ಅಹಮದಾಬಾದ್ : ಚಂಡಮಾರುತ ವಾಯು ಇದೀಗ ಪಥ ಬದಲಿಸಿದೆ. ಗುಜರಾತ್ ಕಡಲು ತೀರದಲ್ಲಿ ಭಾರೀ ಗಾಳಿ ಹಾಗೂ ಮಳೆ ಕಂಡುಬಂದು ಆತಂಕಕ್ಕೆ ಕಾರಣವಾಗಿತ್ತು. ಆದರೆ ರಾತ್ರಿ ವೇಳೆಗೆ ಪಥ ಬದಲಿಸಿದೆ. ಹೀಗಾಗಿ ಗುಜರಾತ್ ಕಡೆಗೆ ಈಗ ಚಂಡಮಾರುತ ಹೊಡೆತ ತಪ್ಪಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಮುಂಜಾಗ್ರತಾ ಕ್ರಮವಾಗಿ ಗುಜರಾತ್ ಕರಾವಳಿ ತೀರದ ಸುಮಾರು 250000 ಲಕ್ಷ ಜನರನ್ನು ಸ್ಥಳಾಂತರ ಮಾಡಲಾಗಿತ್ತು. ಈಗಿನ ಮಾಹಿತಿ ಪ್ರಕಾರ ಪೋರಬಂದರ್, ದ್ವಾರಕಾ , ಮಹುವಾ ಬೀಚ್ ಗಳ ಸಮೀಪವಾಗಿ ಚಂಡಮಾರುತ ಸಾಗಬಹುದು ಎಂದು ಹವಾಮಾನ ಇಲಾಖೆ ಹೇಳಿದೆ. ಆದರೆ ಕರಾವಳಿ ತೀರಕ್ಕೆ ಇನ್ನೂ ಅಪಾಯ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಗುಜರಾತ್ ಮಾತ್ರವಲ್ಲದೇ ಮಹಾರಾಷ್ಟ್ರದಲ್ಲಿಯೂ ಬಿರುಗಾಳಿ ಸಹಿತ ಮಳೆಯಾಗುತ್ತಿದೆ. ವಾಯು ಚಂಡ ಮಾರುತ ಪಥ ಬದಲಿಸಿದರೂ ರೆಡ್ ಎಲರ್ಟ್ ಇನ್ನೂ ಇದೆ.
ಕರ್ನಾಟಕದಲ್ಲೂ ವಾಯು ಚಂಡಮಾರುತ ಪರಿಣಾಮ ಉಂಟಾಗಿದ್ದು, ಕರಾವಳಿ ಪ್ರದೇಶದಲ್ಲಿ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…