಥೆಯ…
ಹಲಸಿನ ಬೀಜದ ಪರೋಟ : ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಹಲಸಿನ…
ವೈದಿಕ ಜ್ಯೋತಿಷ್ಯದಲ್ಲಿ ಮಂಗಳ ಗ್ರಹವು ಶಕ್ತಿ, ಧೈರ್ಯ, ಮತ್ತು ಆಕ್ರಮಣಕಾರಿ ನಿರ್ಧಾರಗಳ ಸಂಕೇತವಾಗಿದೆ.…