Advertisement
ಸುದ್ದಿಗಳು

ಪರಿಶಿಷ್ಟ ಪಂಗಡದ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

Share

ಮಂಗಳೂರು : 2018-19ನೇ ಸಾಲಿನಲ್ಲಿ  ವಿಶೇಷ ಕೇಂದ್ರೀಯ ನೆರವಿನಡಿ ಪರಿಶಿಷ್ಟ ಪಂಗಡವರ ಅಭಿವೃದ್ಧಿ ಕಾರ್ಯಕ್ರಮಗಳಡಿ ಫಲಾನುಭವಿ ಆಧಾರಿತ ಕಾರ್ಯಕ್ರಮಗಳಾದ ಹೈನುಗಾರಿಕೆ, ಹಸು/ಎಮ್ಮೆ ಕರು ಘಟಕ, ಕುರಿ/ಮೇಕೆ ಘಟಕ, ಸರಕು ಸಾಗಾಣಿಕೆ ವಾಹನ, ಹಂದಿ ಸಾಕಾಣಿಕೆ ಸೌಲಭ್ಯ ಪಡೆಯಲು ಷರತ್ತಿಗೊಳಪಟ್ಟು ಆಸಕ್ತ ಅರ್ಜಿದಾರರಿಂದ ನಿಗದಿತ ನಮೂನೆಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ಆದ್ದರಿಂದ ಮೂಲನಿವಾಸಿ ಮತ್ತು ಅರಣ್ಯ ಅವಲಂಭಿತ ಪರಿಶಿಷ್ಟ ವರ್ಗದವರು ನಿಗಧಿತ ನಮೂನೆಯ ಅರ್ಜಿಯನ್ನು ಸಹಾಯಕ ನಿರ್ದೇಶಕರು, (ಗ್ರೇಡ್-1) ಸಮಾಜ ಕಲ್ಯಾಣ ಇಲಾಖೆ, ರಸಿಕ್ ಚೇಂಬರ್ಸ್, 3ನೇ ಮಹಡಿ, ಮಾರ್ಕೆಟ್ ರೋಡ್, ಮಂಗಳೂರು ಈ ಕಚೇರಿಯಿಂದ ಪಡೆದು, ಅರ್ಜಿಯನ್ನು ಭರ್ತಿ ಮಾಡಿ ಸೂಕ್ತ ದಾಖಲಾತಿಗೊಂದಿಗೆ ಸೆಪ್ಟಂಬರ್ 16ರೊಳಗಾಗಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ಷರತ್ತುಗಳು ಇಂತಿವೆ:ಅರ್ಜಿದಾರರು ಕರ್ನಾಟಕದವರಾಗಿದ್ದು, ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು, ಹೈನುಗಾರಿಕೆ, ಹಸು/ಎಮ್ಮೆ ಕರು ಘಟಕ, ಕುರಿ/ಮೇಕೆ ಘಟಕ, ಹಂದಿ ಸಾಕಾಣಿಕೆ ಸೌಲಭ್ಯ ಪಡೆಯುವ ಅರ್ಜಿದಾರರು ವಯಸ್ಸು 18 ರಿಂದ 60 ವರ್ಷದೊಳಗಿರಬೇಕು, ಅರ್ಜಿದಾರರ ವಾರ್ಷಿಕ ಆದಾಯ ರೂ.1.50 ಲಕ್ಷಗಳ ಒಳಗಡೆ ಇರಬೇಕು, ಅರ್ಜಿದಾರರು ಹಾಗೂ ಅವರ ಅವಲಂಬಿತ ಕುಟುಂಬ ಸದಸ್ಯರು ಸರ್ಕಾರಿ ನೌಕರಿಯಲ್ಲಿರಬಾರದು, ಅರ್ಜಿದಾರರು ಹಾಗೂ ಅವರ ಅವಲಂಬಿತ ಕುಟುಂಬ ಸದಸ್ಯರು ಯಾವುದೇ ಯೋಜನೆಯಡಿ ಈ ಹಿಂದೆ ಯಾವುದೇ ಇಲಾಖೆ/ನಿಗಮದಿಂದ ಸೌಲಭ್ಯವನ್ನು ಪಡೆದಿರಬಾರದು, ಪಡೆದ ಘಟಕ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳುವ ಬಗ್ಗೆ ಪ್ರಮಾಣ ಪತ್ರ ನೀಡಬೇಕು, ಅರ್ಜಿದಾರರು ಬಿಪಿಎಲ್ ಮತ್ತು ಆಧಾರ್ ಕಾರ್ಡ್ ಹೊಂದಿರಬೇಕು, ಹೈನುಗಾರಿಕೆ ಮತ್ತು ಕುರಿ, ಮೇಕೆ ಘಟಕಗಳನ್ನು ಮಹಿಳೆಯವರಿಗೆ ಮಾತ್ರ ನೀಡಲಾಗುವುದು, ಸರಕು ಸಾಗಾಣಿಕೆ ವಾಹನ ಪಡೆಯುವ ಅರ್ಜಿದಾರರ ವಯಸ್ಸು 18 ರಿಂದ 45 ವರ್ಷದೊಳಗಿರಬೇಕು, ಸರಕು ಸಾಗಾಣಿಕೆ ವಾಹನ ಪಡೆಯುವ ಅರ್ಜಿದಾರರು ಡ್ರೈವಿಂಗ್ ಲೈಸೆನ್ಸ್(ಲಘು/ಭಾರಿ)ಹೊಂದಿರಬೇಕು, ಸರಕು ಸಾಗಾಣಿಕೆ ವಾಹನ ಪಡೆಯುವ ಅರ್ಜಿದಾರರ ವಾರ್ಷಿಕ ಆದಾಯ ಗ್ರಾಮೀಣ ಪ್ರದೇಶವಾದಲ್ಲಿ ರೂ.1.50ಲಕ್ಷ ಹಾಗೂ ನಗರ ಪ್ರದೇಶವಾದಲ್ಲಿ ರೂ.2 ಲಕ್ಷ ಮಿತಿಯೊಳಗಿರಬೇಕು ಎಂದು ಸಹಾಯಕ ನಿರ್ದೇಶಕರು (ಗ್ರೇಡ್ 1) ಸಮಾಜ ಕಲ್ಯಾಣ ಇಲಾಖೆ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

9 hours ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

16 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

1 day ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

2 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

2 days ago