Advertisement
ಕಾರ್ಯಕ್ರಮಗಳು

ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ಸುಳ್ಯದಲ್ಲಿ ಸನ್ಮಾನ – ಹಾಜಬ್ಬರ ಸಾಧನೆ ಅನನ್ಯ: ಗಿರೀಶ್ ಭಾರದ್ವಾಜ್

Share

ಸುಳ್ಯ: ಹರೇಕಳ ಹಾಜಬ್ಬ ತನ್ನ ಊರಿನಲ್ಲಿ ಸರ್ಕಾರಿ ಶಾಲೆಯನ್ನು ಕಟ್ಟಿ ಬೆಳೆಸಿದ ರೀತಿ ನಿಜಕ್ಕೂ ಅದ್ಭುತ. ಅವರ ಸಾಧನೆ ಅನನ್ಯವಾದುದು ಎಂದು ಪದ್ಮಶ್ರೀ ಪುರಸ್ಕೃತ ಇಂಜಿನಿಯರ್ ಗಿರೀಶ್ ಭಾರದ್ವಾಜ್ ಹೇಳಿದ್ದಾರೆ.

Advertisement
Advertisement
Advertisement
Advertisement

ಸುಳ್ಯದ ಎಂ.ಬಿ.ಫೌಂಡೇಶನ್ ವತಿಯಿಂದ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಪದ್ಮಶ್ರೀ ಪುರಸ್ಕೃತ ಅಕ್ಷರ ಸಂತ ಹರೇಕಳ ಹಾಜಬ್ಬ ಮತ್ತು ಪತ್ರಕರ್ತ ಗುರುವಪ್ಪ ಎನ್.ಟಿ.ಬಾಳೆಪುಣಿ ಅವರನ್ನು ಸನ್ಮಾನಿಸಿ ಅವರು ಮಾತನಾಡಿದರು. ಸಮಾಜದ ಮೇಲೆ ನಿಷ್ಕಲ್ಮಶ ಪ್ರೀತಿ ಇರುವ ಕಾರಣ ಕೆಲವರು ಸಮಾಜಕ್ಕಾಗಿ ಸೇವೆ ಮಾಡುತ್ತಾರೆ. ಅಂತವರು ಗುರುತಿಸಲ್ಪಾಟ್ಟಾಗ ಸಮಾಜ, ದೇಶ ಅವರನ್ನು ಗೌರವಿಸುತ್ತದೆ ಎಂದು ಗಿರೀಶ್ ಭಾರದ್ವಾಜ್ ಹೇಳಿದರು.

Advertisement

ಸಮಾರಂಭವನ್ನು ಉದ್ಘಾಟಿಸಿದ ರಾಷ್ಟ್ರಪ್ರಶಸ್ತಿ ಪುರಸ್ಕೃತ ನಿವೃತ್ತ ಪ್ರಾಂಶುಪಾಲ ಕೆ.ಆರ್.ಗಂಗಾಧರ ಹೃದಯ ಶ್ರೀಮಂತಿಕೆಯಿಂದ ದೊಡ್ಡ ಸಾಧನೆ ಮಾಡಿದ ಹಾಜಬ್ಬರು ಸಮಾಜದ ಎಲ್ಲರಿಗೂ ಪ್ರೇರಣೆ ಎಂದು ಹೇಳಿದರು. ಹರೇಕಳ ಹಾಜಬ್ಬರನ್ನು ಅಭಿನಂದಿಸಿ ಮಾತನಾಡಿದ ಹಿರಿಯ ಪತ್ರಕರ್ತ ಗುರುವಪ್ಪ ಎನ್.ಟಿ.ಬಾಳೆಪುಣಿ ಹಾಜಬ್ಬ ಅವರು ತಮ್ಮ ಗುಣ, ತ್ಯಾಗ ಮತ್ತು ಸರಳತೆಯಿಂದ ಪದ್ಮಶ್ರೀ ಪ್ರಶಸ್ತಿ ಪಡೆಯುವವರೆಗೆ ಬೆಳೆದಿದ್ದಾರೆ. ತಮ್ಮ ಎಲ್ಲಾ ದುಃಖವನ್ನೂ ಮರೆತು ಸರ್ಕಾರಿ ಶಾಲೆಯನ್ನು ಕಟ್ಟಿ ಬೆಳೆಸಿದ್ದಾರೆ. ಶಾಲೆಯನ್ನೂ, ಶಾಲೆಯ ಮಕ್ಕಳನ್ನೂ ಪ್ರೀತಿಸಿದರು. ಪ್ರಶಸ್ತಿಯಿಂದ ಬಂದ ಎಲ್ಲಾ ಹಣವನ್ನೂ ಶಾಲೆಗಾಗಿ ವ್ಯಯಿಸಿದ್ದಾರೆ ಎಂದು ಅವರು ಹೇಳಿದರು.

Advertisement

ಎಂ.ಬಿ.ಫೌಂಡೇಶನ್‍ನ ಅಧ್ಯಕ್ಷ ಎಂ.ಬಿ.ಸದಾಶಿವ ಅಧ್ಯಕ್ಷತೆ ವಹಿಸಿದ್ದರು. ಚೆನ್ನಕೇಶವ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಡಾ.ಹರಪ್ರಸಾದ್ ತುದಿಯಡ್ಕ, ಸೈಂಟ್ ಬ್ರಿಜಿದ್ ಚರ್ಚ್‍ನ ಧರ್ಮಗುರು ವಿಕ್ಟರ್ ಡಿಸೋಜ, ಗಾಂಧಿನಗರ ಮನವ್ವಿರುಲ್ ಮದರಸದ ಅಧ್ಯಾಪಕ ಅಬ್ದುಲ್ ಲತೀಫ್ ಸಖಾಫಿ ಗೂನಡ್ಕ ಮಾತನಾಡಿದರು. ಹಾಜಿ ಇಸಾಕ್ ಸಾಹೇಬ್, ಕೆ.ಎಂ.ಮುಸ್ತಫಾ, ದುರ್ಗಾಕುಮಾರ್ ನಾಯರ್‍ಕೆರೆ, ಹರಿಣಿ ಸದಾಶಿವ, ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪುಷ್ಪಾ ರಾಧಾಕೃಷ್ಣ ಮಾಣಿಬೆಟ್ಟು ಸ್ವಾಗತಿಸಿ, ಸನ್ಮಾನ ಸಮಿತಿಯ ಸಹ ಸಂಚಾಲಕ ಹಸೈನಾರ್ ಜಯನಗರ ವಂದಿಸಿದರು. ಲತಾಶ್ರೀ ಸುಪ್ರೀತ್ ಮೋಂಟಡ್ಕ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು ಅಧಿಕ

ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…

12 hours ago

ಸರ್ಕಾರಿ ಬಸ್ ನಿರ್ವಾಹಕರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಮನವಿ

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…

12 hours ago

ಕೃಷಿ ವಿಶ್ವವಿದ್ಯಾಲಯಗಳು ಸಂಶೋಧನೆಗೆ ಹೆಚ್ಚಿನ ಆದ್ಯತೆ ನೀಡಬೇಕು

ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…

12 hours ago

ಏರುತ್ತಿರುವ ತಾಪಮಾನ | 2030 ರ ವೇಳೆಗೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ | ಕೃಷಿ ಸಾಲ ಮರುಪಾವತಿ ಮೇಲೆ ಹೊಡೆತ..? |

ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…

20 hours ago

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಅಭಿಯಾನ | ರಾಜ್ಯಸಭಾ ಸಂಸದೆ ಸುಧಾಮೂರ್ತಿ ಸೇರಿದಂತೆ 10 ಮಂದಿ ನಾಮನಿರ್ದೇಶನ

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…

21 hours ago

ಸಹಕಾರಿ ಪಾಠ | ಆರ್ಥಿಕ ಶಿಸ್ತು ಹಾಗೂ ಸಣ್ಣ ಸಣ್ಣ ಮೊತ್ತವೂ ಬ್ಯಾಂಕಿಗೆ ಏಕೆ ಬರಬೇಕು…?

ತೀರಾ ಸಣ್ಣ ಮಟ್ಟಿನ‌ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?

22 hours ago