Advertisement
ಕಲೆ-ಸಂಸ್ಕೃತಿ

‘ಪದ್ಯಾಣ ಪ್ರಶಸ್ತಿ’ಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ

Share

ಪುತ್ತೂರು: ತೆಂಕುತಿಟ್ಟು ಯಕ್ಷಗಾನದ ಹಿರಿಯ ಕಲಾವಿದ ಹಾಗೂ ಯಕ್ಷಶಿಕ್ಷಣ ಶಿಕ್ಷಕ ಮಾಂಬಾಡಿ ಸುಬ್ರಹ್ಮಣ್ಯ ಭಟ್ಟರಿಗೆ ಈ ಸಾಲಿನ ‘ಪದ್ಯಾಣ ಪ್ರಶಸ್ತಿ’ ಘೋಷಣೆಯಾಗಿದೆ. ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಡಿ. 15ರಂದು ಸಂಜೆ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದೆ ಎಂದು ‘ಪದ್ಯಾಣ ಪ್ರಶಸ್ತಿ’ ಸಮಿತಿ ಕಾರ್ಯದರ್ಶಿ ಸ್ವಸ್ತಿಕ್ ಪದ್ಯಾಣ ತಿಳಿಸಿದ್ದಾರೆ.

ಪದ್ಯಾಣ ಕುಟುಂಬದ ಹಿರಿಯರಾದ ಕೀರ್ತಿಶೇಷ ಪದ್ಯಾಣ ಪುಟ್ಟು ಭಾಗವತರ ನೆನಪಿನಲ್ಲಿ ಪದ್ಯಾಣ ಪ್ರಶಸ್ತಿ ರೂಪುಗೊಂಡಿದೆ. ಮೂರು ವರುಷಗಳ ಹಿಂದೆ ಸ್ಥಾಪಿಸಿದ ಪ್ರಶಸ್ತಿಯನ್ನು ಹಿರಿಯ ಭಾಗವತರಾದ ಅಗರಿ ರಘುರಾಮ ಭಾಗವತರು, ಬಲಿಪ ನಾರಾಯಣ ಭಾಗವತರು, ತೆಂಕಬೈಲು ತಿರುಮಲೇಶ್ವರ ಶಾಸ್ತ್ರಿ ಇವರಿಗೆ ಪ್ರದಾನಿಸಲಾಗಿತ್ತು.

Advertisement

ಪದ್ಯಾಣ ಮನೆತನಕ್ಕೆ ಯಕ್ಷ ಕಲೆಯು ನೀಡಿದ ಗೌರವಕ್ಕೆ ಪ್ರತಿಯಾಗಿ ‘ಕಲಾಕೃತಜ್ಞತೆ’ಯ ದ್ಯೋತಕವಾಗಿ ಪದ್ಯಾಣ ಪ್ರಶಸ್ತಿ ಸ್ಥಾಪಿತವಾಗಿದೆ. ಈ ವರುಷ ಮಾಂಬಾಡಿ ಸುಬ್ರಹ್ಮಣ್ಯ ಭಟ್ಟರಿಗೆ ಪ್ರಶಸ್ತಿ. ತೆಂಕುತಿಟ್ಟಿನ ಹಳೆಯ ಪಾರಂಪರಿಕ ಶೈಲಿಯೊಂದಕ್ಕೆ ಸಲ್ಲುವ ಗೌರವವಿದು.

ಸುಬ್ರಹ್ಮಣ್ಯ ಭಟ್ಟರು ತೆಂಕುತಿಟ್ಟು ಯಕ್ಷಗಾನದ ಪರಂಪರೆಯ ಪ್ರಾತಿನಿಧಿಕ ಕಲಾವಿದ. ಪ್ರಸಿದ್ಧ ಮಾಂಬಾಡಿ ಮನೆತನ. ಇವರ ತಂದೆ ಮಹಾನ್ ಗುರು ಮಾಂಬಾಡಿ ನಾರಾಯಣ ಭಾಗವತರು. ಸುಬ್ರಹ್ಮಣ್ಯ ಭಟ್ಟರು ಸಾವಿರಾರು ಹಿಮ್ಮೇಳ ಕಲಾವಿದರನ್ನು ರೂಪಿಸಿದವರು. ಕಳೆದ ಐದು ದಶಕಗಳಿಂದ ಯಕ್ಷ ಶಿಕ್ಷಣಕ್ಕೆ ಮಾನ ನೀಡಿದವರು. ವಿವಿಧ ಮೇಳಗಳಲ್ಲಿ ವ್ಯವಸಾಯ ಮಾಡಿದ ಅನುಭವಿ. ಈಗವರಿಗೆ ಪದ್ಯಾಣ ಪ್ರಶಸ್ತಿಯ ಬಾಗಿನ. ಈ ಸಂದರ್ಭದಲ್ಲಿ ‘ಶ್ರೀ ಹನುಮಗಿರಿ ಮೇಳ’ದವರಿಂದ ‘ಸತ್ಯಾಂತರಂಗ’ ಪ್ರಸಂಗದ ಬಯಲಾಟ ಜರುಗಲಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

2 days ago

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

2 days ago

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ

ರಂಬುಟಾನ್‌ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್‌ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…

2 days ago

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

2 days ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

2 days ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

2 days ago