Advertisement
ಸುದ್ದಿಗಳು

ಪಯಸ್ವಿನಿ ಉಳಿಸಲು ಮಕ್ಕಳಿಂದಲೂ ಅಳಿಲ ಪ್ರಯತ್ನ : ಚಿತ್ರದ ಮೂಲಕ ದಾಖಲೀಕರಣ ಮಾಡಿದ ಸ್ನೇಹ ಶಾಲೆಯ ವಿದ್ಯಾರ್ಥಿಗಳು

Share

ಸುಳ್ಯ: ಜೀವನದಿ ಪಯಸ್ವಿನಿ ಮಳೆಗಾಲ ತುಂಬಿ ಹರಿಯುತ್ತದೆ. ಬೇಸಗೆಯಾದಂತೆ ಈಚೆಗೆ ಬತ್ತಲು ಶುರುವಾಗಿದೆ. ಹಿಂದೆಲ್ಲಾ ಹೀಗೆ ಇರಲಿಲ್ಲ. ಸುಳ್ಯದ ಜನರಿಗೆ ಕುಡಿಯುವ ನೀರು ಲಭ್ಯವಾಗುತ್ತಿತ್ತು, ಕೃಷಿಗೂ ಸಾಕಷ್ಟು ನೀರು ಪಯಸ್ವಿನಿ ನೀಡುತ್ತಿತ್ತು. ಹೀಗಾಗಿ ಈಗ ಪಯಸ್ವಿನಿ ಉಳಿಸಿ ಆಂದೋಲನ ಶುರುವಾಗಿದೆ. ಈ ಆಂದೋಲನದಲ್ಲಿ ಈಗ ಮಕ್ಕಳೂ ತೊಡಗಿಕೊಂಡಿದ್ದಾರೆ. ಸುಳ್ಯದ ಸ್ನೇಹ ಶಾಲೆ ವಿದ್ಯಾರ್ಥಿಗಳು ನದಿಯ ತಟದಲ್ಲಿ ಕುಳಿತು ಹಾಗೂ ಆಲೆಟ್ಟಿ ಸೇತುವೆಯ ಮೇಲೆ ನಿಂತು ಸ್ಥಳದಲ್ಲೇ ಚಿತ್ರಗಳನ್ನು ಬಿಡಿಸಿದರು. ಈ ಮೂಲಕ ನದಿಯ ಈಗಿನ ಸ್ಥಿತಿಯ ದಾಖಲೀಕರಣ ಮಾಡಿದರು.

ಸುಳ್ಯದ ಪಯಸ್ವಿನಿ ನದಿಯಲ್ಲಿ ನೀರಿನ ಹರಿವಿನ ಪ್ರಮಾಣ ಇಳಿಯುತ್ತಿದೆ. ಮಳೆಗಾಲದಲ್ಲಿ ತುಂಬಿ ಹರಿಯುವ ನದಿಯ ಪಾತಳಿಯಲ್ಲಿ ವಿಸ್ತಾರವಾದ ದಿಬ್ಬಗಳು ಗೋಚರಿಸತೊಡಗಿವೆ. ನದಿ ನೀರು ಬತ್ತದಂತೆ ಮಾಡಲು ಸಾರ್ವಜನಿಕರ ಸಹಭಾಗಿತ್ವದಲ್ಲಿ ಏನಾದರೊಂದು ಸುಧಾರಣೆ ಮಾಡಬೇಕಾಗಿದೆ. ಅದಕ್ಕಾಗಿ ಚಿತ್ರಗಳ ಮೂಲಕ ಎಚ್ಚರ ಮೂಡಿಸುವ ಪ್ರಯತ್ನವಾಗಿ ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ನದಿಯ ತಟದಲ್ಲಿ ಕುಳಿತು ಹಾಗೂ ಆಲೆಟ್ಟಿ ಸೇತುವೆಯ ಮೇಲೆ ನಿಂತು ಸ್ಥಳದಲ್ಲೇ ಚಿತ್ರಗಳನ್ನು ಬಿಡಿಸಿದರು. ಪರಿಸರ, ಜಲಸಂರಕ್ಷಣೆಯಲ್ಲಿ  ತೊಡಗಿಕೊಂಡಿರುವ, ಜಾಗೃತಿ ಮೂಡಿಸುತ್ತಿರುವ ಸುಳ್ಯದ ಕನ್ನಡ ಮಾಧ್ಯಮ ಶಾಲೆ ಈಗ ಇನ್ನೊಂದು ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿದೆ. ಜಲಸಂರಕ್ಷಣೆಯ ಕಡೆಗೆ ಮಕ್ಕಳಲ್ಲಿ  ಆಸಕ್ತಿ ಮೂಡಿಸುತ್ತಿದೆ.

ಸಂಸ್ಥೆಯ ಅಧ್ಯಕ್ಷ ಡಾ. ಚಂದ್ರಶೇಖರ ದಾಮ್ಲೆಯವರ ಮಾರ್ಗದರ್ಶನದಲ್ಲಿ ಮುಖ್ಯೋಪಾಧ್ಯಾಯಿನಿ  ಜಯಲಕ್ಷ್ಮಿ ದಾಮ್ಲೆ, ಅಧ್ಯಾಪಕರಾದ  ಸವಿತಾ , ದೇವಿಪ್ರಸಾದ್ ಸರ್ ಹಾಗೂ ದಿವ್ಯಶ್ರೀ  ಸಹಕರಿಸಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ

ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…

3 hours ago

ಹವಾಮಾನ ವರದಿ | 04-09-2026 | ಮುಂಗಾರು ದುರ್ಬಲ… ಆದರೂ ಕರ್ನಾಟಕದಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆ!

ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…

3 hours ago

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ

2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…

11 hours ago

ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ

ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…

11 hours ago

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

1 day ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

1 day ago