ಸುಳ್ಯ: ನೀರು ಇಂಗಿಸುವಿಕೆ, ಕಾಡಿನ ರಕ್ಷಣೆ ನಮ್ಮಿಂದಾಗಬೇಕು. ಈ ನಿಟ್ಟಿನಲ್ಲಿ ಭೂ ಒಡಲಿಗೆ ನೀರಿಂಗಿಸುವ ಕೆಲಸ ಸ್ನೇಹಶಾಲಾ ವಿದ್ಯಾರ್ಥಿಗಳಿಂದ ಆಗುತ್ತಿರುವುದು ಶ್ಲಾಘನೀಯ. ಪರಿಸರದ ಕಲಿಕೆ ಅನುಭವದಿಂದಾಗಬೇಕು. ಆ ಕೆಲಸ ಸ್ನೇಹ ಶಾಲೆಯಲ್ಲಿ ಆಗುತ್ತಿದೆ. ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳು ನಡೆಯುತ್ತಿರುವುದು ಪ್ರತಿಯೊಬ್ಬರ ವೈಯಕ್ತಿಕ ಬೆಳವಣಿಗೆಗೆ ಅಗತ್ಯ ಎಂದು ಅಡಿಕೆ ಪತ್ರಿಕೆಯ ಸಹಾಯಕ ಸಂಪಾದಕ , ಅಂಕಣಕಾರ ನಾ.ಕಾರಂತ ಪೆರಾಜೆ ಹೇಳಿದರು.
ಅವರು ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಸ್ನೇಹಶಿಲಾ ಪತ್ರಿಕಾ ಬಿಡುಗಡೆ ಹಾಗೂ ವಿವಿಧ ಸಂಘಗಳ ಉದ್ಘಾಟನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಸಂಸ್ಥೆಯ ಅಧ್ಯಕ್ಷ ಡಾ. ಚಂದ್ರಶೇಖರ ದಾಮ್ಲೆ ಮಾತನಾಡಿ ನಿರಂತರ ಚಟುವಟಿಕೆಯ ಮೂಲಕ ತನ್ನನ್ನು ತಾನೇ ರೂಪಿಸಿಕೊಳ್ಳಬೇಕು. ಇಂದು ಜಲದ ಉಳಿವಿಗೆ ಹರಿವ ನೀರನ್ನು ನಿಲ್ಲಿಸಿ, ನಿಂತ ನೀರನ್ನು ಇಂಗಿಸುವ ಕೆಲಸ ನಿರಂತರವಾಗಿ ಸಾಗಬೇಕು ಎಂದರು.
ವೇದಿಕೆಯಲ್ಲಿ ಉಪಸ್ಥಿತರಿದ್ದ ಸಂಸ್ಥೆಯ ಮುಖ್ಯೋಪಾಧ್ಯಾಯಿನಿ ಜಯಲಕ್ಷ್ಮಿ ದಾಮ್ಲೆ ಪ್ರಾಸ್ತಾವಿಕ ನುಡಿಗಳೊಂದಿಗೆ ಸ್ವಾಗತಿಸಿದರು. ಸಂಸ್ಥೆಯ ಹಿರಿಯ ವಿದ್ಯಾರ್ಥಿ ಅಕ್ಷರ ಸಿ. ದಾಮ್ಲೆ ಅತಿಥಿಗಳ ಕಿರು ಪರಿಚಯ ಮಾಡಿದರು. ಶಿಕ್ಷಕಿ ಕುಮಾರಿ ಪ್ರತಿಮಾ ಕೆ.ಎಸ್ ವಂದಿಸಿದರು. ಶಿಕ್ಷಕಿ ಸವಿತಾ ಎಂ ನಿರೂಪಿಸಿದರು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…