Advertisement
ಕಾರ್ಯಕ್ರಮಗಳು

ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ಸುಳ್ಯದಲ್ಲಿ ಸನ್ಮಾನ – ಹಾಜಬ್ಬರ ಸಾಧನೆ ಅನನ್ಯ: ಗಿರೀಶ್ ಭಾರದ್ವಾಜ್

Share

ಸುಳ್ಯ: ಹರೇಕಳ ಹಾಜಬ್ಬ ತನ್ನ ಊರಿನಲ್ಲಿ ಸರ್ಕಾರಿ ಶಾಲೆಯನ್ನು ಕಟ್ಟಿ ಬೆಳೆಸಿದ ರೀತಿ ನಿಜಕ್ಕೂ ಅದ್ಭುತ. ಅವರ ಸಾಧನೆ ಅನನ್ಯವಾದುದು ಎಂದು ಪದ್ಮಶ್ರೀ ಪುರಸ್ಕೃತ ಇಂಜಿನಿಯರ್ ಗಿರೀಶ್ ಭಾರದ್ವಾಜ್ ಹೇಳಿದ್ದಾರೆ.

ಸುಳ್ಯದ ಎಂ.ಬಿ.ಫೌಂಡೇಶನ್ ವತಿಯಿಂದ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಪದ್ಮಶ್ರೀ ಪುರಸ್ಕೃತ ಅಕ್ಷರ ಸಂತ ಹರೇಕಳ ಹಾಜಬ್ಬ ಮತ್ತು ಪತ್ರಕರ್ತ ಗುರುವಪ್ಪ ಎನ್.ಟಿ.ಬಾಳೆಪುಣಿ ಅವರನ್ನು ಸನ್ಮಾನಿಸಿ ಅವರು ಮಾತನಾಡಿದರು. ಸಮಾಜದ ಮೇಲೆ ನಿಷ್ಕಲ್ಮಶ ಪ್ರೀತಿ ಇರುವ ಕಾರಣ ಕೆಲವರು ಸಮಾಜಕ್ಕಾಗಿ ಸೇವೆ ಮಾಡುತ್ತಾರೆ. ಅಂತವರು ಗುರುತಿಸಲ್ಪಾಟ್ಟಾಗ ಸಮಾಜ, ದೇಶ ಅವರನ್ನು ಗೌರವಿಸುತ್ತದೆ ಎಂದು ಗಿರೀಶ್ ಭಾರದ್ವಾಜ್ ಹೇಳಿದರು.

ಸಮಾರಂಭವನ್ನು ಉದ್ಘಾಟಿಸಿದ ರಾಷ್ಟ್ರಪ್ರಶಸ್ತಿ ಪುರಸ್ಕೃತ ನಿವೃತ್ತ ಪ್ರಾಂಶುಪಾಲ ಕೆ.ಆರ್.ಗಂಗಾಧರ ಹೃದಯ ಶ್ರೀಮಂತಿಕೆಯಿಂದ ದೊಡ್ಡ ಸಾಧನೆ ಮಾಡಿದ ಹಾಜಬ್ಬರು ಸಮಾಜದ ಎಲ್ಲರಿಗೂ ಪ್ರೇರಣೆ ಎಂದು ಹೇಳಿದರು. ಹರೇಕಳ ಹಾಜಬ್ಬರನ್ನು ಅಭಿನಂದಿಸಿ ಮಾತನಾಡಿದ ಹಿರಿಯ ಪತ್ರಕರ್ತ ಗುರುವಪ್ಪ ಎನ್.ಟಿ.ಬಾಳೆಪುಣಿ ಹಾಜಬ್ಬ ಅವರು ತಮ್ಮ ಗುಣ, ತ್ಯಾಗ ಮತ್ತು ಸರಳತೆಯಿಂದ ಪದ್ಮಶ್ರೀ ಪ್ರಶಸ್ತಿ ಪಡೆಯುವವರೆಗೆ ಬೆಳೆದಿದ್ದಾರೆ. ತಮ್ಮ ಎಲ್ಲಾ ದುಃಖವನ್ನೂ ಮರೆತು ಸರ್ಕಾರಿ ಶಾಲೆಯನ್ನು ಕಟ್ಟಿ ಬೆಳೆಸಿದ್ದಾರೆ. ಶಾಲೆಯನ್ನೂ, ಶಾಲೆಯ ಮಕ್ಕಳನ್ನೂ ಪ್ರೀತಿಸಿದರು. ಪ್ರಶಸ್ತಿಯಿಂದ ಬಂದ ಎಲ್ಲಾ ಹಣವನ್ನೂ ಶಾಲೆಗಾಗಿ ವ್ಯಯಿಸಿದ್ದಾರೆ ಎಂದು ಅವರು ಹೇಳಿದರು.

ಎಂ.ಬಿ.ಫೌಂಡೇಶನ್‍ನ ಅಧ್ಯಕ್ಷ ಎಂ.ಬಿ.ಸದಾಶಿವ ಅಧ್ಯಕ್ಷತೆ ವಹಿಸಿದ್ದರು. ಚೆನ್ನಕೇಶವ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಡಾ.ಹರಪ್ರಸಾದ್ ತುದಿಯಡ್ಕ, ಸೈಂಟ್ ಬ್ರಿಜಿದ್ ಚರ್ಚ್‍ನ ಧರ್ಮಗುರು ವಿಕ್ಟರ್ ಡಿಸೋಜ, ಗಾಂಧಿನಗರ ಮನವ್ವಿರುಲ್ ಮದರಸದ ಅಧ್ಯಾಪಕ ಅಬ್ದುಲ್ ಲತೀಫ್ ಸಖಾಫಿ ಗೂನಡ್ಕ ಮಾತನಾಡಿದರು. ಹಾಜಿ ಇಸಾಕ್ ಸಾಹೇಬ್, ಕೆ.ಎಂ.ಮುಸ್ತಫಾ, ದುರ್ಗಾಕುಮಾರ್ ನಾಯರ್‍ಕೆರೆ, ಹರಿಣಿ ಸದಾಶಿವ, ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪುಷ್ಪಾ ರಾಧಾಕೃಷ್ಣ ಮಾಣಿಬೆಟ್ಟು ಸ್ವಾಗತಿಸಿ, ಸನ್ಮಾನ ಸಮಿತಿಯ ಸಹ ಸಂಚಾಲಕ ಹಸೈನಾರ್ ಜಯನಗರ ವಂದಿಸಿದರು. ಲತಾಶ್ರೀ ಸುಪ್ರೀತ್ ಮೋಂಟಡ್ಕ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ವಿವಾದ – ಮುಸ್ಲಿಂ ಕುಟುಂಬದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆರೋಪ, ನಿಜಾಂಶವೇನು?

ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…

48 minutes ago

ಹವಾಮಾನ ವರದಿ | 07.06.2026 | ಜೂನ್ 8ರಿಂದ ರಾಜ್ಯದಲ್ಲಿ ಮುಂಗಾರು ಚುರುಕು| ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ, ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…

6 hours ago

“ಜಾಕ್‌ಫ್ರೂಟ್‌ ಹಬ್ಬ”ಕ್ಕೆ ಜನಸಾಗರ – 50 ಕ್ಕೂ ಹೆಚ್ಚು ಹಲಸಿನ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ

ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…

21 hours ago

ಕ್ಯಾಂಪ್ಕೋ ಬ್ರಹ್ಮ ವಾರಣಾಶಿ ಸುಬ್ರಾಯ ಭಟ್‌ ಜನ್ಮಶತಮಾನೋತ್ಸವ ವರ್ಷ – ಅಡಿಕೆ ಬೆಳೆಗಾರರ ಬದುಕು ಬದಲಿಸಿದ ಮಹಾನ್ ದಾರ್ಶನಿಕ

ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್‌ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…

22 hours ago

ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?

ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…

1 day ago

ಭಾರತದ ಚೆಸ್ ಇತಿಹಾಸದಲ್ಲಿ ಹೊಸ ಅಧ್ಯಾಯ – ನಾರ್ವೆ ಚೆಸ್ ಕಿರೀಟ ಗೆದ್ದ ಮೊದಲ ಭಾರತೀಯ ಪ್ರಜ್ಞಾನಂದ

ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…

1 day ago