Advertisement
ಕಾರ್ಯಕ್ರಮಗಳು

ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ಸುಳ್ಯದಲ್ಲಿ ಸನ್ಮಾನ – ಹಾಜಬ್ಬರ ಸಾಧನೆ ಅನನ್ಯ: ಗಿರೀಶ್ ಭಾರದ್ವಾಜ್

Share

ಸುಳ್ಯ: ಹರೇಕಳ ಹಾಜಬ್ಬ ತನ್ನ ಊರಿನಲ್ಲಿ ಸರ್ಕಾರಿ ಶಾಲೆಯನ್ನು ಕಟ್ಟಿ ಬೆಳೆಸಿದ ರೀತಿ ನಿಜಕ್ಕೂ ಅದ್ಭುತ. ಅವರ ಸಾಧನೆ ಅನನ್ಯವಾದುದು ಎಂದು ಪದ್ಮಶ್ರೀ ಪುರಸ್ಕೃತ ಇಂಜಿನಿಯರ್ ಗಿರೀಶ್ ಭಾರದ್ವಾಜ್ ಹೇಳಿದ್ದಾರೆ.

ಸುಳ್ಯದ ಎಂ.ಬಿ.ಫೌಂಡೇಶನ್ ವತಿಯಿಂದ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಪದ್ಮಶ್ರೀ ಪುರಸ್ಕೃತ ಅಕ್ಷರ ಸಂತ ಹರೇಕಳ ಹಾಜಬ್ಬ ಮತ್ತು ಪತ್ರಕರ್ತ ಗುರುವಪ್ಪ ಎನ್.ಟಿ.ಬಾಳೆಪುಣಿ ಅವರನ್ನು ಸನ್ಮಾನಿಸಿ ಅವರು ಮಾತನಾಡಿದರು. ಸಮಾಜದ ಮೇಲೆ ನಿಷ್ಕಲ್ಮಶ ಪ್ರೀತಿ ಇರುವ ಕಾರಣ ಕೆಲವರು ಸಮಾಜಕ್ಕಾಗಿ ಸೇವೆ ಮಾಡುತ್ತಾರೆ. ಅಂತವರು ಗುರುತಿಸಲ್ಪಾಟ್ಟಾಗ ಸಮಾಜ, ದೇಶ ಅವರನ್ನು ಗೌರವಿಸುತ್ತದೆ ಎಂದು ಗಿರೀಶ್ ಭಾರದ್ವಾಜ್ ಹೇಳಿದರು.

ಸಮಾರಂಭವನ್ನು ಉದ್ಘಾಟಿಸಿದ ರಾಷ್ಟ್ರಪ್ರಶಸ್ತಿ ಪುರಸ್ಕೃತ ನಿವೃತ್ತ ಪ್ರಾಂಶುಪಾಲ ಕೆ.ಆರ್.ಗಂಗಾಧರ ಹೃದಯ ಶ್ರೀಮಂತಿಕೆಯಿಂದ ದೊಡ್ಡ ಸಾಧನೆ ಮಾಡಿದ ಹಾಜಬ್ಬರು ಸಮಾಜದ ಎಲ್ಲರಿಗೂ ಪ್ರೇರಣೆ ಎಂದು ಹೇಳಿದರು. ಹರೇಕಳ ಹಾಜಬ್ಬರನ್ನು ಅಭಿನಂದಿಸಿ ಮಾತನಾಡಿದ ಹಿರಿಯ ಪತ್ರಕರ್ತ ಗುರುವಪ್ಪ ಎನ್.ಟಿ.ಬಾಳೆಪುಣಿ ಹಾಜಬ್ಬ ಅವರು ತಮ್ಮ ಗುಣ, ತ್ಯಾಗ ಮತ್ತು ಸರಳತೆಯಿಂದ ಪದ್ಮಶ್ರೀ ಪ್ರಶಸ್ತಿ ಪಡೆಯುವವರೆಗೆ ಬೆಳೆದಿದ್ದಾರೆ. ತಮ್ಮ ಎಲ್ಲಾ ದುಃಖವನ್ನೂ ಮರೆತು ಸರ್ಕಾರಿ ಶಾಲೆಯನ್ನು ಕಟ್ಟಿ ಬೆಳೆಸಿದ್ದಾರೆ. ಶಾಲೆಯನ್ನೂ, ಶಾಲೆಯ ಮಕ್ಕಳನ್ನೂ ಪ್ರೀತಿಸಿದರು. ಪ್ರಶಸ್ತಿಯಿಂದ ಬಂದ ಎಲ್ಲಾ ಹಣವನ್ನೂ ಶಾಲೆಗಾಗಿ ವ್ಯಯಿಸಿದ್ದಾರೆ ಎಂದು ಅವರು ಹೇಳಿದರು.

ಎಂ.ಬಿ.ಫೌಂಡೇಶನ್‍ನ ಅಧ್ಯಕ್ಷ ಎಂ.ಬಿ.ಸದಾಶಿವ ಅಧ್ಯಕ್ಷತೆ ವಹಿಸಿದ್ದರು. ಚೆನ್ನಕೇಶವ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಡಾ.ಹರಪ್ರಸಾದ್ ತುದಿಯಡ್ಕ, ಸೈಂಟ್ ಬ್ರಿಜಿದ್ ಚರ್ಚ್‍ನ ಧರ್ಮಗುರು ವಿಕ್ಟರ್ ಡಿಸೋಜ, ಗಾಂಧಿನಗರ ಮನವ್ವಿರುಲ್ ಮದರಸದ ಅಧ್ಯಾಪಕ ಅಬ್ದುಲ್ ಲತೀಫ್ ಸಖಾಫಿ ಗೂನಡ್ಕ ಮಾತನಾಡಿದರು. ಹಾಜಿ ಇಸಾಕ್ ಸಾಹೇಬ್, ಕೆ.ಎಂ.ಮುಸ್ತಫಾ, ದುರ್ಗಾಕುಮಾರ್ ನಾಯರ್‍ಕೆರೆ, ಹರಿಣಿ ಸದಾಶಿವ, ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪುಷ್ಪಾ ರಾಧಾಕೃಷ್ಣ ಮಾಣಿಬೆಟ್ಟು ಸ್ವಾಗತಿಸಿ, ಸನ್ಮಾನ ಸಮಿತಿಯ ಸಹ ಸಂಚಾಲಕ ಹಸೈನಾರ್ ಜಯನಗರ ವಂದಿಸಿದರು. ಲತಾಶ್ರೀ ಸುಪ್ರೀತ್ ಮೋಂಟಡ್ಕ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

19 hours ago

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

1 day ago

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…

1 day ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

1 day ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

1 day ago