Advertisement
ಕಲೆ-ಸಂಸ್ಕೃತಿ

‘ಪದ್ಯಾಣ ಪ್ರಶಸ್ತಿ’ಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ

Share

ಪುತ್ತೂರು: ತೆಂಕುತಿಟ್ಟು ಯಕ್ಷಗಾನದ ಹಿರಿಯ ಕಲಾವಿದ ಹಾಗೂ ಯಕ್ಷಶಿಕ್ಷಣ ಶಿಕ್ಷಕ ಮಾಂಬಾಡಿ ಸುಬ್ರಹ್ಮಣ್ಯ ಭಟ್ಟರಿಗೆ ಈ ಸಾಲಿನ ‘ಪದ್ಯಾಣ ಪ್ರಶಸ್ತಿ’ ಘೋಷಣೆಯಾಗಿದೆ. ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಡಿ. 15ರಂದು ಸಂಜೆ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದೆ ಎಂದು ‘ಪದ್ಯಾಣ ಪ್ರಶಸ್ತಿ’ ಸಮಿತಿ ಕಾರ್ಯದರ್ಶಿ ಸ್ವಸ್ತಿಕ್ ಪದ್ಯಾಣ ತಿಳಿಸಿದ್ದಾರೆ.

ಪದ್ಯಾಣ ಕುಟುಂಬದ ಹಿರಿಯರಾದ ಕೀರ್ತಿಶೇಷ ಪದ್ಯಾಣ ಪುಟ್ಟು ಭಾಗವತರ ನೆನಪಿನಲ್ಲಿ ಪದ್ಯಾಣ ಪ್ರಶಸ್ತಿ ರೂಪುಗೊಂಡಿದೆ. ಮೂರು ವರುಷಗಳ ಹಿಂದೆ ಸ್ಥಾಪಿಸಿದ ಪ್ರಶಸ್ತಿಯನ್ನು ಹಿರಿಯ ಭಾಗವತರಾದ ಅಗರಿ ರಘುರಾಮ ಭಾಗವತರು, ಬಲಿಪ ನಾರಾಯಣ ಭಾಗವತರು, ತೆಂಕಬೈಲು ತಿರುಮಲೇಶ್ವರ ಶಾಸ್ತ್ರಿ ಇವರಿಗೆ ಪ್ರದಾನಿಸಲಾಗಿತ್ತು.

ಪದ್ಯಾಣ ಮನೆತನಕ್ಕೆ ಯಕ್ಷ ಕಲೆಯು ನೀಡಿದ ಗೌರವಕ್ಕೆ ಪ್ರತಿಯಾಗಿ ‘ಕಲಾಕೃತಜ್ಞತೆ’ಯ ದ್ಯೋತಕವಾಗಿ ಪದ್ಯಾಣ ಪ್ರಶಸ್ತಿ ಸ್ಥಾಪಿತವಾಗಿದೆ. ಈ ವರುಷ ಮಾಂಬಾಡಿ ಸುಬ್ರಹ್ಮಣ್ಯ ಭಟ್ಟರಿಗೆ ಪ್ರಶಸ್ತಿ. ತೆಂಕುತಿಟ್ಟಿನ ಹಳೆಯ ಪಾರಂಪರಿಕ ಶೈಲಿಯೊಂದಕ್ಕೆ ಸಲ್ಲುವ ಗೌರವವಿದು.

ಸುಬ್ರಹ್ಮಣ್ಯ ಭಟ್ಟರು ತೆಂಕುತಿಟ್ಟು ಯಕ್ಷಗಾನದ ಪರಂಪರೆಯ ಪ್ರಾತಿನಿಧಿಕ ಕಲಾವಿದ. ಪ್ರಸಿದ್ಧ ಮಾಂಬಾಡಿ ಮನೆತನ. ಇವರ ತಂದೆ ಮಹಾನ್ ಗುರು ಮಾಂಬಾಡಿ ನಾರಾಯಣ ಭಾಗವತರು. ಸುಬ್ರಹ್ಮಣ್ಯ ಭಟ್ಟರು ಸಾವಿರಾರು ಹಿಮ್ಮೇಳ ಕಲಾವಿದರನ್ನು ರೂಪಿಸಿದವರು. ಕಳೆದ ಐದು ದಶಕಗಳಿಂದ ಯಕ್ಷ ಶಿಕ್ಷಣಕ್ಕೆ ಮಾನ ನೀಡಿದವರು. ವಿವಿಧ ಮೇಳಗಳಲ್ಲಿ ವ್ಯವಸಾಯ ಮಾಡಿದ ಅನುಭವಿ. ಈಗವರಿಗೆ ಪದ್ಯಾಣ ಪ್ರಶಸ್ತಿಯ ಬಾಗಿನ. ಈ ಸಂದರ್ಭದಲ್ಲಿ ‘ಶ್ರೀ ಹನುಮಗಿರಿ ಮೇಳ’ದವರಿಂದ ‘ಸತ್ಯಾಂತರಂಗ’ ಪ್ರಸಂಗದ ಬಯಲಾಟ ಜರುಗಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

8 hours ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

1 day ago

ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ

ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…

1 day ago

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

2 days ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

3 days ago