Advertisement
MIRROR FOCUS

ಪಯಸ್ವಿನಿ ನದಿಯ ಮಂಜುಳ ನಿನಾದದಲ್ಲಿ ಮೊಳಗುತ್ತಿದೆ ವೇದದ ಮಂಗಲ ಘೋಷ….!

Share

ಸುಳ್ಯದ ಅರಂಬೂರಿನಲ್ಲಿ ನಿರಂತರವಾಗಿ ವೇದ ಘೋಷ ಮೊಳಗುತ್ತಿದೆ. ಒಂದು ಕಡೆ ಪಯಸ್ವಿನಿ ನದಿ ಹರಿಯಲು ಜುಳು ಜುಳು ಸದ್ದು ಕೇಳಿದರೆ ಈ ಕಡೆ ವೇದ ಘೋಷ ಕೇಳುತ್ತದೆ. ಇಂತಹದ್ದೊಂದು ವೇದ ಶಿಕ್ಷಣ ನೀಡುವ ಸಂಸ್ಥೆಯ ಸುತ್ತ ಇಂದಿನ ಫೋಕಸ್…


 

ಸುಳ್ಯ: ಭಾರತದ ಭವ್ಯ ಸಂಸ್ಕೃತಿಯ ಹಿರಿಮೆಯನ್ನು ಪ್ರಪಂಚಕ್ಕೆ ಸಾರಿದ ವೇದಗಳು ಹಾಗೂ ಸಂಸ್ಕೃತ ಭಾಷೆ ಅಧ್ಯಯನ ನಡೆಸುವವರ ಸಂಖ್ಯೆ ದಿನೇ ದಿನೇ ಕ್ಷೀಣವಾಗುತ್ತಿದೆ. ಇಂತಹ ಸಂದರ್ಭ ಅರಂಬೂರು ಭಾರದ್ವಾಜ ಆಶ್ರಮ ನಡೆಸುವ ವೇದ ಶಿಬಿರ ಗಮನಸೆಳೆದಿದೆ. ನೂರಾರು ವಿದ್ಯಾರ್ಥಿಗಳು ವೇದ ಸಂರಕ್ಷಣೆಯಲ್ಲಿ ತೊಡಗಿದ್ದಾರೆ. ಹೀಗಾಗಿ ಈಗ ಗಮನಸೆಳೆದಿದೆ.

ಸುಳ್ಯ ಅರಂಬೂರು ಭಾರದ್ವಾಜ ಆಶ್ರಮದ ಸುಂದರ ಪರಿಸರ , ಪಯಸ್ವಿನಿ ನದಿಯ ಮಂಜುಳ ನಿನಾದದಲ್ಲಿ ಈಗ ವೇದದ ಮಂಗಲಘೋಷ ಮೊಳಗುತ್ತಿದೆ. ಕಾಂಚಿ ಮಠದ ಜಗದ್ಗುರು ಜಯೇಂದ್ರ ಸರಸ್ವತಿ ಮಹಾಸ್ವಾಮಿಗಳ  ದಿವ್ಯ ಸಂಕಲ್ಪವಾದ ವೇದ ಸಂರಕ್ಷಣೆಯ ಸಾಕಾರಕ್ಕೆ ಸುಳ್ಯ ಅರಂಬೂರು ಭಾರದ್ವಾಜ ಆಶ್ರಮ ಪ್ರಯತ್ನ ಮಾಡುತ್ತಿದೆ. ನೀರ್ಚಾಲು ಗಣೇಶ ಕೃಷ್ಣ ಭಟ್ ಹಾಗೂ ರವಿಶಂಕರ್ ಭಾರದ್ವಾಜ ರ ನಿರಂತರ ಪ್ರಯತ್ನ ದ ಫಲವಾಗಿ  2001 ರಲ್ಲಿ  ಶ್ರೀ ಕಾಂಚಿಕಾಮಕೋಟಿ ವೇದವಿದ್ಯಾಲಯದ ಸ್ಥಾಪನೆಯಾಗಿದೆ.

ಋಗ್ವೇದ, ಯಜುರ್ವೇದ, ಸಂಸ್ಕೃತ ಅಧ್ಯಯನ ಕ್ಕೆ ಅವಕಾಶ. ಈವರೆಗೆ ಇಲ್ಲಿ ಕಲಿತ 150 ಮಂದಿ ವಿದ್ಯಾರ್ಥಿಗಳು ಯೋಗ್ಯ ಪುರೋಹಿತರಾಗಿ, ದೇವಾಲಯದ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

 

ಕರ್ನಾಟಕ, ಕೇರಳ, ತಮಿಳುನಾಡು, ದೂರದ ಜಾರ್ಖಂಡ್ ನಿಂದ ವಿದ್ಯಾರ್ಥಿಗಳು ಆಗಮಿಸುತ್ತಾರೆ.ಕರ್ನಾಟಕ ಸಂಸ್ಕೃತ ವಿಶ್ವ ವಿದ್ಯಾಲಯದ ವೇದ ಪರೀಕ್ಷೆಯಲ್ಲಿ ಭಾಗವಹಿಸಿ ಸರ್ಟಿಫಿಕೇಟ್ ಪಡೆಯುವ ವ್ಯವಸ್ಥೆ ಇದೆ.

ತಿಂಗಳಲ್ಲಿ ಎರಡು ಬಾರಿ ಚತುರ್ಥಿಯಂದು ಮಹಾಗಣಪತಿ ಹವನ,ಹುಣ್ಣಿಮೆಗೆ ಸಪ್ತಶತಿ ಪಾರಾಯಣ,ದುರ್ಗಾಪೂಜೆ,ಸೋಮವಾರ ಚೆನ್ನಕೇಶವ ದೇವಾಲಯ ದಲ್ಲಿ ವೇದಪಾರಾಯಣ, ಅರಂಬೂರು ಧರ್ಮಾರಣ್ಯದಲ್ಲಿ ಪಾರಾಯಣ, ಪರಿಸರದ ದೇವಾಲಯಗಳಾದ ಸುಳ್ಯ, ಆಲೆಟ್ಡಿ,ಕಾಯರ್ತೋಡಿ,ತೊಡಿಕಾನ ದೇವಾಲಯದ ಉತ್ಸವ ಸಂದರ್ಭದಲ್ಲಿ ವೇದಪಾರಾಯಣ ವೇದಸುತ್ತು ಸೇವೆ ನಡೆಸುತ್ತಾರೆ.
ರವಿಶಂಕರ್ ಭಾರದ್ವಾಜ್, ವೆಂಕಟೇಶ ಶಾಸ್ತ್ರಿ, ಶ್ರೀರಾಮ ಭಾರದ್ವಾಜರು ವಿದ್ಯಾಲಯದ ಆರಂಭದಿಂದಲೂ ಅಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

 

 

ವೇದ ಹಾಗೂ ಸಂಸ್ಕೃತ ವಿದ್ಯಾಭ್ಯಾಸ ಕ್ಕೆ ಪ್ರೋತ್ಸಾಹ ನೀಡಿ ಅಳಿವಿನ ಅಂಚಿನಲ್ಲಿರುವ ವೇದವಿದ್ಯೆಯ ಬಗ್ಗೆ ಸಮಾಜದಲ್ಲಿ ಜಾಗೃತಿ ಮೂಡಿಸಿ ವಿದ್ಯಾರ್ಥಿಗಳ ಕೊರತೆ ಕಾಣುತ್ತಿರುವ ಅನೇಕ ವೇದಪಾಠಶಾಲೆಗಳ ಪುನರುತ್ಥಾನದ ದೊಡ್ಡ ಹೊಣೆ ನಮ್ಮ ಮೇಲಿದೆ.ವೇದವೆಂಬ ಬೆಳಕು ಸದಾ ಸಮಾಜವನ್ನು ಬೆಳಗಿಸಲು ಎಲೆಮರೆಯ ಕಾಯಿಗಳಂತೆ ಭಾರತದ ಅನರ್ಘ್ಯ ವಾದ ವೇದಸಂಪತ್ತನ್ನು ಸಂರಕ್ಷಣೆ ಮಾಡುತ್ತಿರುವ ಇಂತಹ ಪಾಠಶಾಲೆ ಗಳಿಗೆ ಪ್ರೋತ್ಸಾಹ ನೀಡುವ ಕಾರ್ಯ ಆಗಬೇಕಿದೆ.

ಹೆಚ್ಚಿನ ಮಾಹಿತಿಗೆ  ಸಂಪರ್ಕಿಸಿ :  9449487690

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 29-07-2026 | ಆ.2 ರಿಂದ ಮಳೆಯ ಸ್ಥಿತಿ ಏನಾಗಬಹುದು..?

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…

5 hours ago

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!

ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…

12 hours ago

ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…

13 hours ago

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

20 hours ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

21 hours ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

1 day ago