Advertisement
ಸುದ್ದಿಗಳು

ಪಯಸ್ವಿನಿ ಉಳಿಸಲು ಮಕ್ಕಳಿಂದಲೂ ಅಳಿಲ ಪ್ರಯತ್ನ : ಚಿತ್ರದ ಮೂಲಕ ದಾಖಲೀಕರಣ ಮಾಡಿದ ಸ್ನೇಹ ಶಾಲೆಯ ವಿದ್ಯಾರ್ಥಿಗಳು

Share

ಸುಳ್ಯ: ಜೀವನದಿ ಪಯಸ್ವಿನಿ ಮಳೆಗಾಲ ತುಂಬಿ ಹರಿಯುತ್ತದೆ. ಬೇಸಗೆಯಾದಂತೆ ಈಚೆಗೆ ಬತ್ತಲು ಶುರುವಾಗಿದೆ. ಹಿಂದೆಲ್ಲಾ ಹೀಗೆ ಇರಲಿಲ್ಲ. ಸುಳ್ಯದ ಜನರಿಗೆ ಕುಡಿಯುವ ನೀರು ಲಭ್ಯವಾಗುತ್ತಿತ್ತು, ಕೃಷಿಗೂ ಸಾಕಷ್ಟು ನೀರು ಪಯಸ್ವಿನಿ ನೀಡುತ್ತಿತ್ತು. ಹೀಗಾಗಿ ಈಗ ಪಯಸ್ವಿನಿ ಉಳಿಸಿ ಆಂದೋಲನ ಶುರುವಾಗಿದೆ. ಈ ಆಂದೋಲನದಲ್ಲಿ ಈಗ ಮಕ್ಕಳೂ ತೊಡಗಿಕೊಂಡಿದ್ದಾರೆ. ಸುಳ್ಯದ ಸ್ನೇಹ ಶಾಲೆ ವಿದ್ಯಾರ್ಥಿಗಳು ನದಿಯ ತಟದಲ್ಲಿ ಕುಳಿತು ಹಾಗೂ ಆಲೆಟ್ಟಿ ಸೇತುವೆಯ ಮೇಲೆ ನಿಂತು ಸ್ಥಳದಲ್ಲೇ ಚಿತ್ರಗಳನ್ನು ಬಿಡಿಸಿದರು. ಈ ಮೂಲಕ ನದಿಯ ಈಗಿನ ಸ್ಥಿತಿಯ ದಾಖಲೀಕರಣ ಮಾಡಿದರು.

ಸುಳ್ಯದ ಪಯಸ್ವಿನಿ ನದಿಯಲ್ಲಿ ನೀರಿನ ಹರಿವಿನ ಪ್ರಮಾಣ ಇಳಿಯುತ್ತಿದೆ. ಮಳೆಗಾಲದಲ್ಲಿ ತುಂಬಿ ಹರಿಯುವ ನದಿಯ ಪಾತಳಿಯಲ್ಲಿ ವಿಸ್ತಾರವಾದ ದಿಬ್ಬಗಳು ಗೋಚರಿಸತೊಡಗಿವೆ. ನದಿ ನೀರು ಬತ್ತದಂತೆ ಮಾಡಲು ಸಾರ್ವಜನಿಕರ ಸಹಭಾಗಿತ್ವದಲ್ಲಿ ಏನಾದರೊಂದು ಸುಧಾರಣೆ ಮಾಡಬೇಕಾಗಿದೆ. ಅದಕ್ಕಾಗಿ ಚಿತ್ರಗಳ ಮೂಲಕ ಎಚ್ಚರ ಮೂಡಿಸುವ ಪ್ರಯತ್ನವಾಗಿ ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ನದಿಯ ತಟದಲ್ಲಿ ಕುಳಿತು ಹಾಗೂ ಆಲೆಟ್ಟಿ ಸೇತುವೆಯ ಮೇಲೆ ನಿಂತು ಸ್ಥಳದಲ್ಲೇ ಚಿತ್ರಗಳನ್ನು ಬಿಡಿಸಿದರು. ಪರಿಸರ, ಜಲಸಂರಕ್ಷಣೆಯಲ್ಲಿ  ತೊಡಗಿಕೊಂಡಿರುವ, ಜಾಗೃತಿ ಮೂಡಿಸುತ್ತಿರುವ ಸುಳ್ಯದ ಕನ್ನಡ ಮಾಧ್ಯಮ ಶಾಲೆ ಈಗ ಇನ್ನೊಂದು ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿದೆ. ಜಲಸಂರಕ್ಷಣೆಯ ಕಡೆಗೆ ಮಕ್ಕಳಲ್ಲಿ  ಆಸಕ್ತಿ ಮೂಡಿಸುತ್ತಿದೆ.

ಸಂಸ್ಥೆಯ ಅಧ್ಯಕ್ಷ ಡಾ. ಚಂದ್ರಶೇಖರ ದಾಮ್ಲೆಯವರ ಮಾರ್ಗದರ್ಶನದಲ್ಲಿ ಮುಖ್ಯೋಪಾಧ್ಯಾಯಿನಿ  ಜಯಲಕ್ಷ್ಮಿ ದಾಮ್ಲೆ, ಅಧ್ಯಾಪಕರಾದ  ಸವಿತಾ , ದೇವಿಪ್ರಸಾದ್ ಸರ್ ಹಾಗೂ ದಿವ್ಯಶ್ರೀ  ಸಹಕರಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

17 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

1 day ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

1 day ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

1 day ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

1 day ago