ಪರಿಸರದ ಕಲಿಕೆ ಅನುಭವದಿಂದ ಆಗಬೇಕು – ನಾ.ಕಾರಂತ ಪೆರಾಜೆ

July 5, 2019
8:00 PM

ಸುಳ್ಯ:  ನೀರು ಇಂಗಿಸುವಿಕೆ, ಕಾಡಿನ ರಕ್ಷಣೆ ನಮ್ಮಿಂದಾಗಬೇಕು.  ಈ ನಿಟ್ಟಿನಲ್ಲಿ ಭೂ ಒಡಲಿಗೆ ನೀರಿಂಗಿಸುವ ಕೆಲಸ ಸ್ನೇಹಶಾಲಾ ವಿದ್ಯಾರ್ಥಿಗಳಿಂದ ಆಗುತ್ತಿರುವುದು ಶ್ಲಾಘನೀಯ. ಪರಿಸರದ ಕಲಿಕೆ ಅನುಭವದಿಂದಾಗಬೇಕು. ಆ ಕೆಲಸ ಸ್ನೇಹ ಶಾಲೆಯಲ್ಲಿ ಆಗುತ್ತಿದೆ. ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳು ನಡೆಯುತ್ತಿರುವುದು ಪ್ರತಿಯೊಬ್ಬರ ವೈಯಕ್ತಿಕ ಬೆಳವಣಿಗೆಗೆ ಅಗತ್ಯ ಎಂದು ಅಡಿಕೆ ಪತ್ರಿಕೆಯ ಸಹಾಯಕ ಸಂಪಾದಕ , ಅಂಕಣಕಾರ  ನಾ.ಕಾರಂತ ಪೆರಾಜೆ ಹೇಳಿದರು.

ಅವರು  ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಸ್ನೇಹಶಿಲಾ ಪತ್ರಿಕಾ ಬಿಡುಗಡೆ ಹಾಗೂ ವಿವಿಧ ಸಂಘಗಳ ಉದ್ಘಾಟನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.  ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಸಂಸ್ಥೆಯ ಅಧ್ಯಕ್ಷ  ಡಾ. ಚಂದ್ರಶೇಖರ ದಾಮ್ಲೆ ಮಾತನಾಡಿ ನಿರಂತರ ಚಟುವಟಿಕೆಯ ಮೂಲಕ ತನ್ನನ್ನು ತಾನೇ ರೂಪಿಸಿಕೊಳ್ಳಬೇಕು. ಇಂದು ಜಲದ ಉಳಿವಿಗೆ ಹರಿವ ನೀರನ್ನು ನಿಲ್ಲಿಸಿ, ನಿಂತ ನೀರನ್ನು ಇಂಗಿಸುವ ಕೆಲಸ ನಿರಂತರವಾಗಿ ಸಾಗಬೇಕು ಎಂದರು.

ವೇದಿಕೆಯಲ್ಲಿ ಉಪಸ್ಥಿತರಿದ್ದ ಸಂಸ್ಥೆಯ ಮುಖ್ಯೋಪಾಧ್ಯಾಯಿನಿ  ಜಯಲಕ್ಷ್ಮಿ ದಾಮ್ಲೆ ಪ್ರಾಸ್ತಾವಿಕ ನುಡಿಗಳೊಂದಿಗೆ ಸ್ವಾಗತಿಸಿದರು. ಸಂಸ್ಥೆಯ ಹಿರಿಯ ವಿದ್ಯಾರ್ಥಿ ಅಕ್ಷರ ಸಿ. ದಾಮ್ಲೆ ಅತಿಥಿಗಳ ಕಿರು ಪರಿಚಯ ಮಾಡಿದರು. ಶಿಕ್ಷಕಿ ಕುಮಾರಿ ಪ್ರತಿಮಾ ಕೆ.ಎಸ್ ವಂದಿಸಿದರು. ಶಿಕ್ಷಕಿ ಸವಿತಾ ಎಂ ನಿರೂಪಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪುತ್ತೂರು ಸುಳ್ಯ ತಾಲೂಕಿನ ಹಲವೆಡೆ ಗುಡುಗು ಸಹಿತ ಮಳೆ
February 25, 2026
5:38 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 25-02-2026 | ಕರಾವಳಿ ಮತ್ತು ಮಲೆನಾಡಿನಲ್ಲಿ ತುಂತುರು ಮಳೆ ಸಾಧ್ಯತೆ | ಫೆ.27 ರಿಂದ ಬಿಸಿಲು ಹೆಚ್ಚಳದ ಸೂಚನೆ
February 25, 2026
2:08 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 24-02-2026 | ತುಂತುರು ಮಳೆ, ಮೋಡದ ವಾತಾವರಣ ಮುಂದುವರಿಕೆ | ಮಾರ್ಚ್ ಮೊದಲ ವಾರದಿಂದ ಬಿಸಿಲು ಹೆಚ್ಚಳ ಸಾಧ್ಯತೆ
February 24, 2026
2:05 PM
by: ಸಾಯಿಶೇಖರ್ ಕರಿಕಳ
ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಭಜನಾ ಮಂಡಳಿ ಉದ್ಘಾಟನೆ
February 24, 2026
6:51 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror