ಸುಳ್ಯ: ಪರಿಸರ ಸ್ನೇಹಿ ಗೌರಿ ಗಣೇಶ ಹಬ್ಬ ಆಚರಣೆ ಮಾಡುವ ಸಂಬಂಧ ಪ್ಲಾಸ್ಟರ್ ಆಫ್ ಪ್ಯಾರೀಸ್ ಹಾಗೂ ವಿಷಕಾರಿ ರಸಾಯನಿಕ ಬಣ್ಣ ಬಳಸಿ ತಯಾರಿಸಿರುವ ಗೌರಿ ಗಣೇಶ ಮೂರ್ತಿಗಳ ಬಳಕೆಯನ್ನು ನಿಲ್ಲಿಸುವಲ್ಲಿ ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ.
ವಿಷಕಾರಿ ರಸಾಯನಿಕ ಲೇಪಿತ ಪ್ಲಾಸ್ಟರ್ ಆಫ್ ಪ್ಯಾರೀಸ್ನಿಂದ ತಯಾರಿಸಲ್ಪಟ್ಟ ಗಣೇಶನ ಮೂರ್ತಿ ಬಳಕೆ ಮಾಡಬಾರದೆಂದು ಹಾಗೂ ಮಣ್ಣಿನಿಂದ ಮಾಡಲಾಗಿರುವ ಗಣೇಶ ವಿಗ್ರಹವನ್ನು ಸ್ಥಾಪಿಸಲು ಸೂಚಿಸಲಾಗಿದೆ. ಎಲೆ, ಹೂವುಗಳಿಂದ ಮಾಡಿದ ನೈಸರ್ಗಿಕ ಬಣ್ಣ ಹಚ್ಚಿದ ಗೌರಿ ಗಣಪನನ್ನೇ ಪೂಜಿಸಬೇಕು. ಸಾಮೂಹಿಕವಾಗಿ ನಡೆಸುವ ಗಣೇಶನ ಚಪ್ಪರಕ್ಕೆ ಪರಿಸರ ಸ್ನೇಹಿ ವಸ್ತುಗಳನ್ನೇ ಬಳಸಲು, ಎಲ್ಲೂ ಪ್ಲಾಸ್ಟಿಕ್ ವಸ್ತುಗಳ ಬಳಕೆ ಮಾಡುವುದು ನಿಲ್ಲಿಸಬೇಕು. ಬಾವಿ, ಕೆರೆ, ಹೊಳೆಗಳಲ್ಲಿ ಗಣಪತಿ ವಿಸರ್ಜನೆ ಮಾಡಬಾರದೆಂದು, ಹಾಗೆ ಮಾಡಿದ್ದಲ್ಲಿ, ಅಂತರ್ಜಲ, ಕುಡಿಯುವ ನೀರಿನ ಸೆಲೆ-ಎಲ್ಲವೂ ಮಲಿನಗೊಳ್ಳುತ್ತದೆಂದು ಎಂದು ಸೂಚನೆ ನೀಡಲಾಗಿದೆ.
ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…
"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…
ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…