Advertisement
ಕಲೆ-ಸಂಸ್ಕೃತಿ

‘ಪದ್ಯಾಣ ಪ್ರಶಸ್ತಿ’ಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ

Share

ಪುತ್ತೂರು: ತೆಂಕುತಿಟ್ಟು ಯಕ್ಷಗಾನದ ಹಿರಿಯ ಕಲಾವಿದ ಹಾಗೂ ಯಕ್ಷಶಿಕ್ಷಣ ಶಿಕ್ಷಕ ಮಾಂಬಾಡಿ ಸುಬ್ರಹ್ಮಣ್ಯ ಭಟ್ಟರಿಗೆ ಈ ಸಾಲಿನ ‘ಪದ್ಯಾಣ ಪ್ರಶಸ್ತಿ’ ಘೋಷಣೆಯಾಗಿದೆ. ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಡಿ. 15ರಂದು ಸಂಜೆ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದೆ ಎಂದು ‘ಪದ್ಯಾಣ ಪ್ರಶಸ್ತಿ’ ಸಮಿತಿ ಕಾರ್ಯದರ್ಶಿ ಸ್ವಸ್ತಿಕ್ ಪದ್ಯಾಣ ತಿಳಿಸಿದ್ದಾರೆ.

ಪದ್ಯಾಣ ಕುಟುಂಬದ ಹಿರಿಯರಾದ ಕೀರ್ತಿಶೇಷ ಪದ್ಯಾಣ ಪುಟ್ಟು ಭಾಗವತರ ನೆನಪಿನಲ್ಲಿ ಪದ್ಯಾಣ ಪ್ರಶಸ್ತಿ ರೂಪುಗೊಂಡಿದೆ. ಮೂರು ವರುಷಗಳ ಹಿಂದೆ ಸ್ಥಾಪಿಸಿದ ಪ್ರಶಸ್ತಿಯನ್ನು ಹಿರಿಯ ಭಾಗವತರಾದ ಅಗರಿ ರಘುರಾಮ ಭಾಗವತರು, ಬಲಿಪ ನಾರಾಯಣ ಭಾಗವತರು, ತೆಂಕಬೈಲು ತಿರುಮಲೇಶ್ವರ ಶಾಸ್ತ್ರಿ ಇವರಿಗೆ ಪ್ರದಾನಿಸಲಾಗಿತ್ತು.

ಪದ್ಯಾಣ ಮನೆತನಕ್ಕೆ ಯಕ್ಷ ಕಲೆಯು ನೀಡಿದ ಗೌರವಕ್ಕೆ ಪ್ರತಿಯಾಗಿ ‘ಕಲಾಕೃತಜ್ಞತೆ’ಯ ದ್ಯೋತಕವಾಗಿ ಪದ್ಯಾಣ ಪ್ರಶಸ್ತಿ ಸ್ಥಾಪಿತವಾಗಿದೆ. ಈ ವರುಷ ಮಾಂಬಾಡಿ ಸುಬ್ರಹ್ಮಣ್ಯ ಭಟ್ಟರಿಗೆ ಪ್ರಶಸ್ತಿ. ತೆಂಕುತಿಟ್ಟಿನ ಹಳೆಯ ಪಾರಂಪರಿಕ ಶೈಲಿಯೊಂದಕ್ಕೆ ಸಲ್ಲುವ ಗೌರವವಿದು.

ಸುಬ್ರಹ್ಮಣ್ಯ ಭಟ್ಟರು ತೆಂಕುತಿಟ್ಟು ಯಕ್ಷಗಾನದ ಪರಂಪರೆಯ ಪ್ರಾತಿನಿಧಿಕ ಕಲಾವಿದ. ಪ್ರಸಿದ್ಧ ಮಾಂಬಾಡಿ ಮನೆತನ. ಇವರ ತಂದೆ ಮಹಾನ್ ಗುರು ಮಾಂಬಾಡಿ ನಾರಾಯಣ ಭಾಗವತರು. ಸುಬ್ರಹ್ಮಣ್ಯ ಭಟ್ಟರು ಸಾವಿರಾರು ಹಿಮ್ಮೇಳ ಕಲಾವಿದರನ್ನು ರೂಪಿಸಿದವರು. ಕಳೆದ ಐದು ದಶಕಗಳಿಂದ ಯಕ್ಷ ಶಿಕ್ಷಣಕ್ಕೆ ಮಾನ ನೀಡಿದವರು. ವಿವಿಧ ಮೇಳಗಳಲ್ಲಿ ವ್ಯವಸಾಯ ಮಾಡಿದ ಅನುಭವಿ. ಈಗವರಿಗೆ ಪದ್ಯಾಣ ಪ್ರಶಸ್ತಿಯ ಬಾಗಿನ. ಈ ಸಂದರ್ಭದಲ್ಲಿ ‘ಶ್ರೀ ಹನುಮಗಿರಿ ಮೇಳ’ದವರಿಂದ ‘ಸತ್ಯಾಂತರಂಗ’ ಪ್ರಸಂಗದ ಬಯಲಾಟ ಜರುಗಲಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

5 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

13 hours ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

16 hours ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

21 hours ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

1 day ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

2 days ago