Advertisement
ಕಲೆ-ಸಂಸ್ಕೃತಿ

‘ಪದ್ಯಾಣ ಪ್ರಶಸ್ತಿ’ಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ

Share

ಪುತ್ತೂರು: ತೆಂಕುತಿಟ್ಟು ಯಕ್ಷಗಾನದ ಹಿರಿಯ ಕಲಾವಿದ ಹಾಗೂ ಯಕ್ಷಶಿಕ್ಷಣ ಶಿಕ್ಷಕ ಮಾಂಬಾಡಿ ಸುಬ್ರಹ್ಮಣ್ಯ ಭಟ್ಟರಿಗೆ ಈ ಸಾಲಿನ ‘ಪದ್ಯಾಣ ಪ್ರಶಸ್ತಿ’ ಘೋಷಣೆಯಾಗಿದೆ. ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಡಿ. 15ರಂದು ಸಂಜೆ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದೆ ಎಂದು ‘ಪದ್ಯಾಣ ಪ್ರಶಸ್ತಿ’ ಸಮಿತಿ ಕಾರ್ಯದರ್ಶಿ ಸ್ವಸ್ತಿಕ್ ಪದ್ಯಾಣ ತಿಳಿಸಿದ್ದಾರೆ.

ಪದ್ಯಾಣ ಕುಟುಂಬದ ಹಿರಿಯರಾದ ಕೀರ್ತಿಶೇಷ ಪದ್ಯಾಣ ಪುಟ್ಟು ಭಾಗವತರ ನೆನಪಿನಲ್ಲಿ ಪದ್ಯಾಣ ಪ್ರಶಸ್ತಿ ರೂಪುಗೊಂಡಿದೆ. ಮೂರು ವರುಷಗಳ ಹಿಂದೆ ಸ್ಥಾಪಿಸಿದ ಪ್ರಶಸ್ತಿಯನ್ನು ಹಿರಿಯ ಭಾಗವತರಾದ ಅಗರಿ ರಘುರಾಮ ಭಾಗವತರು, ಬಲಿಪ ನಾರಾಯಣ ಭಾಗವತರು, ತೆಂಕಬೈಲು ತಿರುಮಲೇಶ್ವರ ಶಾಸ್ತ್ರಿ ಇವರಿಗೆ ಪ್ರದಾನಿಸಲಾಗಿತ್ತು.

ಪದ್ಯಾಣ ಮನೆತನಕ್ಕೆ ಯಕ್ಷ ಕಲೆಯು ನೀಡಿದ ಗೌರವಕ್ಕೆ ಪ್ರತಿಯಾಗಿ ‘ಕಲಾಕೃತಜ್ಞತೆ’ಯ ದ್ಯೋತಕವಾಗಿ ಪದ್ಯಾಣ ಪ್ರಶಸ್ತಿ ಸ್ಥಾಪಿತವಾಗಿದೆ. ಈ ವರುಷ ಮಾಂಬಾಡಿ ಸುಬ್ರಹ್ಮಣ್ಯ ಭಟ್ಟರಿಗೆ ಪ್ರಶಸ್ತಿ. ತೆಂಕುತಿಟ್ಟಿನ ಹಳೆಯ ಪಾರಂಪರಿಕ ಶೈಲಿಯೊಂದಕ್ಕೆ ಸಲ್ಲುವ ಗೌರವವಿದು.

ಸುಬ್ರಹ್ಮಣ್ಯ ಭಟ್ಟರು ತೆಂಕುತಿಟ್ಟು ಯಕ್ಷಗಾನದ ಪರಂಪರೆಯ ಪ್ರಾತಿನಿಧಿಕ ಕಲಾವಿದ. ಪ್ರಸಿದ್ಧ ಮಾಂಬಾಡಿ ಮನೆತನ. ಇವರ ತಂದೆ ಮಹಾನ್ ಗುರು ಮಾಂಬಾಡಿ ನಾರಾಯಣ ಭಾಗವತರು. ಸುಬ್ರಹ್ಮಣ್ಯ ಭಟ್ಟರು ಸಾವಿರಾರು ಹಿಮ್ಮೇಳ ಕಲಾವಿದರನ್ನು ರೂಪಿಸಿದವರು. ಕಳೆದ ಐದು ದಶಕಗಳಿಂದ ಯಕ್ಷ ಶಿಕ್ಷಣಕ್ಕೆ ಮಾನ ನೀಡಿದವರು. ವಿವಿಧ ಮೇಳಗಳಲ್ಲಿ ವ್ಯವಸಾಯ ಮಾಡಿದ ಅನುಭವಿ. ಈಗವರಿಗೆ ಪದ್ಯಾಣ ಪ್ರಶಸ್ತಿಯ ಬಾಗಿನ. ಈ ಸಂದರ್ಭದಲ್ಲಿ ‘ಶ್ರೀ ಹನುಮಗಿರಿ ಮೇಳ’ದವರಿಂದ ‘ಸತ್ಯಾಂತರಂಗ’ ಪ್ರಸಂಗದ ಬಯಲಾಟ ಜರುಗಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 09-06-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲವಾಗುತ್ತಿದೆಯೇ..? – ಜೂನ್ 15 ಬಳಿಕ ಹಲವು ಭಾಗಗಳಲ್ಲಿ ಮಳೆ ಇಳಿಮುಖ ಸಾಧ್ಯತೆ

ರಾಜ್ಯದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ…

3 hours ago

ಭಾರತದಲ್ಲಿ ಬಯೋ-ಕಾಂಪೋಸಿಟ್ ಕ್ರಾಂತಿ – ಅರಣ್ಯ ನಾಶವಿಲ್ಲದೇ ಕಟ್ಟಡ ನಿರ್ಮಾಣಕ್ಕೆ ಹೊಸ ದಾರಿ

ಕೃಷಿ ತ್ಯಾಜ್ಯ ಮತ್ತು ನೈಸರ್ಗಿಕ ನಾರುಗಳಿಂದ ತಯಾರಾಗುವ ಬಯೋ-ಕಾಂಪೋಸಿಟ್ ಉತ್ಪನ್ನಗಳು ಮರದ ಪರ್ಯಾಯವಾಗಿ…

5 hours ago

ಅಡಿಕೆಯಿಂದ ಸಾಂಸ್ಕೃತಿಕ ಉದ್ಯಮದವರೆಗೆ – ವಿಯೆಟ್ನಾಂನ ಹೊಸ ಪ್ರಯೋಗ ರೈತರಿಗೆ ಮಾದರಿಯಾಗಬಹುದೇ..?

ಅಡಿಕೆ ಮತ್ತು ವೀಳ್ಯದೆಲೆಯ ಸಾಂಸ್ಕೃತಿಕ ಮಹತ್ವವನ್ನು ಬಳಸಿಕೊಂಡು ವಿಯೆಟ್ನಾಂ ಹೊಸ ಆರೋಗ್ಯ ಹಾಗೂ…

9 hours ago

ಝಾರ್ಖಂಡ್‌ನ ಮಹಿಳಾ ರೈತರಿಂದ ಬೆಳೆದ ಮಾವು ಈಗ ಲಂಡನ್‌ಗೆ…! ಬ್ರಿಟನ್‌ಗೆ ಮೊದಲ ಬಾರಿಗೆ ರಫ್ತು

ಝಾರ್ಖಂಡ್‌ನ ಮಹಿಳಾ ರೈತರು ಬೆಳೆದ 1.5 ಮೆಟ್ರಿಕ್ ಟನ್ ಆಮ್ರಪಾಲಿ ಮಾವುಗಳು ಮೊದಲ…

20 hours ago