ಪುತ್ತೂರು: ತೆಂಕುತಿಟ್ಟು ಯಕ್ಷಗಾನದ ಹಿರಿಯ ಕಲಾವಿದ ಹಾಗೂ ಯಕ್ಷಶಿಕ್ಷಣ ಶಿಕ್ಷಕ ಮಾಂಬಾಡಿ ಸುಬ್ರಹ್ಮಣ್ಯ ಭಟ್ಟರಿಗೆ ಈ ಸಾಲಿನ ‘ಪದ್ಯಾಣ ಪ್ರಶಸ್ತಿ’ ಘೋಷಣೆಯಾಗಿದೆ. ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಡಿ. 15ರಂದು ಸಂಜೆ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದೆ ಎಂದು ‘ಪದ್ಯಾಣ ಪ್ರಶಸ್ತಿ’ ಸಮಿತಿ ಕಾರ್ಯದರ್ಶಿ ಸ್ವಸ್ತಿಕ್ ಪದ್ಯಾಣ ತಿಳಿಸಿದ್ದಾರೆ.
ಪದ್ಯಾಣ ಕುಟುಂಬದ ಹಿರಿಯರಾದ ಕೀರ್ತಿಶೇಷ ಪದ್ಯಾಣ ಪುಟ್ಟು ಭಾಗವತರ ನೆನಪಿನಲ್ಲಿ ಪದ್ಯಾಣ ಪ್ರಶಸ್ತಿ ರೂಪುಗೊಂಡಿದೆ. ಮೂರು ವರುಷಗಳ ಹಿಂದೆ ಸ್ಥಾಪಿಸಿದ ಪ್ರಶಸ್ತಿಯನ್ನು ಹಿರಿಯ ಭಾಗವತರಾದ ಅಗರಿ ರಘುರಾಮ ಭಾಗವತರು, ಬಲಿಪ ನಾರಾಯಣ ಭಾಗವತರು, ತೆಂಕಬೈಲು ತಿರುಮಲೇಶ್ವರ ಶಾಸ್ತ್ರಿ ಇವರಿಗೆ ಪ್ರದಾನಿಸಲಾಗಿತ್ತು.
ಪದ್ಯಾಣ ಮನೆತನಕ್ಕೆ ಯಕ್ಷ ಕಲೆಯು ನೀಡಿದ ಗೌರವಕ್ಕೆ ಪ್ರತಿಯಾಗಿ ‘ಕಲಾಕೃತಜ್ಞತೆ’ಯ ದ್ಯೋತಕವಾಗಿ ಪದ್ಯಾಣ ಪ್ರಶಸ್ತಿ ಸ್ಥಾಪಿತವಾಗಿದೆ. ಈ ವರುಷ ಮಾಂಬಾಡಿ ಸುಬ್ರಹ್ಮಣ್ಯ ಭಟ್ಟರಿಗೆ ಪ್ರಶಸ್ತಿ. ತೆಂಕುತಿಟ್ಟಿನ ಹಳೆಯ ಪಾರಂಪರಿಕ ಶೈಲಿಯೊಂದಕ್ಕೆ ಸಲ್ಲುವ ಗೌರವವಿದು.
ಸುಬ್ರಹ್ಮಣ್ಯ ಭಟ್ಟರು ತೆಂಕುತಿಟ್ಟು ಯಕ್ಷಗಾನದ ಪರಂಪರೆಯ ಪ್ರಾತಿನಿಧಿಕ ಕಲಾವಿದ. ಪ್ರಸಿದ್ಧ ಮಾಂಬಾಡಿ ಮನೆತನ. ಇವರ ತಂದೆ ಮಹಾನ್ ಗುರು ಮಾಂಬಾಡಿ ನಾರಾಯಣ ಭಾಗವತರು. ಸುಬ್ರಹ್ಮಣ್ಯ ಭಟ್ಟರು ಸಾವಿರಾರು ಹಿಮ್ಮೇಳ ಕಲಾವಿದರನ್ನು ರೂಪಿಸಿದವರು. ಕಳೆದ ಐದು ದಶಕಗಳಿಂದ ಯಕ್ಷ ಶಿಕ್ಷಣಕ್ಕೆ ಮಾನ ನೀಡಿದವರು. ವಿವಿಧ ಮೇಳಗಳಲ್ಲಿ ವ್ಯವಸಾಯ ಮಾಡಿದ ಅನುಭವಿ. ಈಗವರಿಗೆ ಪದ್ಯಾಣ ಪ್ರಶಸ್ತಿಯ ಬಾಗಿನ. ಈ ಸಂದರ್ಭದಲ್ಲಿ ‘ಶ್ರೀ ಹನುಮಗಿರಿ ಮೇಳ’ದವರಿಂದ ‘ಸತ್ಯಾಂತರಂಗ’ ಪ್ರಸಂಗದ ಬಯಲಾಟ ಜರುಗಲಿದೆ.
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…