Advertisement
ಕಾರ್ಯಕ್ರಮಗಳು

ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ಸುಳ್ಯದಲ್ಲಿ ಸನ್ಮಾನ – ಹಾಜಬ್ಬರ ಸಾಧನೆ ಅನನ್ಯ: ಗಿರೀಶ್ ಭಾರದ್ವಾಜ್

Share

ಸುಳ್ಯ: ಹರೇಕಳ ಹಾಜಬ್ಬ ತನ್ನ ಊರಿನಲ್ಲಿ ಸರ್ಕಾರಿ ಶಾಲೆಯನ್ನು ಕಟ್ಟಿ ಬೆಳೆಸಿದ ರೀತಿ ನಿಜಕ್ಕೂ ಅದ್ಭುತ. ಅವರ ಸಾಧನೆ ಅನನ್ಯವಾದುದು ಎಂದು ಪದ್ಮಶ್ರೀ ಪುರಸ್ಕೃತ ಇಂಜಿನಿಯರ್ ಗಿರೀಶ್ ಭಾರದ್ವಾಜ್ ಹೇಳಿದ್ದಾರೆ.

ಸುಳ್ಯದ ಎಂ.ಬಿ.ಫೌಂಡೇಶನ್ ವತಿಯಿಂದ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಪದ್ಮಶ್ರೀ ಪುರಸ್ಕೃತ ಅಕ್ಷರ ಸಂತ ಹರೇಕಳ ಹಾಜಬ್ಬ ಮತ್ತು ಪತ್ರಕರ್ತ ಗುರುವಪ್ಪ ಎನ್.ಟಿ.ಬಾಳೆಪುಣಿ ಅವರನ್ನು ಸನ್ಮಾನಿಸಿ ಅವರು ಮಾತನಾಡಿದರು. ಸಮಾಜದ ಮೇಲೆ ನಿಷ್ಕಲ್ಮಶ ಪ್ರೀತಿ ಇರುವ ಕಾರಣ ಕೆಲವರು ಸಮಾಜಕ್ಕಾಗಿ ಸೇವೆ ಮಾಡುತ್ತಾರೆ. ಅಂತವರು ಗುರುತಿಸಲ್ಪಾಟ್ಟಾಗ ಸಮಾಜ, ದೇಶ ಅವರನ್ನು ಗೌರವಿಸುತ್ತದೆ ಎಂದು ಗಿರೀಶ್ ಭಾರದ್ವಾಜ್ ಹೇಳಿದರು.

ಸಮಾರಂಭವನ್ನು ಉದ್ಘಾಟಿಸಿದ ರಾಷ್ಟ್ರಪ್ರಶಸ್ತಿ ಪುರಸ್ಕೃತ ನಿವೃತ್ತ ಪ್ರಾಂಶುಪಾಲ ಕೆ.ಆರ್.ಗಂಗಾಧರ ಹೃದಯ ಶ್ರೀಮಂತಿಕೆಯಿಂದ ದೊಡ್ಡ ಸಾಧನೆ ಮಾಡಿದ ಹಾಜಬ್ಬರು ಸಮಾಜದ ಎಲ್ಲರಿಗೂ ಪ್ರೇರಣೆ ಎಂದು ಹೇಳಿದರು. ಹರೇಕಳ ಹಾಜಬ್ಬರನ್ನು ಅಭಿನಂದಿಸಿ ಮಾತನಾಡಿದ ಹಿರಿಯ ಪತ್ರಕರ್ತ ಗುರುವಪ್ಪ ಎನ್.ಟಿ.ಬಾಳೆಪುಣಿ ಹಾಜಬ್ಬ ಅವರು ತಮ್ಮ ಗುಣ, ತ್ಯಾಗ ಮತ್ತು ಸರಳತೆಯಿಂದ ಪದ್ಮಶ್ರೀ ಪ್ರಶಸ್ತಿ ಪಡೆಯುವವರೆಗೆ ಬೆಳೆದಿದ್ದಾರೆ. ತಮ್ಮ ಎಲ್ಲಾ ದುಃಖವನ್ನೂ ಮರೆತು ಸರ್ಕಾರಿ ಶಾಲೆಯನ್ನು ಕಟ್ಟಿ ಬೆಳೆಸಿದ್ದಾರೆ. ಶಾಲೆಯನ್ನೂ, ಶಾಲೆಯ ಮಕ್ಕಳನ್ನೂ ಪ್ರೀತಿಸಿದರು. ಪ್ರಶಸ್ತಿಯಿಂದ ಬಂದ ಎಲ್ಲಾ ಹಣವನ್ನೂ ಶಾಲೆಗಾಗಿ ವ್ಯಯಿಸಿದ್ದಾರೆ ಎಂದು ಅವರು ಹೇಳಿದರು.

ಎಂ.ಬಿ.ಫೌಂಡೇಶನ್‍ನ ಅಧ್ಯಕ್ಷ ಎಂ.ಬಿ.ಸದಾಶಿವ ಅಧ್ಯಕ್ಷತೆ ವಹಿಸಿದ್ದರು. ಚೆನ್ನಕೇಶವ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಡಾ.ಹರಪ್ರಸಾದ್ ತುದಿಯಡ್ಕ, ಸೈಂಟ್ ಬ್ರಿಜಿದ್ ಚರ್ಚ್‍ನ ಧರ್ಮಗುರು ವಿಕ್ಟರ್ ಡಿಸೋಜ, ಗಾಂಧಿನಗರ ಮನವ್ವಿರುಲ್ ಮದರಸದ ಅಧ್ಯಾಪಕ ಅಬ್ದುಲ್ ಲತೀಫ್ ಸಖಾಫಿ ಗೂನಡ್ಕ ಮಾತನಾಡಿದರು. ಹಾಜಿ ಇಸಾಕ್ ಸಾಹೇಬ್, ಕೆ.ಎಂ.ಮುಸ್ತಫಾ, ದುರ್ಗಾಕುಮಾರ್ ನಾಯರ್‍ಕೆರೆ, ಹರಿಣಿ ಸದಾಶಿವ, ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪುಷ್ಪಾ ರಾಧಾಕೃಷ್ಣ ಮಾಣಿಬೆಟ್ಟು ಸ್ವಾಗತಿಸಿ, ಸನ್ಮಾನ ಸಮಿತಿಯ ಸಹ ಸಂಚಾಲಕ ಹಸೈನಾರ್ ಜಯನಗರ ವಂದಿಸಿದರು. ಲತಾಶ್ರೀ ಸುಪ್ರೀತ್ ಮೋಂಟಡ್ಕ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಇಂಡೋ ಫಾಲಿ, ಬರ್ಮಾ ಗೋಟಾ ಹಾವಳಿ : ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಗೆ ನಿಜವಾಗಿಯೂ ಎಷ್ಟು ಹೊಡೆತ?

ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…

3 hours ago

ವೈಜ್ಞಾನಿಕ ಕೃಷಿಗೆ ಕೇಂದ್ರದ ಒತ್ತು | ರಾಜ್ಯವಾರು ಕೃಷಿ-ಹವಾಮಾನ ಮಾರ್ಗಸೂಚಿ ಸಿದ್ಧಕ್ಕೆ ವೇಗ

ರಾಜ್ಯಗಳ ಕೃಷಿ-ಹವಾಮಾನ ಪರಿಸ್ಥಿತಿಗಳಿಗೆ ಅನುಗುಣವಾಗಿ ರಾಜ್ಯವಾರು ಕೃಷಿ ಮಾರ್ಗಸೂಚಿ ಸಿದ್ಧಪಡಿಸಲು ಕೇಂದ್ರ ಕೃಷಿ…

4 hours ago

ಕರಾವಳಿಯಲ್ಲಿ ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ | ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಸಮುದ್ರದ ಅಲೆಗಳ ಅಬ್ಬರ ಹಾಗೂ ಗಾಳಿ ವೇಗ ಹೆಚ್ಚಾಗುವ ಸಾಧ್ಯತೆ…

5 hours ago

ಭಾರತದ ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಹಾವಳಿ..! ಮಣ್ಣಿನೊಳಗೆ ‘ಪ್ಲಾಸ್ಟಿಕ್ ವಿಷ’! ರೈತರ ಭವಿಷ್ಯಕ್ಕೆ ಮೈಕ್ರೋಪ್ಲಾಸ್ಟಿಕ್ ದೊಡ್ಡ ಎಚ್ಚರಿಕೆ

ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…

10 hours ago

ಹವಾಮಾನ ವರದಿ | 17-05-2026 | ಮೇ 19 ರಿಂದ ಹವಾಮಾನದಲ್ಲಿ ದೊಡ್ಡ ಬದಲಾವಣೆ ಸಾಧ್ಯ..!

ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…

13 hours ago

ಹೆದ್ದಾರಿಯಲ್ಲಿ ಖಾಸಗಿ ಬಸ್‌ಗಳ ‘ಲೈಟ್‌ ಅಬ್ಬರ’…! ಬೆಂಕಿಗಾಹುತಿಯಾದ ಬಸ್‌ ಘಟನೆ ಮತ್ತೆ ಎಚ್ಚರಿಸಿದ ಅಪಾಯದ ಗಂಟೆ..!

ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್‌ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…

17 hours ago