ಪುತ್ತೂರು: ತೆಂಕುತಿಟ್ಟು ಯಕ್ಷಗಾನದ ಹಿರಿಯ ಕಲಾವಿದ ಹಾಗೂ ಯಕ್ಷಶಿಕ್ಷಣ ಶಿಕ್ಷಕ ಮಾಂಬಾಡಿ ಸುಬ್ರಹ್ಮಣ್ಯ ಭಟ್ಟರಿಗೆ ಈ ಸಾಲಿನ ‘ಪದ್ಯಾಣ ಪ್ರಶಸ್ತಿ’ ಘೋಷಣೆಯಾಗಿದೆ. ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಡಿ. 15ರಂದು ಸಂಜೆ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದೆ ಎಂದು ‘ಪದ್ಯಾಣ ಪ್ರಶಸ್ತಿ’ ಸಮಿತಿ ಕಾರ್ಯದರ್ಶಿ ಸ್ವಸ್ತಿಕ್ ಪದ್ಯಾಣ ತಿಳಿಸಿದ್ದಾರೆ.
ಪದ್ಯಾಣ ಕುಟುಂಬದ ಹಿರಿಯರಾದ ಕೀರ್ತಿಶೇಷ ಪದ್ಯಾಣ ಪುಟ್ಟು ಭಾಗವತರ ನೆನಪಿನಲ್ಲಿ ಪದ್ಯಾಣ ಪ್ರಶಸ್ತಿ ರೂಪುಗೊಂಡಿದೆ. ಮೂರು ವರುಷಗಳ ಹಿಂದೆ ಸ್ಥಾಪಿಸಿದ ಪ್ರಶಸ್ತಿಯನ್ನು ಹಿರಿಯ ಭಾಗವತರಾದ ಅಗರಿ ರಘುರಾಮ ಭಾಗವತರು, ಬಲಿಪ ನಾರಾಯಣ ಭಾಗವತರು, ತೆಂಕಬೈಲು ತಿರುಮಲೇಶ್ವರ ಶಾಸ್ತ್ರಿ ಇವರಿಗೆ ಪ್ರದಾನಿಸಲಾಗಿತ್ತು.
ಪದ್ಯಾಣ ಮನೆತನಕ್ಕೆ ಯಕ್ಷ ಕಲೆಯು ನೀಡಿದ ಗೌರವಕ್ಕೆ ಪ್ರತಿಯಾಗಿ ‘ಕಲಾಕೃತಜ್ಞತೆ’ಯ ದ್ಯೋತಕವಾಗಿ ಪದ್ಯಾಣ ಪ್ರಶಸ್ತಿ ಸ್ಥಾಪಿತವಾಗಿದೆ. ಈ ವರುಷ ಮಾಂಬಾಡಿ ಸುಬ್ರಹ್ಮಣ್ಯ ಭಟ್ಟರಿಗೆ ಪ್ರಶಸ್ತಿ. ತೆಂಕುತಿಟ್ಟಿನ ಹಳೆಯ ಪಾರಂಪರಿಕ ಶೈಲಿಯೊಂದಕ್ಕೆ ಸಲ್ಲುವ ಗೌರವವಿದು.
ಸುಬ್ರಹ್ಮಣ್ಯ ಭಟ್ಟರು ತೆಂಕುತಿಟ್ಟು ಯಕ್ಷಗಾನದ ಪರಂಪರೆಯ ಪ್ರಾತಿನಿಧಿಕ ಕಲಾವಿದ. ಪ್ರಸಿದ್ಧ ಮಾಂಬಾಡಿ ಮನೆತನ. ಇವರ ತಂದೆ ಮಹಾನ್ ಗುರು ಮಾಂಬಾಡಿ ನಾರಾಯಣ ಭಾಗವತರು. ಸುಬ್ರಹ್ಮಣ್ಯ ಭಟ್ಟರು ಸಾವಿರಾರು ಹಿಮ್ಮೇಳ ಕಲಾವಿದರನ್ನು ರೂಪಿಸಿದವರು. ಕಳೆದ ಐದು ದಶಕಗಳಿಂದ ಯಕ್ಷ ಶಿಕ್ಷಣಕ್ಕೆ ಮಾನ ನೀಡಿದವರು. ವಿವಿಧ ಮೇಳಗಳಲ್ಲಿ ವ್ಯವಸಾಯ ಮಾಡಿದ ಅನುಭವಿ. ಈಗವರಿಗೆ ಪದ್ಯಾಣ ಪ್ರಶಸ್ತಿಯ ಬಾಗಿನ. ಈ ಸಂದರ್ಭದಲ್ಲಿ ‘ಶ್ರೀ ಹನುಮಗಿರಿ ಮೇಳ’ದವರಿಂದ ‘ಸತ್ಯಾಂತರಂಗ’ ಪ್ರಸಂಗದ ಬಯಲಾಟ ಜರುಗಲಿದೆ.
ಒಂದು ಹೋರಾಟದಿಂದ ರಾಜಕೀಯ ಪಕ್ಷವಾಗಿ ವೇಗವಾಗಿ ಬೆಳೆದಿರುವ ಆಮ್ ಆದ್ಮಿಪಕ್ಷ ಕೇವಲ 13…
ದುಬೈಯಿಂದ ಒಣಖರ್ಜೂರ ಹೆಸರಿನಲ್ಲಿ ಅಡಿಕೆ ಕಳ್ಳಸಾಗಾಣಿಕೆಯ ಮತ್ತೊಂದು ಪ್ರಕರಣವನ್ನು ಡಿಆರ್ಐ ಪತ್ತೆ ಮಾಡಿದೆ.26.32…
ಹಸಿರು ನ್ಯಾಯಾಧೀಕರಣ ಆದೇಶ ಹಾಗೂ ಜಿಲ್ಲಾಧಿಕಾರಿ ಸೂಚನೆಯಂತೆ ಮುಳಬಾಗಿಲು ತಾಲೂಕಿನ ಎಲ್ಲಾ ಕೆರೆಗಳ…
ಕಾಡು ಪ್ರಾಣಿಗಳ ಹಾವಳಿ ತಪ್ಪಿಸುವಂತೆ ಒತ್ತಾಯಿಸಿ ಚಿಕ್ಕಮಗಳೂರು ಜಿಲ್ಲೆಯ ಕಳಸ ಪಟ್ಟಣದಲ್ಲಿ ಅಂಗಡಿ-ಮುಂಗಟ್ಟುಗಳನ್ನು…
ಭವಿಷ್ಯದಲ್ಲಿ ದೇಶದ 6 ಲಕ್ಷ ಗ್ರಾಮಗಳಿಗೆ ತಲಾ 10 ಡ್ರೋಣ್ ಗಳನ್ನು ವಿತರಿಸುವ…
ಮಹಿಳೆಯರಲ್ಲಿ ಗರ್ಭಕಂಠ ಕ್ಯಾನ್ಸರ್ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗುತ್ತಿದ್ದು, ಆಯುಷ್ಮಾನ್ ಆರೋಗ್ಯ ಮಂದಿರಗಳಲ್ಲಿ, 30…