ಕಾರ್ಯಕ್ರಮಗಳು

ಪಯಸ್ವಿನಿ ಉತ್ಸವ : ಪೂರ್ವಭಾವಿ ಸಭೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ : ಇಲ್ಲಿನ ಜೀವನದಿ ಪಯಸ್ವಿನಿ ಕುರಿತು ಅರಿವು ಕಾಳಜಿ ಕುರಿತಂತೆ ಸಂವಾದ, ಕಾರ್ಯಯೋಜನೆ, ಚರ್ಚೆ, ಅನುಷ್ಠಾನದ ಬಗ್ಗೆ ಜ. 12ರಂದು ಸುಳ್ಯದ ಶ್ರೀ ಗುರು ರಾಘವೇಂದ್ರ ಮಠದ ಆವರಣದಲ್ಲಿ ಮದ್ಯಾಹ್ನ 2ರಿಂದ ಕಾರ್ಯಕ್ರಮ ನಡೆಯಲಿದ್ದು, ಈ ಕುರಿತು ಪೂರ್ವಭಾವಿ ಸಭೆ ಗುರುವಾರ ನಡೆಯಿತು.

Advertisement
Advertisement

ಉತ್ಸವ ಸಮಿತಿ ಅಧ್ಯಕ್ಷ ಸಿಎ| ಗಣೇಶ್ ಭಟ್ ಮಾತನಾಡಿ ಒಂದು ದಿನದ ಕಾರ್ಯಕ್ರಮದಲ್ಲಿ ನದಿಯ ಬಗ್ಗೆ ತಜ್ಞರಿಂದ ಮಾಹಿತಿ, ನದಿಯ ಸಮೃದ್ಧಿಗಾಗಿ ಒಂದು ವರ್ಷ ಕೈಗೊಳ್ಳಬಹುದಾದ ಕಾರ್ಯಯೋಜನೆ, ವಿಷಯ ಮಂಡನೆ, ಸಂವಾದ, ನದಿ ರಕ್ಷಣೆಗಾಗಿ ಪ್ರತಿಜ್ಞಾವಿಧಿ ಸ್ವೀಕಾರ ಕೊನೆಗೆ ನದಿ ಪೂಜೆ ನಡೆಸುವ ಕುರಿತಾದ ರೂಪುರೇಖೆಯನ್ನು ತಿಳಿಸಿದರು. ಶಾಲಾ ಮಕ್ಕಳಲ್ಲಿ ಅರಿವು ಮೂಡಿಸುವ ಬಗ್ಗೆ , ನದಿ ನೀರಿಗೆ ಚರಂಡಿ ನೀರು ಸೇರಿ ಕಲುಷಿತಗೊಳ್ಳುವ ಬಗ್ಗೆ, ಕುಡಿಯುವ ನೀರು ಕಲುಷಿತಗೊಂಡಿರುವ ಬಗ್ಗೆ ಮೊದಲಾದವುಗಳ ಬಗ್ಗೆ ಚರ್ಚೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಇನ್ನಷ್ಟು ಆಸಕ್ತ ಸೇವಾ ಸಂಘ ಸಂಸ್ಥೆಗಳನ್ನು ಸೇರಿಸಿಕೊಳ್ಳುವ ಬಗ್ಗೆ ನಿರ್ಧಾರ ಕೈಗೊಳ್ಳಲಾಯಿತು.

ಸಂಚಾಲಕ ಪ್ರಕಾಶ್ ಮೂಡಿತ್ತಾಯ ಮಾಹಿತಿ ನೀಡಿದರು. ಉಪಾಧ್ಯಕ್ಷ ಮಮತಾ ರವೀಶ್ ಪಡ್ಡಂಬೈಲು, ಖಜಾಂಜಿ ಕೇಶವ ಸಿ.ಎ., ನಿರ್ದೇಶಕ ಡಾ|ಪ್ರಭಾಕರ ಶಿಶಿಲ, ಡಾ|ರಂಗಯ್ಯ, ಶ್ರೀಕೃಷ್ಣ ಎಂ.ಎನ್., ನವೀನ್ ಸೋಮಯಾಗಿ, ಗಿರೀಶ್ ಕೇಕುಣ್ಣಾಯ, ಡಾ|ಚಂದ್ರಶೇಖರ ದಾಮ್ಲೆ, ಮಮತಾ ಮೂಡಿತ್ತಾಯ, ಜಯರಾಮ ಭಾರದ್ವಾಜ, ದೇವಿಪ್ರಸಾದ್ ಜಿ.ಸಿ., ರವಿಕುಮಾರ್, ಶಶಿಧರ್ ಎಂ.ಜೆ., ಪ್ರಭಾಕರ ನಾಯರ್, ನವೀನ್‍ಕುಮಾರ್ ಎಂ., ವೇ|ಮೂ ವೆಂಕಟೇಶ ಶಾಸ್ತ್ರಿ, ಪುಷ್ಪಾ ನಾಗರಾಜ, ಶಾಂತಾ ಪಿ.ಆರ್., ಗಂಗಾಧರ ಮಟ್ಟಿ, ಸುಧಾಶ್ರೀಧರ್, ಡಾ|ಹರ್ಷಿತಾ ಪುರುಷೋತ್ತಮ, ಲೋಕೇಶ ಗುಡ್ಡೆಮನೆ, ವಿನೋದ್ ಲಸ್ರಾದೊ, ಡಾ| ನಾಗರಾಜ ಆಚಾರ್ ಮೊದಲಾದವರು ಸಲಹೆ ಸೂಚನೆ ನೀಡಿದರು.
ಮುಂದಿನ ಸಭೆಯನ್ನು ಜ. 10ರಂದು ಸಂಜೆ 5.30ಕ್ಕೆ ಗುರು ರಾಘವೇಂದ್ರ ಮಠದಲ್ಲಿ ನಡೆಸಲು ನಿರ್ಧರಿಸಲಾಯಿತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 02-06-2025 | ಸಾಮಾನ್ಯ ಮಳೆ ಮುಂದುವರಿಕೆ | ಜೂನ್ ತಿಂಗಳಲ್ಲಿ ದುರ್ಬಲ ಮುಂಗಾರು ಸಾಧ್ಯತೆ |

ಮುಂಗಾರು ದುರ್ಬಲಗೊಂಡಿದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ಚಟುವಟಿಕೆಗಳು ಉಂಟಾದರೆ ಮಾತ್ರ ಮುಂಗಾರು ಸ್ವಲ್ಪ…

5 hours ago

ಕೊರೊನಾ ಬಗ್ಗೆ ಮುನ್ನೆಚ್ಚರಿಕೆಯ ಹೊರತು ಭಯಭೀತರಾಗುವ ಅವಶ್ಯಕತೆಯಿಲ್ಲ

ರಾಜ್ಯದಲ್ಲಿ  ಕೊರೋನ ವಿಚಾರದಲ್ಲಿ ಹೆಚ್ಚಿನ ಬದಲಾವಣೆ ಏನೂ ಇಲ್ಲ ಎಂದು  ಆರೋಗ್ಯ ಸಚಿವ…

8 hours ago

ಭೂಕುಸಿತ ಹಿನ್ನೆಲೆ | ಪಶ್ಚಿಮಘಟ್ಟ ಧಾರಣ ಸಾಮರ್ಥ್ಯದ ಅಧ್ಯಯನಕ್ಕೆ ಸಚಿವ  ಈಶ್ವರ್ ಖಂಡ್ರೆ ಸೂಚನೆ

ದಕ್ಷಿಣ ಕನ್ನಡ, ಕೊಡಗು ಮೊದಲಾದ ಭಾಗದಲ್ಲಿ ಮಳೆಗೆ ಭೂಕುಸಿತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಪಶ್ಚಿಮಘಟ್ಟದ…

12 hours ago

ರಾಜ್ಯದ ಹಲವೆಡೆ ಗುಡುಗು ಮಿಂಚು ಸಹಿತ ಮಳೆ ಸಾಧ್ಯತೆ | ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಹಲವೆಡೆ  ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ…

12 hours ago

ಸಿಂಹ ರಾಶಿಯನ್ನು ಪ್ರವೇಶಿಸಲಿರುವ ಮಂಗಳ | ಜೂನ್ 7 ರಿಂದ 3 ರಾಶಿಯವರಿಗೆ ಶುಭ ಫಲ

2025ರ ಜೂನ್ 7 ರಿಂದ ಮಂಗಳ ಗ್ರಹವು ಸಿಂಹ ರಾಶಿಗೆ ಪ್ರವೇಶ ಮಾಡಲಿರುವುದು…

12 hours ago

ಜೂನ್ 15 ರಂದು ಮಿಥುನ ರಾಶಿಗೆ ಸೂರ್ಯ | 12 ರಾಶಿಗಳ ಫಲಾಫಲ ಹೀಗಿದೆ….

ಹೆಚ್ಚಿನ ವಿವರಗಳನ್ನು ಪಡೆಯಲು ಜ್ಯೋತಿಷ್ಯರೊಂದಿಗೆ ಸಂಪರ್ಕಿಸಬಹುದು. 9535156490

2 days ago