Advertisement
ಸುದ್ದಿಗಳು

ಪರಿಶಿಷ್ಟ ಪಂಗಡದ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

Share

ಮಂಗಳೂರು : 2018-19ನೇ ಸಾಲಿನಲ್ಲಿ  ವಿಶೇಷ ಕೇಂದ್ರೀಯ ನೆರವಿನಡಿ ಪರಿಶಿಷ್ಟ ಪಂಗಡವರ ಅಭಿವೃದ್ಧಿ ಕಾರ್ಯಕ್ರಮಗಳಡಿ ಫಲಾನುಭವಿ ಆಧಾರಿತ ಕಾರ್ಯಕ್ರಮಗಳಾದ ಹೈನುಗಾರಿಕೆ, ಹಸು/ಎಮ್ಮೆ ಕರು ಘಟಕ, ಕುರಿ/ಮೇಕೆ ಘಟಕ, ಸರಕು ಸಾಗಾಣಿಕೆ ವಾಹನ, ಹಂದಿ ಸಾಕಾಣಿಕೆ ಸೌಲಭ್ಯ ಪಡೆಯಲು ಷರತ್ತಿಗೊಳಪಟ್ಟು ಆಸಕ್ತ ಅರ್ಜಿದಾರರಿಂದ ನಿಗದಿತ ನಮೂನೆಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ಆದ್ದರಿಂದ ಮೂಲನಿವಾಸಿ ಮತ್ತು ಅರಣ್ಯ ಅವಲಂಭಿತ ಪರಿಶಿಷ್ಟ ವರ್ಗದವರು ನಿಗಧಿತ ನಮೂನೆಯ ಅರ್ಜಿಯನ್ನು ಸಹಾಯಕ ನಿರ್ದೇಶಕರು, (ಗ್ರೇಡ್-1) ಸಮಾಜ ಕಲ್ಯಾಣ ಇಲಾಖೆ, ರಸಿಕ್ ಚೇಂಬರ್ಸ್, 3ನೇ ಮಹಡಿ, ಮಾರ್ಕೆಟ್ ರೋಡ್, ಮಂಗಳೂರು ಈ ಕಚೇರಿಯಿಂದ ಪಡೆದು, ಅರ್ಜಿಯನ್ನು ಭರ್ತಿ ಮಾಡಿ ಸೂಕ್ತ ದಾಖಲಾತಿಗೊಂದಿಗೆ ಸೆಪ್ಟಂಬರ್ 16ರೊಳಗಾಗಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ಷರತ್ತುಗಳು ಇಂತಿವೆ:ಅರ್ಜಿದಾರರು ಕರ್ನಾಟಕದವರಾಗಿದ್ದು, ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು, ಹೈನುಗಾರಿಕೆ, ಹಸು/ಎಮ್ಮೆ ಕರು ಘಟಕ, ಕುರಿ/ಮೇಕೆ ಘಟಕ, ಹಂದಿ ಸಾಕಾಣಿಕೆ ಸೌಲಭ್ಯ ಪಡೆಯುವ ಅರ್ಜಿದಾರರು ವಯಸ್ಸು 18 ರಿಂದ 60 ವರ್ಷದೊಳಗಿರಬೇಕು, ಅರ್ಜಿದಾರರ ವಾರ್ಷಿಕ ಆದಾಯ ರೂ.1.50 ಲಕ್ಷಗಳ ಒಳಗಡೆ ಇರಬೇಕು, ಅರ್ಜಿದಾರರು ಹಾಗೂ ಅವರ ಅವಲಂಬಿತ ಕುಟುಂಬ ಸದಸ್ಯರು ಸರ್ಕಾರಿ ನೌಕರಿಯಲ್ಲಿರಬಾರದು, ಅರ್ಜಿದಾರರು ಹಾಗೂ ಅವರ ಅವಲಂಬಿತ ಕುಟುಂಬ ಸದಸ್ಯರು ಯಾವುದೇ ಯೋಜನೆಯಡಿ ಈ ಹಿಂದೆ ಯಾವುದೇ ಇಲಾಖೆ/ನಿಗಮದಿಂದ ಸೌಲಭ್ಯವನ್ನು ಪಡೆದಿರಬಾರದು, ಪಡೆದ ಘಟಕ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳುವ ಬಗ್ಗೆ ಪ್ರಮಾಣ ಪತ್ರ ನೀಡಬೇಕು, ಅರ್ಜಿದಾರರು ಬಿಪಿಎಲ್ ಮತ್ತು ಆಧಾರ್ ಕಾರ್ಡ್ ಹೊಂದಿರಬೇಕು, ಹೈನುಗಾರಿಕೆ ಮತ್ತು ಕುರಿ, ಮೇಕೆ ಘಟಕಗಳನ್ನು ಮಹಿಳೆಯವರಿಗೆ ಮಾತ್ರ ನೀಡಲಾಗುವುದು, ಸರಕು ಸಾಗಾಣಿಕೆ ವಾಹನ ಪಡೆಯುವ ಅರ್ಜಿದಾರರ ವಯಸ್ಸು 18 ರಿಂದ 45 ವರ್ಷದೊಳಗಿರಬೇಕು, ಸರಕು ಸಾಗಾಣಿಕೆ ವಾಹನ ಪಡೆಯುವ ಅರ್ಜಿದಾರರು ಡ್ರೈವಿಂಗ್ ಲೈಸೆನ್ಸ್(ಲಘು/ಭಾರಿ)ಹೊಂದಿರಬೇಕು, ಸರಕು ಸಾಗಾಣಿಕೆ ವಾಹನ ಪಡೆಯುವ ಅರ್ಜಿದಾರರ ವಾರ್ಷಿಕ ಆದಾಯ ಗ್ರಾಮೀಣ ಪ್ರದೇಶವಾದಲ್ಲಿ ರೂ.1.50ಲಕ್ಷ ಹಾಗೂ ನಗರ ಪ್ರದೇಶವಾದಲ್ಲಿ ರೂ.2 ಲಕ್ಷ ಮಿತಿಯೊಳಗಿರಬೇಕು ಎಂದು ಸಹಾಯಕ ನಿರ್ದೇಶಕರು (ಗ್ರೇಡ್ 1) ಸಮಾಜ ಕಲ್ಯಾಣ ಇಲಾಖೆ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?

2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…

51 minutes ago

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

8 hours ago

ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ

ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…

10 hours ago

ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…

10 hours ago

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?

ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…

16 hours ago

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?

“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…

22 hours ago