(ಕಾಂಚಿ ಶ್ರೀಗಳು ಸುಳ್ಯಕ್ಕೆ ಬಂದ ಸಂದರ್ಭ )
ಸುಳ್ಯದ ಅರಂಬೂರಿನಲ್ಲಿ ನಿರಂತರವಾಗಿ ವೇದ ಘೋಷ ಮೊಳಗುತ್ತಿದೆ. ಒಂದು ಕಡೆ ಪಯಸ್ವಿನಿ ನದಿ ಹರಿಯಲು ಜುಳು ಜುಳು ಸದ್ದು ಕೇಳಿದರೆ ಈ ಕಡೆ ವೇದ ಘೋಷ ಕೇಳುತ್ತದೆ. ಇಂತಹದ್ದೊಂದು ವೇದ ಶಿಕ್ಷಣ ನೀಡುವ ಸಂಸ್ಥೆಯ ಸುತ್ತ ಇಂದಿನ ಫೋಕಸ್…
ಸುಳ್ಯ: ಭಾರತದ ಭವ್ಯ ಸಂಸ್ಕೃತಿಯ ಹಿರಿಮೆಯನ್ನು ಪ್ರಪಂಚಕ್ಕೆ ಸಾರಿದ ವೇದಗಳು ಹಾಗೂ ಸಂಸ್ಕೃತ ಭಾಷೆ ಅಧ್ಯಯನ ನಡೆಸುವವರ ಸಂಖ್ಯೆ ದಿನೇ ದಿನೇ ಕ್ಷೀಣವಾಗುತ್ತಿದೆ. ಇಂತಹ ಸಂದರ್ಭ ಅರಂಬೂರು ಭಾರದ್ವಾಜ ಆಶ್ರಮ ನಡೆಸುವ ವೇದ ಶಿಬಿರ ಗಮನಸೆಳೆದಿದೆ. ನೂರಾರು ವಿದ್ಯಾರ್ಥಿಗಳು ವೇದ ಸಂರಕ್ಷಣೆಯಲ್ಲಿ ತೊಡಗಿದ್ದಾರೆ. ಹೀಗಾಗಿ ಈಗ ಗಮನಸೆಳೆದಿದೆ.
ಸುಳ್ಯ ಅರಂಬೂರು ಭಾರದ್ವಾಜ ಆಶ್ರಮದ ಸುಂದರ ಪರಿಸರ , ಪಯಸ್ವಿನಿ ನದಿಯ ಮಂಜುಳ ನಿನಾದದಲ್ಲಿ ಈಗ ವೇದದ ಮಂಗಲಘೋಷ ಮೊಳಗುತ್ತಿದೆ. ಕಾಂಚಿ ಮಠದ ಜಗದ್ಗುರು ಜಯೇಂದ್ರ ಸರಸ್ವತಿ ಮಹಾಸ್ವಾಮಿಗಳ ದಿವ್ಯ ಸಂಕಲ್ಪವಾದ ವೇದ ಸಂರಕ್ಷಣೆಯ ಸಾಕಾರಕ್ಕೆ ಸುಳ್ಯ ಅರಂಬೂರು ಭಾರದ್ವಾಜ ಆಶ್ರಮ ಪ್ರಯತ್ನ ಮಾಡುತ್ತಿದೆ. ನೀರ್ಚಾಲು ಗಣೇಶ ಕೃಷ್ಣ ಭಟ್ ಹಾಗೂ ರವಿಶಂಕರ್ ಭಾರದ್ವಾಜ ರ ನಿರಂತರ ಪ್ರಯತ್ನ ದ ಫಲವಾಗಿ 2001 ರಲ್ಲಿ ಶ್ರೀ ಕಾಂಚಿಕಾಮಕೋಟಿ ವೇದವಿದ್ಯಾಲಯದ ಸ್ಥಾಪನೆಯಾಗಿದೆ.
ಋಗ್ವೇದ, ಯಜುರ್ವೇದ, ಸಂಸ್ಕೃತ ಅಧ್ಯಯನ ಕ್ಕೆ ಅವಕಾಶ. ಈವರೆಗೆ ಇಲ್ಲಿ ಕಲಿತ 150 ಮಂದಿ ವಿದ್ಯಾರ್ಥಿಗಳು ಯೋಗ್ಯ ಪುರೋಹಿತರಾಗಿ, ದೇವಾಲಯದ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಕರ್ನಾಟಕ, ಕೇರಳ, ತಮಿಳುನಾಡು, ದೂರದ ಜಾರ್ಖಂಡ್ ನಿಂದ ವಿದ್ಯಾರ್ಥಿಗಳು ಆಗಮಿಸುತ್ತಾರೆ.ಕರ್ನಾಟಕ ಸಂಸ್ಕೃತ ವಿಶ್ವ ವಿದ್ಯಾಲಯದ ವೇದ ಪರೀಕ್ಷೆಯಲ್ಲಿ ಭಾಗವಹಿಸಿ ಸರ್ಟಿಫಿಕೇಟ್ ಪಡೆಯುವ ವ್ಯವಸ್ಥೆ ಇದೆ.
ತಿಂಗಳಲ್ಲಿ ಎರಡು ಬಾರಿ ಚತುರ್ಥಿಯಂದು ಮಹಾಗಣಪತಿ ಹವನ,ಹುಣ್ಣಿಮೆಗೆ ಸಪ್ತಶತಿ ಪಾರಾಯಣ,ದುರ್ಗಾಪೂಜೆ,ಸೋಮವಾರ ಚೆನ್ನಕೇಶವ ದೇವಾಲಯ ದಲ್ಲಿ ವೇದಪಾರಾಯಣ, ಅರಂಬೂರು ಧರ್ಮಾರಣ್ಯದಲ್ಲಿ ಪಾರಾಯಣ, ಪರಿಸರದ ದೇವಾಲಯಗಳಾದ ಸುಳ್ಯ, ಆಲೆಟ್ಡಿ,ಕಾಯರ್ತೋಡಿ,ತೊಡಿಕಾನ ದೇವಾಲಯದ ಉತ್ಸವ ಸಂದರ್ಭದಲ್ಲಿ ವೇದಪಾರಾಯಣ ವೇದಸುತ್ತು ಸೇವೆ ನಡೆಸುತ್ತಾರೆ.
ರವಿಶಂಕರ್ ಭಾರದ್ವಾಜ್, ವೆಂಕಟೇಶ ಶಾಸ್ತ್ರಿ, ಶ್ರೀರಾಮ ಭಾರದ್ವಾಜರು ವಿದ್ಯಾಲಯದ ಆರಂಭದಿಂದಲೂ ಅಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ವೇದ ಹಾಗೂ ಸಂಸ್ಕೃತ ವಿದ್ಯಾಭ್ಯಾಸ ಕ್ಕೆ ಪ್ರೋತ್ಸಾಹ ನೀಡಿ ಅಳಿವಿನ ಅಂಚಿನಲ್ಲಿರುವ ವೇದವಿದ್ಯೆಯ ಬಗ್ಗೆ ಸಮಾಜದಲ್ಲಿ ಜಾಗೃತಿ ಮೂಡಿಸಿ ವಿದ್ಯಾರ್ಥಿಗಳ ಕೊರತೆ ಕಾಣುತ್ತಿರುವ ಅನೇಕ ವೇದಪಾಠಶಾಲೆಗಳ ಪುನರುತ್ಥಾನದ ದೊಡ್ಡ ಹೊಣೆ ನಮ್ಮ ಮೇಲಿದೆ.ವೇದವೆಂಬ ಬೆಳಕು ಸದಾ ಸಮಾಜವನ್ನು ಬೆಳಗಿಸಲು ಎಲೆಮರೆಯ ಕಾಯಿಗಳಂತೆ ಭಾರತದ ಅನರ್ಘ್ಯ ವಾದ ವೇದಸಂಪತ್ತನ್ನು ಸಂರಕ್ಷಣೆ ಮಾಡುತ್ತಿರುವ ಇಂತಹ ಪಾಠಶಾಲೆ ಗಳಿಗೆ ಪ್ರೋತ್ಸಾಹ ನೀಡುವ ಕಾರ್ಯ ಆಗಬೇಕಿದೆ.
ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ : 9449487690
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…