ಅಹಮದಾಬಾದ್ : ಚಂಡಮಾರುತ ವಾಯು ಇದೀಗ ಪಥ ಬದಲಿಸಿದೆ. ಗುಜರಾತ್ ಕಡಲು ತೀರದಲ್ಲಿ ಭಾರೀ ಗಾಳಿ ಹಾಗೂ ಮಳೆ ಕಂಡುಬಂದು ಆತಂಕಕ್ಕೆ ಕಾರಣವಾಗಿತ್ತು. ಆದರೆ ರಾತ್ರಿ ವೇಳೆಗೆ ಪಥ ಬದಲಿಸಿದೆ. ಹೀಗಾಗಿ ಗುಜರಾತ್ ಕಡೆಗೆ ಈಗ ಚಂಡಮಾರುತ ಹೊಡೆತ ತಪ್ಪಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಮುಂಜಾಗ್ರತಾ ಕ್ರಮವಾಗಿ ಗುಜರಾತ್ ಕರಾವಳಿ ತೀರದ ಸುಮಾರು 250000 ಲಕ್ಷ ಜನರನ್ನು ಸ್ಥಳಾಂತರ ಮಾಡಲಾಗಿತ್ತು. ಈಗಿನ ಮಾಹಿತಿ ಪ್ರಕಾರ ಪೋರಬಂದರ್, ದ್ವಾರಕಾ , ಮಹುವಾ ಬೀಚ್ ಗಳ ಸಮೀಪವಾಗಿ ಚಂಡಮಾರುತ ಸಾಗಬಹುದು ಎಂದು ಹವಾಮಾನ ಇಲಾಖೆ ಹೇಳಿದೆ. ಆದರೆ ಕರಾವಳಿ ತೀರಕ್ಕೆ ಇನ್ನೂ ಅಪಾಯ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಗುಜರಾತ್ ಮಾತ್ರವಲ್ಲದೇ ಮಹಾರಾಷ್ಟ್ರದಲ್ಲಿಯೂ ಬಿರುಗಾಳಿ ಸಹಿತ ಮಳೆಯಾಗುತ್ತಿದೆ. ವಾಯು ಚಂಡ ಮಾರುತ ಪಥ ಬದಲಿಸಿದರೂ ರೆಡ್ ಎಲರ್ಟ್ ಇನ್ನೂ ಇದೆ.
ಕರ್ನಾಟಕದಲ್ಲೂ ವಾಯು ಚಂಡಮಾರುತ ಪರಿಣಾಮ ಉಂಟಾಗಿದ್ದು, ಕರಾವಳಿ ಪ್ರದೇಶದಲ್ಲಿ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…