Advertisement
ಸುದ್ದಿಗಳು

ಪರಿಶಿಷ್ಟ ಪಂಗಡದ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

Share

ಮಂಗಳೂರು : 2018-19ನೇ ಸಾಲಿನಲ್ಲಿ  ವಿಶೇಷ ಕೇಂದ್ರೀಯ ನೆರವಿನಡಿ ಪರಿಶಿಷ್ಟ ಪಂಗಡವರ ಅಭಿವೃದ್ಧಿ ಕಾರ್ಯಕ್ರಮಗಳಡಿ ಫಲಾನುಭವಿ ಆಧಾರಿತ ಕಾರ್ಯಕ್ರಮಗಳಾದ ಹೈನುಗಾರಿಕೆ, ಹಸು/ಎಮ್ಮೆ ಕರು ಘಟಕ, ಕುರಿ/ಮೇಕೆ ಘಟಕ, ಸರಕು ಸಾಗಾಣಿಕೆ ವಾಹನ, ಹಂದಿ ಸಾಕಾಣಿಕೆ ಸೌಲಭ್ಯ ಪಡೆಯಲು ಷರತ್ತಿಗೊಳಪಟ್ಟು ಆಸಕ್ತ ಅರ್ಜಿದಾರರಿಂದ ನಿಗದಿತ ನಮೂನೆಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

Advertisement
Advertisement

ಆದ್ದರಿಂದ ಮೂಲನಿವಾಸಿ ಮತ್ತು ಅರಣ್ಯ ಅವಲಂಭಿತ ಪರಿಶಿಷ್ಟ ವರ್ಗದವರು ನಿಗಧಿತ ನಮೂನೆಯ ಅರ್ಜಿಯನ್ನು ಸಹಾಯಕ ನಿರ್ದೇಶಕರು, (ಗ್ರೇಡ್-1) ಸಮಾಜ ಕಲ್ಯಾಣ ಇಲಾಖೆ, ರಸಿಕ್ ಚೇಂಬರ್ಸ್, 3ನೇ ಮಹಡಿ, ಮಾರ್ಕೆಟ್ ರೋಡ್, ಮಂಗಳೂರು ಈ ಕಚೇರಿಯಿಂದ ಪಡೆದು, ಅರ್ಜಿಯನ್ನು ಭರ್ತಿ ಮಾಡಿ ಸೂಕ್ತ ದಾಖಲಾತಿಗೊಂದಿಗೆ ಸೆಪ್ಟಂಬರ್ 16ರೊಳಗಾಗಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ಷರತ್ತುಗಳು ಇಂತಿವೆ:ಅರ್ಜಿದಾರರು ಕರ್ನಾಟಕದವರಾಗಿದ್ದು, ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು, ಹೈನುಗಾರಿಕೆ, ಹಸು/ಎಮ್ಮೆ ಕರು ಘಟಕ, ಕುರಿ/ಮೇಕೆ ಘಟಕ, ಹಂದಿ ಸಾಕಾಣಿಕೆ ಸೌಲಭ್ಯ ಪಡೆಯುವ ಅರ್ಜಿದಾರರು ವಯಸ್ಸು 18 ರಿಂದ 60 ವರ್ಷದೊಳಗಿರಬೇಕು, ಅರ್ಜಿದಾರರ ವಾರ್ಷಿಕ ಆದಾಯ ರೂ.1.50 ಲಕ್ಷಗಳ ಒಳಗಡೆ ಇರಬೇಕು, ಅರ್ಜಿದಾರರು ಹಾಗೂ ಅವರ ಅವಲಂಬಿತ ಕುಟುಂಬ ಸದಸ್ಯರು ಸರ್ಕಾರಿ ನೌಕರಿಯಲ್ಲಿರಬಾರದು, ಅರ್ಜಿದಾರರು ಹಾಗೂ ಅವರ ಅವಲಂಬಿತ ಕುಟುಂಬ ಸದಸ್ಯರು ಯಾವುದೇ ಯೋಜನೆಯಡಿ ಈ ಹಿಂದೆ ಯಾವುದೇ ಇಲಾಖೆ/ನಿಗಮದಿಂದ ಸೌಲಭ್ಯವನ್ನು ಪಡೆದಿರಬಾರದು, ಪಡೆದ ಘಟಕ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳುವ ಬಗ್ಗೆ ಪ್ರಮಾಣ ಪತ್ರ ನೀಡಬೇಕು, ಅರ್ಜಿದಾರರು ಬಿಪಿಎಲ್ ಮತ್ತು ಆಧಾರ್ ಕಾರ್ಡ್ ಹೊಂದಿರಬೇಕು, ಹೈನುಗಾರಿಕೆ ಮತ್ತು ಕುರಿ, ಮೇಕೆ ಘಟಕಗಳನ್ನು ಮಹಿಳೆಯವರಿಗೆ ಮಾತ್ರ ನೀಡಲಾಗುವುದು, ಸರಕು ಸಾಗಾಣಿಕೆ ವಾಹನ ಪಡೆಯುವ ಅರ್ಜಿದಾರರ ವಯಸ್ಸು 18 ರಿಂದ 45 ವರ್ಷದೊಳಗಿರಬೇಕು, ಸರಕು ಸಾಗಾಣಿಕೆ ವಾಹನ ಪಡೆಯುವ ಅರ್ಜಿದಾರರು ಡ್ರೈವಿಂಗ್ ಲೈಸೆನ್ಸ್(ಲಘು/ಭಾರಿ)ಹೊಂದಿರಬೇಕು, ಸರಕು ಸಾಗಾಣಿಕೆ ವಾಹನ ಪಡೆಯುವ ಅರ್ಜಿದಾರರ ವಾರ್ಷಿಕ ಆದಾಯ ಗ್ರಾಮೀಣ ಪ್ರದೇಶವಾದಲ್ಲಿ ರೂ.1.50ಲಕ್ಷ ಹಾಗೂ ನಗರ ಪ್ರದೇಶವಾದಲ್ಲಿ ರೂ.2 ಲಕ್ಷ ಮಿತಿಯೊಳಗಿರಬೇಕು ಎಂದು ಸಹಾಯಕ ನಿರ್ದೇಶಕರು (ಗ್ರೇಡ್ 1) ಸಮಾಜ ಕಲ್ಯಾಣ ಇಲಾಖೆ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…

13 hours ago

ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ

ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…

13 hours ago

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

1 day ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

3 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

3 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

3 days ago